ಪಳನಿಸ್ವಾಮಿ 
ದೇಶ

ಚೆನ್ನೈನಲ್ಲಿ ಸಂಪೂರ್ಣ ಲಾಕ್ ಡೌನ್ ಇಲ್ಲ: ವದಂತಿ ತಳ್ಳಿಹಾಕಿದ ತಮಿಳುನಾಡು ಸರ್ಕಾರ

ಚೆನ್ನೈ ನಗರವನ್ನು ಸಂಪೂರ್ಣ ಲಾಕ್ ಡೌನ್ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ತಮಿಳುನಾಡು ಸರ್ಕಾರ ವಾಟ್ಸ್ ಆ್ಯಪ್ ವದಂತಿಗೆ ಶುಕ್ರವಾರ ತೆರೆ ಎಳೆದಿದೆ.

ಚೆನ್ನೈ: ಚೆನ್ನೈ ನಗರವನ್ನು ಸಂಪೂರ್ಣ ಲಾಕ್ ಡೌನ್ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ತಮಿಳುನಾಡು ಸರ್ಕಾರ ವಾಟ್ಸ್ ಆ್ಯಪ್ ವದಂತಿಗೆ ಶುಕ್ರವಾರ ತೆರೆ ಎಳೆದಿದೆ.

ಚೆನ್ನೈ ನಗರದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಹಾಮಾರಿಯನ್ನು ನಿಯಂತ್ರಿಸಲು ಸಂಪೂರ್ಣ ಲಾಕ್ ಡೌನ್ ಏಕೆ ಮಾಡಬಾರದು? ಎಂದು ಮದ್ರಾಸ್ ಹೈಕೋರ್ಟ್ ನಿನ್ನೆ ತಮಿಳುನಾಡು ಸರ್ಕಾರವನ್ನು ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ನಗರವನ್ನು ಮತ್ತೆ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ ಎಂಬ ಸಂದೇಶಗಳು ವಾಟ್ಸ್ ಆ್ಯಪ್ ನಲ್ಲಿ ಹರಿದಾಡುತ್ತಿದ್ದವು.

ಇಂದು ಸೇಲಂನಲ್ಲಿ ಚೆನ್ನೈ ಲಾಕ್ ಡೌನ್ ಮಾಡುವ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು, ಅಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.

ಇದೇ ವೇಳೆ ವದಂತಿ ಹಬ್ಬಿಸುತ್ತಿರುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT