ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಕೊವಿಡ್ ಕೇರ್ ಸೆಂಟರ್ ನಿಂದ ಇಬ್ಬರು ಪಾಸಿಟಿವ್ ಕೈದಿಗಳು ಪರಾರಿ

ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿ ಇತ್ತೀಚಿಗಷ್ಟೇ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದ ಇಬ್ಬರು ಕೈದಿಗಳು ಕೊವಿಡ್ ಕೇರ್ ಸೆಂಟರ್ ನಿಂದ ತಪ್ಪಿಸಿಕೊಂಡಿದ್ದಾರೆ ಎಂದು ಸೋಮವಾರ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಔರಂಗಬಾದ್: ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿ ಇತ್ತೀಚಿಗಷ್ಟೇ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದ ಇಬ್ಬರು ಕೈದಿಗಳು ಕೊವಿಡ್ ಕೇರ್ ಸೆಂಟರ್ ನಿಂದ ತಪ್ಪಿಸಿಕೊಂಡಿದ್ದಾರೆ ಎಂದು ಸೋಮವಾರ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಈ ಇಬ್ಬರು ಕೈದಿಗಳು ಭಾನುವಾರ ತಡ ರಾತ್ರಿ ಕಿಟಕಿಯ ಗ್ರಿಲ್‌ಗಳನ್ನು ಬಾಗಿಸಿ ಬೆಡ್‌ಶೀಟ್‌ಗಳನ್ನು ಹಗ್ಗಗಳಂತೆ ಕಟ್ಟಿ ತಮ್ಮ ಕೋಣೆಯಿಂದ ಕೆಳಗಿಳಿದು ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಜೈಲಿನ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ಬೇಗಂಪುರ ಪೊಲೀಸ್ ಠಾಣೆಯಲ್ಲಿ ಕೈದಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ. ಅಲ್ಲದೆ ಕೈದಿಗಳ ಪತ್ತೆಗಾಗಿ ತಂಡ ರಚಿಸಲಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ತಪ್ಪಿಸಿಕೊಂಡ ಈ ಇಬ್ಬರು ಕೈದಿಗಳು ಸೇರಿದಂತೆ ಹರ್ಸುಲ್ ಜೈಲಿನ 29 ವಿಚಾರಣಾಧೀನ ಕೈದಿಗಳಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಬಳಿಕ ಈ ಎಲ್ಲಾ ಕೈದಿಗಳನ್ನು ಚಿಕಿತ್ಸೆಗಾಗಿ ಕೊವಿಡ್ ಕೇರ್ ಸೆಂಟರ್ ಗೆ ಕಳುಹಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT