ಸಾಂಕೇತಿಕ ಚಿತ್ರ​ 
ದೇಶ

ಸ್ಥಳೀಯ ವಿವಾದ ಕಾರಣ ನೇಪಾಳಿ ಪೊಲೀಸರಿಂದ ಗುಂಡಿನ ದಾಳಿ; ಎಸ್ಎಸ್ ಬಿ ಮಹಾ ನಿರ್ದೇಶಕರ ಸ್ಪಷ್ಟನೆ

ಭಾರತ-ನೇಪಾಳ ಗಡಿಯ ಸೀತಾಮಾರ್ಹಿ ಜಿಲ್ಲೆಯಲ್ಲಿ ನಡೆದಿರುವ ಗುಂಡಿನ ದಾಳಿ ಘಟನೆ ನೇಪಾಳ ಭೂ ಪ್ರದೇಶ ವ್ಯಾಪ್ತಿಯೊಳಗೆ ನಡೆದಿರುವ ಸ್ಥಳೀಯ ವಿಷಯವಾಗಿದೆ ಎಂದು ಸಹಸ್ತ್ರ ಸೀಮಾ ಬಲ್ (ಎಸ್‌ಎಸ್ ಬಿ) ಮಹಾ ನಿರ್ದೇಶಕ ಕುಮಾರ್ ರಾಜೇಶ್ ಚಂದ್ರ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ಭಾರತ-ನೇಪಾಳ ಗಡಿಯ ಸೀತಾಮಾರ್ಹಿ ಜಿಲ್ಲೆಯಲ್ಲಿ ನಡೆದಿರುವ ಗುಂಡಿನ ದಾಳಿ ಘಟನೆ ನೇಪಾಳ ಭೂ ಪ್ರದೇಶ ವ್ಯಾಪ್ತಿಯೊಳಗೆ ನಡೆದಿರುವ ಸ್ಥಳೀಯ ವಿಷಯವಾಗಿದೆ ಎಂದು ಸಹಸ್ತ್ರ ಸೀಮಾ ಬಲ್ (ಎಸ್‌ಎಸ್ ಬಿ) ಮಹಾ ನಿರ್ದೇಶಕ ಕುಮಾರ್ ರಾಜೇಶ್ ಚಂದ್ರ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಸ್ಥಳದಿಂದ ಬಂದಿರುವ ವರದಿಗಳ ಪ್ರಕಾರ, ಘಟನೆ ಸಂಪೂರ್ಣವಾಗಿ ಸ್ಥಳೀಯ ವಿಷಯವಾಗಿದ್ದು, ಭಾರತದ ಕಡೆಯ ಜಾನಕಿ ನಗರ ಗ್ರಾಮದ ಗಡಿಯ ನಿವಾಸಿಗಳು ಮತ್ತು ನೇಪಾಳ ಪೊಲೀಸ್ ಸಿಬ್ಬಂದಿಗಳ ನಡುವೆ ಇಂದು ಬೆಳಿಗ್ಗೆ ನಡೆದ ಗಲಾಟೆಯ ನಂತರ ಈ ಘಟನೆ  ನಡೆದಿದೆ ಎಂದು ಚಂದ್ರ ಹೇಳಿದ್ದಾರೆ.

ಜಾನಕಿ ನಗರದ ಕುಟುಂಬವೊಂದರಲ್ಲಿ ವಿವಾಹವಾಗಿದ್ದ ಮಹಿಳೆ ನೇಪಾಳ ಕಡೆಯಿಂದ ಕೆಲವು ಸಂಬಂಧಿಕರೊಂದಿಗೆ ತನ್ನ ಅತ್ತೆಯ ಮನೆಗೆ ಆಗಮಿಸುತ್ತಿದ್ದರು. ನೇಪಾಳದಲ್ಲಿ ಕೋವಿಡ್ ನಿರ್ಬಂಧಗಳು ಜಾರಿಯಲ್ಲಿದ್ದು, ಜನರು ಗುಂಪುಗೂಡದಂತೆ ಪೊಲೀಸರು ಸೂಚಿಸಿದ್ದಾರೆ. ಇದರಿಂದ ಜಾನಕಿ ನಗರ ನಿವಾಸಿಗಳು ಹಾಗೂ ನೇಪಾಳ ಪೊಲೀಸರ ನಡುವೆ ಗಲಾಟೆಗೆ ಕಾರಣವಾಗಿ ಕೊನೆಗೆ ಗುಂಡು ಹಾರಿಸುವ ಹಂತಕ್ಕೆ ತಲುಪಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT