ಯೋಗಿ ಆದಿತ್ಯನಾಥ್ 
ದೇಶ

ಅನಾಮಿಕ ಹಗರಣಗಳನ್ನು ತಡೆಯಲು ಯೋಗಿ ಸರ್ಕಾರದಿಂದ ಅಟೆಂಡೆನ್ಸ್ ಬೈ ಸೆಲ್ಫಿ ಅಳವಡಿಕೆ! 

ಉತ್ತರ ಪ್ರದೇಶದ ಕಸ್ತೂರಬಾ ಗಾಂಧಿ ಬಾಲಿಕ ವಿದ್ಯಾಲಯಗಳಲ್ಲಿ ’ಅನಾಮಿಕ’ ಹಗರಣಗಳನ್ನು ತಡೆಯಲು ಯೋಗಿ ಆದಿತ್ಯನಾಥ್ ಸರ್ಕಾರ ಅಟೆಂಡೆನ್ಸ್ ಬೈ ಸೆಲ್ಫಿ ಕ್ರಮ ಅಳವಡಿಕೆಗೆ ಮುಂದಾಗಿದೆ. 

ಲಖನೌ: ಉತ್ತರ ಪ್ರದೇಶದ ಕಸ್ತೂರಬಾ ಗಾಂಧಿ ಬಾಲಿಕ ವಿದ್ಯಾಲಯಗಳಲ್ಲಿ ’ಅನಾಮಿಕ’ ಹಗರಣಗಳನ್ನು ತಡೆಯಲು ಯೋಗಿ ಆದಿತ್ಯನಾಥ್ ಸರ್ಕಾರ ಅಟೆಂಡೆನ್ಸ್ ಬೈ ಸೆಲ್ಫಿ ಕ್ರಮ ಅಳವಡಿಕೆಗೆ ಮುಂದಾಗಿದೆ. 

ಶಿಕ್ಷಕಿಯೊಬ್ಬಳು ಏಕಕಾಲಕ್ಕೆ 25 ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡಿ, ಕೇವಲ 13 ತಿಂಗಳಲ್ಲಿ ಬರೋಬ್ಬರಿ ರೂ. 1 ಕೋಟಿ ವೇತನ ಪಡೆದಿರುವ ಅಚ್ಚರಿಯ ಘಟನೆ ವರದಿಯಾಗಿ ಉತ್ತರಪ್ರದೇಶದ ಕಸ್ತೂರಬಾ ಗಾಂಧಿ ಭಾಲಿಕಾ ವಿದ್ಯಾಲಯದಲ್ಲಿ ನಡೆಯುತ್ತಿರುವ ವಂಚನೆ ಬೆಳಕಿಗೆ ಬಂದಿತ್ತು. ಅಷ್ಟೇ ಅಲ್ಲದೇ ಒಂದೇ ಹೆಸರಿನಲ್ಲಿ ಬೇರೆ ಬೇರೆ ಶಿಕ್ಷಕಿಯರು ಕಾರ್ಯನಿರ್ವಹಿಸುತ್ತಿರುವುದು ವರದಿಯಾಗಿತ್ತು. ಈ ಬೆನ್ನಲ್ಲೇ ಇಂತಹ ವಂಚನೆಗಳನ್ನು ತಡೆಗಟ್ಟಲು ಯೋಗಿ ಸರ್ಕಾರ ಕ್ರಮ ಕೈಗೊಂಡಿದೆ. 

ಬೇಸಿಕ್ ಶಿಕ್ಷಾ ಅಧಿಕಾರಿ (ಬಿಎಸ್ಎ) ಗಳಿಗೆ ಕಳಿಸಲಾಗಿರುವ ಪತ್ರದಲ್ಲಿ ಸ್ಟಾಫ್ ಶಿಕ್ಷಕರು, ಶಿಕ್ಷಕರು, ವಾರ್ಡನ್ ಹಾಗೂ ಇತರ ಸಿಬ್ಬಂದಿಗಳು ಸೆಲ್ಫಿ ಕ್ಲಿಕ್ಕಿಸಿ ಪ್ರೇರಣಾ ಆಪ್ ಗೆ ಹಾಕುವುದನ್ನು ಕಡ್ಡಾಯಗೊಳಿಸಿದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ನಿರ್ದೇಶಕ ವಿಜಯ್ ಕಿರಣ್ ಆನಂದ್ ತಿಳಿಸಿದ್ದಾರೆ. ಸೆಲ್ಫಿ ಅಪ್ ಲೋಡ್ ಮಾಡುವುದನ್ನು ತಪ್ಪಿಸಿದರೆ, ಹಾಜರಾತಿ ಹಾಗೂ ದಿನದ ವೇತನವನ್ನು ಕಡಿತಗೊಳಿಸಲಾಗುಚುದು ಎಂದು ಎಚ್ಚರಿಕೆ ನೀಡಲಾಗಿದೆ. ಸೆಲ್ಫಿ ಕ್ಲಿಕ್ಕಿಸಿ ಅಪ್ ಲೋಡ್ ಮಾಡುವುದಕ್ಕೆ ಬೇಕಾದ ವ್ಯವಸ್ಥೆಯನ್ನು ಕೆಜಿಬಿವಿ  ಕ್ಯಾಂಪಸ್ ನಲ್ಲಿ ಮಾಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT