ಪಿಎಂ ನರೇಂದ್ರ ಮೋದಿ 
ದೇಶ

'ನಿಮ್ಮ ಸಲಹೆ,ಅಭಿಪ್ರಾಯ ನೀಡಿ',ಮನ್ ಕಿ ಬಾತ್ ನಲ್ಲಿ ಮಾತನಾಡಲು ವಿಷಯಗಳಿಗೆ ನಾಗರಿಕರನ್ನು ಕೇಳಿದ ಮೋದಿ

ತಮ್ಮ ತಿಂಗಳ ಕೊನೆಯ ಭಾನುವಾರ ಪ್ರಸಾರವಾಗುವ ಮನ್ ಕಿ ಬಾತ್ ನಲ್ಲಿ ಮಾತನಾಡಲು ಆಲೋಚನೆ ಮತ್ತು ವಿಷಯಗಳನ್ನು ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ.

ನವದೆಹಲಿ: ತಮ್ಮ ತಿಂಗಳ ಕೊನೆಯ ಭಾನುವಾರ ಪ್ರಸಾರವಾಗುವ ಮನ್ ಕಿ ಬಾತ್ ನಲ್ಲಿ ಮಾತನಾಡಲು ಆಲೋಚನೆ ಮತ್ತು ವಿಷಯಗಳನ್ನು ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ.

ಈ ತಿಂಗಳ ಮನ್ ಕಿ ಬಾತ್ ಜೂನ್ 28ಕ್ಕೆ ಪ್ರಸಾರವಾಗಲಿದೆ. ಅದಕ್ಕೆ ಇನ್ನು ಎರಡು ವಾರ ಬಾಕಿ ಇರುವಾಗಲೇ ನಿಮ್ಮ ಆಲೋಚನೆಗಳು, ವಿಷಯಗಳನ್ನು ನನ್ನ ಜೊತೆ ಹಂಚಿಕೊಳ್ಳಿ. ಇದರಿಂದ ನನಗೆ ಮತ್ತಷ್ಟು ಹೆಚ್ಚು ವಿಷಯಗಳ ಬಗ್ಗೆ ಮಾತನಾಡಲು ಕಮೆಂಟ್, ಫೋನ್ ಕಾಲ್ ಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತದೆ. ಕೋವಿಡ್-19 ಜೊತೆಗೆ ಸಾಕಷ್ಟು ಇನ್ನೂ ಹಲವು ವಿಷಯಗಳು ನಿಮ್ಮ ಬಳಿ ಇರಬಹುದು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಜನರು ಸಲಹೆ, ಅಭಿಪ್ರಾಯಗಳನ್ನು ಯಾವ ರೀತಿ ಕೊಡಬಹುದು ಎಂದು ಸಂಖ್ಯೆಯೊಂದನ್ನು ನೀಡಿದ್ದು ಅದರಲ್ಲಿ ನಾಗರಿಕರು ರೆಕಾರ್ಡ್ ಮಾಡಿರುವ ಸಂದೇಶಗಳನ್ನು ಕಳುಹಿಸಬಹುದು.ನಮೊ ಆಪ್ ಅಥವಾ ಮೈಗವರ್ಮೆಂಟ್ ಮೂಲಕ ಸಹ ಕಳುಹಿಸಬಹುದು ಎಂದಿದ್ದಾರೆ.

ಕಳೆದ ತಿಂಗಳ ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಮುಖ್ಯವಾಗಿ ಕೊರೋನಾ ವೈರಸ್ ವಿರುದ್ಧ ಹೋರಾಟ, ಕೊರೋನಾ ವಾರಿಯರ್ಸ್ ಶ್ರಮ, ಕೊರೋನಾ ಸೋಂಕಿನಿಂದ ಗುಣಮುಖರಾದವರ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT