ದೇಶ

ಜಮ್ಮು-ಕಾಶ್ಮೀರ: ಲಷ್ಕರ್ ಎ ತೊಯ್ಬಾ ಉಗ್ರ ಬಂಧನ, ಶಸ್ತ್ರಾಸ್ತ್ರ ವಶ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಮುಂದುವರಿದಿದೆ.ಇಂದು ನಸುಕಿನ ವೇಳೆ ನಡೆದ ದಾಳಿಯಲ್ಲಿ ಲಷ್ಕರ್ ಎ ತೊಯ್ಬಾದ ಓರ್ವ ಉಗ್ರ ಸಿಕ್ಕಿಬಿದ್ದಿದ್ದಾನೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಮುಂದುವರಿದಿದೆ.
ಇಂದು ನಸುಕಿನ ವೇಳೆ ನಡೆದ ದಾಳಿಯಲ್ಲಿ ಲಷ್ಕರ್ ಎ ತೊಯ್ಬಾದ ಓರ್ವ ಉಗ್ರ ಸಿಕ್ಕಿಬಿದ್ದಿದ್ದಾನೆ. ಉಗ್ರನನ್ನು ಮೊಹಮ್ಮದ್ ಯೂಸಫ್ ಖಾನ್ ನ ಪುತ್ರ ಜಾಕಿರ್ ಖಾನ್ ಎಂದು ಗುರುತಿಸಲಾಗಿದ್ದು ಶೋಪಿಯಾನ್ ನಿವಾಸಿಗಳಾಗಿದ್ದಾರೆ.

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕೊಜಪುರದಲ್ಲಿ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ ಪಡೆ ಯೋಧರು ಬಂಧಿಸಿದ್ದಾರೆ. ಆತನ ಬಳಿಯಿಂದ 9ಎಂಎಂ ಪಿಸ್ತೂಲ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಉಗ್ರ ಸಂಬಂಧಿ ಚಟುವಟಿಕೆಗಳಲ್ಲಿ ಜಾಕಿರ್ ಭಾಗಿಯಾಗಿದ್ದಾನೆ ಎಂದು ನಿಖರ ಮಾಹಿತಿ ಪಡೆದ ಪೊಲೀಸರು ಖೊಜ್ ಪುರ ರೆಬಾನ್ ಗ್ರಾಮದಲ್ಲಿ ದಾಳಿ ನಡೆಸಿದರು. ಇತ್ತೀಚೆಗೆ ಆತ ಉಗ್ರ ಪಡೆಗೆ ಸೇರಿದ್ದು ಅದರಲ್ಲಿ ಸಕ್ರಿಯನಾಗಲು ಹೊರಟಿದ್ದ.

ಈ ಸಂಬಂಧ ಪೊಲೀಸರು ಕೇಸು ದಾಖಲಿಸಿ ಹೆಚ್ಚಿನ ವಿಚಾರಣೆ ನಡೆಯಬೇಕಿದೆ. ಈ ವರ್ಷ 20ಕ್ಕೂ ಹೆಚ್ಚು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT