ಅನುರಾಗ್ ಶ್ರೀವಾಸ್ತವ್ - ನೇಪಾಳ ಸಂಸತ್ 
ದೇಶ

ಕೃತಕ ಗಡಿ ವಿಸ್ತರಣೆ ಒಪ್ಪಲಾಗದು: ನೇಪಾಳದ ನೂತನ ನಕ್ಷೆಗೆ ಭಾರತ ತಿರುಗೇಟು

ಮೂರು ಭಾರತೀಯ ಭೂ ಪ್ರದೇಶಗಳಾದ ಲಿಂಪಿಯಧುರ, ಲಿಪುಲೇಖ್ ಹಾಗೂ ಕಾಲಾಪಾನಿ ಒಳಗೊಂಡ ಪರಿಷ್ಕೃತ ರಾಜಕೀಯ ಭೂಪಟಕ್ಕೆ ಅವಕಾಶ ಕಲ್ಪಿಸುವ ಸಂವಿಧಾನ ತಿದ್ದುಪಡಿ ವಿಧೇಯಕವನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ನೇಪಾಳಕ್ಕೆ ಭಾರತ ತೀಕ್ಷಣವಾಗಿಯೇ ಪ್ರತಿಕ್ರಿಯಿಸಿದ್ದು, ಕೃತಕ ಗಡಿ ವಿಸ್ತರಣೆ ಸಮರ್ಥನೀಯವಲ್ಲ ಮತ್ತು ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಶನಿವಾರ ಹೇಳಿದೆ.

ನವದೆಹಲಿ: ಮೂರು ಭಾರತೀಯ ಭೂ ಪ್ರದೇಶಗಳಾದ ಲಿಂಪಿಯಧುರ, ಲಿಪುಲೇಖ್ ಹಾಗೂ ಕಾಲಾಪಾನಿ ಒಳಗೊಂಡ ಪರಿಷ್ಕೃತ ರಾಜಕೀಯ ಭೂಪಟಕ್ಕೆ ಅವಕಾಶ ಕಲ್ಪಿಸುವ ಸಂವಿಧಾನ ತಿದ್ದುಪಡಿ ವಿಧೇಯಕವನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ನೇಪಾಳಕ್ಕೆ ಭಾರತ ತೀಕ್ಷಣವಾಗಿಯೇ ಪ್ರತಿಕ್ರಿಯಿಸಿದ್ದು, ಕೃತಕ ಗಡಿ ವಿಸ್ತರಣೆ ಸಮರ್ಥನೀಯವಲ್ಲ ಮತ್ತು ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಶನಿವಾರ ಹೇಳಿದೆ.

'ನೇಪಾಳದ ಪ್ರತಿನಿಧಿಗಳ ಸದನವು ಭಾರತದ ಭೂಪ್ರದೇಶದ ಭಾಗಗಳನ್ನು ಸೇರಿಸಲು ನೇಪಾಳದ ನಕ್ಷೆಯನ್ನು ಬದಲಾಯಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ ಎಂಬುದನ್ನು ನಾವು ಗಮನಿಸಿದ್ದೇವೆ. ಈ ವಿಷಯದಲ್ಲಿ ನಾವು ಈಗಾಗಲೇ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ" ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್ ಅವರು ಹೇಳಿದ್ದಾರೆ.

ಈ ಕೃತಕ ಗಡಿ ವಿಸ್ತರಣೆ ಐತಿಹಾಸಿಕ ಸಂಗತಿ ಅಥವಾ ಪುರಾವೆಗಳನ್ನು ಆಧರಿಸಿಲ್ಲ ಮತ್ತು ಇದು ಸಮರ್ಥನೀಯವಲ್ಲ. ಗಡಿ ವಿಷಯಗಳ ಕುರಿತು ಮಾತುಕತೆ ನಡೆಸುವ ನಮ್ಮ ಪ್ರಸ್ತುತ ತಿಳುವಳಿಕೆಯ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತದ ಗಡಿಯಲ್ಲಿರುವ ಲಿಪುಲೆಖ್, ಕಲಾಪಣಿ ಮತ್ತು ಲಿಂಪಿಯಾಧುರಾದ ಆಯಕಟ್ಟಿನ ಪ್ರಮುಖ ಪ್ರದೇಶಗಳ ಮೇಲೆ ನೇಪಾಳ ತನ್ನ ನೂತನ ನಕ್ಷೆ ತಿದ್ದುಪಡಿ ಮೂಲಕ ಹಕ್ಕು ಸ್ವಾಮ್ಯ ಸಾಧಿಸಲು ಯತ್ನಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT