ಎಪಿಎಸ್ ಆರ್ ಟಿಸಿ 
ದೇಶ

ಜೂನ್ 17 ರಿಂದ ಕರ್ನಾಟಕಕ್ಕೆ ಎಪಿಎಸ್‌ಆರ್‌ಟಿಸಿ ಬಸ್ ಸೇವೆ ಪುನರಾರಂಭ

ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ (ಎಪಿಎಸ್‌ಆರ್‌ಟಿಸಿ) ಜೂನ್ 17 ರಿಂದ ಕರ್ನಾಟಕಕ್ಕೆ ಬಸ್‍ ಸೇವೆಗಳನ್ನು ಪುನರಾರಂಭಿಸಲಿದೆ.

ವಿಜಯವಾಡ: ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ (ಎಪಿಎಸ್‌ಆರ್‌ಟಿಸಿ) ಜೂನ್ 17 ರಿಂದ ಕರ್ನಾಟಕಕ್ಕೆ ಬಸ್‍ ಸೇವೆಗಳನ್ನು ಪುನರಾರಂಭಿಸಲಿದೆ.

ನಿಗಮದ ಮೂಲಗಳಂತೆ, 500 ಬಸ್‌ಗಳು ನಾಲ್ಕು ಹಂತಗಳಲ್ಲಿ ಕಾರ್ಯಾಚರಣೆ ನಡೆಸಲಿವೆ. ಟಿಕೆಟ್‌ಗಳ ಆನ್‌ಲೈನ್ ಕಾಯ್ದಿರಿಸುವಿಕೆ ಇಂದಿನಿಂದಲೇ ಆರಂಭವಾಗಿದೆ. 

ಕರ್ನಾಟಕದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಲ್ಲಿ ಪ್ರತಿ ಬಸ್‌ನಿಂದ ಶೇ 5 ರಷ್ಟು ಪ್ರಯಾಣಿಕರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು.ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳಂತೆ ಬಸ್‌ಗಳು ಕಾರ್ಯನಿರ್ವಹಿಸಲಿವೆ ಎಂದು ಎಪಿಎಸ್‌ಆರ್‌ಟಿಸಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. 

ಲಾಕ್‍ಡೌನ್‍ ಘೋಷಣೆಯಾದ ನಂತರ ನಿಗಮದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಸುರಕ್ಷತಾ ಕ್ರಮಗಳೊಂದಿಗೆ ಬಸ್‍ ಸೇವೆ ಪುನರಾರಂಭಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಮಾನ ಭಾರತದ ಕಲ್ಪನೆ RSS ಕಂಗೆಡಿಸಿದೆ': ಲೋಕಸಭೆಯಲ್ಲಿ ರಾಹುಲ್ ಗಾಂಧಿ ಟೀಕೆ

ಟೆಕ್ ದೈತ್ಯ Microsoft ಮೆಗಾ ಹೂಡಿಕೆ: 'AI 1st ಫ್ಯೂಚರ್'ಗಾಗಿ 1.5 ಲಕ್ಷ ಕೋಟಿ ರೂ ಬಂಡವಾಳ, ಬೆಂಗಳೂರಿನಲ್ಲಿ AI ಘಟಕ!

ವಜಾ ಮಾಡಿದ ಸಾಲದ ಮೊತ್ತದಲ್ಲಿ ಎಷ್ಟು ಪಾಲು ಮೋದಿ ಆಪ್ತ ಸ್ನೇಹಿತರ ಕಂಪನಿಗಳಿಗೆ ಸೇರಿದೆ? ಪ್ರಧಾನಿಗಳೇ ಉತ್ತರಿಸುವಿರಾ?

'ವಂದೇ ಮಾತರಂ'ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದೇ ಅಲ್ಲ: ಖರ್ಗೆ

'ಸುಪ್ರೀಂ' ನಿವೃತ್ತ ನ್ಯಾಯಮೂರ್ತಿ ಬಿಆರ್ ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ಚಪ್ಪಲಿ ಏಟು, Video!

SCROLL FOR NEXT