ಸಂಗ್ರಹ ಚಿತ್ರ 
ದೇಶ

ದೆಹಲಿಯಲ್ಲಿ ತಾರಕಕ್ಕೇರಿದ ಬೆಡ್ ಗಳ ಅಭಾವ: 10 ರಿಂದ 49 ಬೆಡ್ ಗಳ ಆಸ್ಪತ್ರೆಗಳನ್ನೂ ಕೋವಿಡ್ ಆಸ್ಪತ್ರೆಗಳೆಂದು ಘೋಷಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಅಬ್ಬರ ಜೋರಾಗಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಹೊಸ ಸೋಂಕು ಪೀಡಿತರಿಗೆ ಬೆಡ್ ಗಳ ತೀವ್ರ ಕೊರತೆಯುಂಟಾಗುತ್ತಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಅಬ್ಬರ ಜೋರಾಗಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಹೊಸ ಸೋಂಕು ಪೀಡಿತರಿಗೆ ಬೆಡ್ ಗಳ ತೀವ್ರ ಕೊರತೆಯುಂಟಾಗುತ್ತಿದೆ.

ಇದೇ ಕಾರಣಕ್ಕೆ ದೆಹಲಿ ಸರ್ಕಾರ ಸೋಂಕಿತರಿಗೆ ಬೆಡ್ ಗಳನ್ನು ನೀಡುವ ಸಂಬಂಧ ಹಸಸಾಹಸ ಪಡುತ್ತಿದೆ. ಈ ಹಿಂದೆ ದೆಹಲಿಗರಿಗೆ ಮಾತ್ರ ದೆಹಲಿಯಲ್ಲಿ ಕೊರೋನಾ ಚಿಕಿತ್ಸೆ ಎಂದು ಹೇಳಿದ್ದ ಸರ್ಕಾರ ಇದೀಗ ದೆಹಲಿಯಲ್ಲಿರುವ ಸಣ್ಣ ಪುಟ್ಟ ನರ್ಸಿಂಗ್ ಹೋಮ್ ಗಳನ್ನೂ ಕೂಡ ಕೋವಿಡ್ ಆಸ್ಪತ್ರೆಗಳಾಗಿ ಬದಲಾಯಿಸುವ ನಿರ್ಧಾರ ಮಾಡಿದೆ.  ನರ್ಸಿಂಗ್ ಹೋಮ್ ಕಾಯ್ದೆಯಡಿ ಈ ನಿಯಮ ಜಾರಿಗೆ ತರಲಾಗುತ್ತಿದೆ. ನಿಯಮ ಮೀರಿದರೆ ಕಠಿಣ ಕ್ರಮ ಜರುಗಿಸುವುದಾಗಿಯೂ ದೆಹಲಿ ಸರ್ಕಾರ ಹೇಳಿದೆ.

ಮೂಲಗಳ ಪ್ರಕಾರ ದೆಹಲಿಯಲ್ಲಿರುವ 10 ರಿಂದ 49 ಬೆಡ್ ಗಳ ಎಲ್ಲ ಆಸ್ಪತ್ರೆಗಳನ್ನೂ ಕೋವಿಡ್-19 ಚಿಕಿತ್ಸೆಗಾಗಿಯೇ ಮೀಸಲಿಡುವಂತೆ ದೆಹಲಿ ಸರ್ಕಾರ ಆದೇಶಿಸಿದೆ. ನೇತ್ರಧಾಮಗಳು, ಇಎನ್ ಟಿ ಆಸ್ಪತ್ರೆಗಳು, ಡಯಾಲಿಸಿಸ್ ಕೇಂದ್ರಗಳು, ಹೆರಿಗೆ ಆಸ್ಪತ್ರೆಗಳು, ಐವಿಎಫ್ ಕೇಂದ್ರಗಳನ್ನು ಈ ನಿಯಮದಿಂದ ಹೊರತು ಪಡಿಸಲಾಗಿದೆ. 

ಕ್ರೀಡಾಂಗಣ, ಮದುವೆ ಹಾಲ್ ಗಳೂ ಕೋವಿಡ್ ಚಿಕಿತ್ಸೆಗೆ ಬಳಕೆ
ಇನ್ನು ದೆಹಲಿಯಲ್ಲಿ ಕ್ರೀಡಾಂಗಣ, ಮದುವೆ ಹಾಲ್ ಗಳನ್ನೂ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಸುಮಾರು 20 ಸಾವಿರ ಬೆಡ್ ಗಳ ಕೊರತೆ ನೀಗಿಸಲು ನಿರ್ಧರಿಸಲಾಗಿದೆ. ಈಗಾಗಲೇ ದಕ್ಷಿಣ ದೆಹಲಿಯ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಕ್ಯಾಂಪಸ್ ನಲ್ಲಿ 10 ಸಾವಿರ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲು ಆಪ್ ಸರ್ಕಾರ ಸಿದ್ಧತೆ ನಡೆಸಿದ್ದು, ಜೂನ್ ಅಂತ್ಯಕ್ಕೆ ನಿರ್ಮಾಣ ಕಾರ್ಯ ಮುಗಿಯಲಿದೆ. ಇನ್ನೂ 10 ಸಾವಿರ ಬೆಡ್ ಗಳಿಗಾಗಿ ಹೊಟೆಲ್ ಗಳು, ಕ್ರೀಡಾಂಗಣಗಳು, ಮದುವೆ ಹಾಲ್ ಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT