ಸಿಎಂ ಅರವಿಂದ ಕೇಜ್ರಿವಾಲ್ 
ದೇಶ

ಲೆಫ್ಟಿನೆಂಟ್ ಗವರ್ನರ್ ಆದೇಶದಿಂದ ದೆಹಲಿಗರಿಗೆ ದೊಡ್ಡ ಸಮಸ್ಯೆ: ಸಿಎಂ ಅರವಿಂದ್ ಕೇಜ್ರಿವಾಲ್ ಅಸಮಾಧಾನ

ದೆಹಲಿಯಲ್ಲಿ ದೆಹಲಿ ನಿವಾಸಿಗಳಿಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯಬೇಕು ಎಂಬ ಕಾರಣದಿಂದ ಆಸ್ಪತ್ರೆಗಳನ್ನು ಮೀಸಲಿಡುವ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿರುವ ದೆಹಲಿ ಲೆಫ್ಚಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ನಿರ್ಧಾರದಿಂದ ದೆಹಲಿ ನಿವಾಸಿಗಳಿಗೆ ದೊಡ್ಡ ಪ್ರಮಾಣದ ತೊಂದರೆಯಾಗಲಿದೆ ಎಂದು ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ದೆಹಲಿ ನಿವಾಸಿಗಳಿಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯಬೇಕು ಎಂಬ ಕಾರಣದಿಂದ ಆಸ್ಪತ್ರೆಗಳನ್ನು ಮೀಸಲಿಡುವ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿರುವ ದೆಹಲಿ ಲೆಫ್ಚಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ನಿರ್ಧಾರದಿಂದ ದೆಹಲಿ ನಿವಾಸಿಗಳಿಗೆ ದೊಡ್ಡ ಪ್ರಮಾಣದ ತೊಂದರೆಯಾಗಲಿದೆ ಎಂದು ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅತ್ತ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಆದೇಶ ಹೊರ ಬೀಳುತ್ತಿದ್ದಂತೆಯೇ ಇತ್ತ ಟ್ವಿಟರ್ ನಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅರವಿಂದ್ ಕೇಜ್ರಿವಾಲ್ ಅವರು, ಅನಿಲ್ ಬೈಜಾಲ್ ಅವರ ಆದೇಶದಿಂದ ದೆಹಲಿಯಲ್ಲಿ ದೊಡ್ಡ ಮಟ್ಟದ ಸಮಸ್ಯೆ ಉಲ್ಬಣಗೊಳ್ಳಲಿದೆ. ದೆಹಲಿಯಲ್ಲಿ ದೆಹಲಿ ನಿವಾಸಿಗಳೇ ಚಿಕಿತ್ಸೆಗೆ ಪರದಾಡಬೇಕಾಗುತ್ತದೆ. ದೇಶದ ಎಲ್ಲ ನಾಗರಿಕರಿಗೂ ದೆಹಲಿಯಲ್ಲಿ ಚಿಕಿತ್ಸೆ ನೀಡುವುದು ದೊಡ್ಡ ಸಮಸ್ಯೆ ತಂದೊಡ್ಡುತ್ತದೆ.  ಬಹುಶಃ ದೇಶದ ಎಲ್ಲ ಭಾಗದ ನಿವಾಸಿಗಳಿಗೂ ಸೇವೆ ಸಲ್ಲಿಸಬೇಕು ಎಂಬುದು ಭಗವಂತನ ನಿರ್ಣಯವಾಗಿರಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಕೆಲವೇ ಗಂಟೆಗಳ ಮುನ್ನ  ದೆಹಲಿಯಲ್ಲಿ ದೆಹಲಿ ನಿವಾಸಿಗಳಿಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯಬೇಕು ಎಂಬ ಕಾರಣದಿಂದ ಆಸ್ಪತ್ರೆಗಳನ್ನು ಮೀಸಲಿಡುವ ಕೇಜ್ರಿವಾಲ್ ಸರ್ಕಾರದ ನಿರ್ಧಾರಕ್ಕೆ ಲೆಫ್ಟಿನೆಂಟ್ ಗವರ್ನರ್  ತಡೆ ನೀಡಿದ್ದು, ದೆಹಲಿಯಲ್ಲಿ ಪ್ರತೀಯೊಬ್ಬರಿಗೂ ಚಿಕಿತ್ಸೆ ದೊರೆಯಬೇಕು ಎಂದು ಹೇಳಿದ್ದರು. ಅಲ್ಲದೆ ಈ ಸಂಬಂಧ ದೆಹಲಿ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದರು. 

ಮಾರಕ ಕೊರೋನಾ ವೈರಸ್ ದೆಹಲಿಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ವ್ಯಾಪಕ ಕೊರತೆ ಎದುರಾಗಿತ್ತಿದೆ. ಇದೇ ಕಾರಣಕ್ಕೆ ಈ ಹಿಂದೆ ದೆಹಲಿ ಸರ್ಕಾರ ಅಲ್ಪ ಪ್ರಮಾಣದ ಸೋಂಕು ಮತ್ತು ಕೊರೋನಾ ಲಕ್ಷಣ ರಹಿತ ಸೋಂಕಿತರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಹೋಮ್ ಕ್ವಾರಂಟೈನ್ ನಲ್ಲಿರಿಸಿ ಚಿಕಿತ್ಸೆ ಪಡೆಯುವಂತೆ ಸೂಚಿಸಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಕೇಜ್ರಿವಾಲ್ ಸರ್ಕಾರ ದೆಹಲಿ ನಿವಾಸಿಗಳಿಗೆಂದೇ ಆಸ್ಪತ್ರೆಗಳನ್ನು ಮೀಸಲಿಟ್ಟಿದ್ದು, ಇತರ ರಾಜ್ಯಗಳ ರೋಗಿಗಳನ್ನು ನಿರ್ಬಂಧಿಸುವ ಕಾರ್ಯಕ್ಕೆ ಮುಂದಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT