ಸಂಗ್ರಹ ಚಿತ್ರ 
ದೇಶ

ಭಾರತೀಯ ವಸ್ತು ನಮ್ಮ ಹೆಮ್ಮೆ: ಚೀನಾ ವಸ್ತು ಬಹಿಷ್ಕರಿಸಲು ಶುರುವಾಯ್ತು ಆಂದೋಲನ, ಆಮದು ನಿಲ್ಲಿಸಲು 3000 ವಸ್ತುಗಳ ಪಟ್ಟಿ ಸಿದ್ಧ!

ಚೀನಾದಿಂದ ಭಾರತಕ್ಕೆ ಆಮದು ಮಾಡಿಕೊಳ್ಳುತ್ತಿದ್ದ ಸಿದ್ಧ ವಸ್ತುಗಳನ್ನು ಬಹಿಷ್ಕರಿಸಲು ಆಂದೋಲನವೊಂದು ಇದೀಗ ಆರಂಭಗೊಂಡಿದೆ. ಚೀನಾದಿಂದ ಆಮದು ಮಾಡಿಕೊಳ್ಳುತ್ತಿದ್ದ ವಸ್ತುಗಳನ್ನು ಬಹಿಷ್ಕರಿಸಲು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ನಿರ್ಧರಿಸಿದ್ದು, ಈಗಾಗಲೇ ಆಮದು ನಿಲ್ಲಿಸಲು 3000ವಸ್ತುಗಳ ಪಟ್ಟಿಯೊಂದನ್ನು ಸಿದ್ಧಪಡಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ನವದೆಹಲಿ: ಚೀನಾದಿಂದ ಭಾರತಕ್ಕೆ ಆಮದು ಮಾಡಿಕೊಳ್ಳುತ್ತಿದ್ದ ಸಿದ್ಧ ವಸ್ತುಗಳನ್ನು ಬಹಿಷ್ಕರಿಸಲು ಆಂದೋಲನವೊಂದು ಇದೀಗ ಆರಂಭಗೊಂಡಿದೆ. ಚೀನಾದಿಂದ ಆಮದು ಮಾಡಿಕೊಳ್ಳುತ್ತಿದ್ದ ವಸ್ತುಗಳನ್ನು ಬಹಿಷ್ಕರಿಸಲು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ನಿರ್ಧರಿಸಿದ್ದು, ಈಗಾಗಲೇ ಆಮದು ನಿಲ್ಲಿಸಲು 3000ವಸ್ತುಗಳ ಪಟ್ಟಿಯೊಂದನ್ನು ಸಿದ್ಧಪಡಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಭಾರತೀಯರು ಚೀನಾದ ವಸ್ತುಗಳಿಲ್ಲದೆ ಬದುಕಲು ಸಾಧ್ಯವಿಲ್ಲ ಎಂದು ಇತ್ತೀಚೆಗೆ ಚೀನಾದ ಪತ್ರಿಯೊಂದು ವರದಿ ಮಾಡಿತ್ತು. ಇದರ ಬೆನ್ನಲ್ಲೇ ದೇಶದ ಸ್ವಾಭಿಮಾನವನ್ನು ಎತ್ತಿಹಿಡಿಯಲು ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಗಡಿಯಲ್ಲಿ ಚೀನಾದ ಉದ್ಧಟತನ ಹೆಚ್ಚುತ್ತಿರುವುದರಿಂದ ಮತ್ತು ಇತ್ತೀಚೆಗೆ ಪ್ರಧಾನಿ ಮೋದಿಯವರು ಸ್ವದೇಶಿ ವಸ್ತುಗಳನ್ನು ಬಳಸುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ ಸಿಎಐಟಿಯ ಈ ನಿರ್ಣಯ ಮಹತ್ವವನ್ನು ಪಡೆದುಕೊಂಡಿದೆ. 

ಚೀನಾ ವಸ್ತುಗಳ ಮಾರಾಟವನ್ನು ನಿಲ್ಲಿಸಲು ಒಕ್ಕೂಟವು ಭಾರತದಲ್ಲಿ ಸುಲಭವಾಗಿ ಉತ್ಪಾದಿಸಲು ಸಾಧ್ಯವಿರುವ. ಆದರೆ, ಸದ್ಯ ಚೀನಾದಿಂದ ದೊಡ್ಡ ಪ್ರಮಾಣದಲ್ಲಿ ಆಮದು ಮಾಡಿಕೊಂಡು ಮಾರುತ್ತಿರುವ ಸುಮಾರು 3000 ವಸ್ತುಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಒಕ್ಕೂಟದಲ್ಲಿ ದೇಶದ 7 ಕೋಟಿ ವ್ಯಾಪಾರಿಗಳಿದ್ದು, 40 ಸಾವಿರ ವ್ಯಾಪಾರಿ ಸಂಘಗಳು ಸದಸ್ಯರಾಗಿವೆ. ಇವರೆಲ್ಲರೂ ಚೀನಿ ವಸ್ತುಗಳ ಮಾರಾಟ ನಿಲ್ಲಿಸಿದರೆ ಸ್ವದೇಶಿ ಆಂದೋಲನಕ್ಕೆ ದೊಡ್ಡ ಬೆಂಬಲ ಸಿಗಲಿದೆ. 

ಈ ಕುರಿತು ವಿವರ ನೀಡಿದ ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್, ನಮ್ಮ ಆಂದೋಲನಕ್ಕೆ ಭಾರತದ ವಸ್ತು ನಮ್ಮ ಹೆಮ್ಮೆ ಎಂದು ಹೆಸರಿಡಲಾಗಿದೆ. ಈ ಆಂದೋಲನದ ಮೂಲಕ ಡಿಸೆಂಬರ್ 2021ರ ವೇಳೆಗೆ ರೂ.1 ಲಕ್ಷ ಕೋಟಿ ಮೌಲ್ಯದ ವಸ್ತುಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುವುದನ್ನು ತಡೆಯುವ ಸಂಕಲ್ಪ ಮಾಡಿದ್ದೇವೆ. ಚೀನಾದಿಂದ ಸದ್ಯ ಸಿದ್ಧ ವಸ್ತುಗಳು, ಕಚ್ಚಾವಸ್ತುಗಳು, ಬಿಡಿ ಭಾಗಗಳು ಹಾಗೂ ತಾಂತ್ರಿಕ ಉತ್ಪನ್ನಗಳು ಹೀಗೆ ಮುಖ್ಯವಾಗಿ ನಾಲ್ಕು ವಿಧದ ಉತ್ಪನ್ನಗಳು ಭಾರತಕ್ಕೆ ಆಮದಾಗುತ್ತಿವೆ. ಮೊದಲ ಹಂತದಲ್ಲಿ ನಾವು ಸಿದ್ಧ ವಸ್ತುಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT