ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು; ಆರೋಗ್ಯ ಇಲಾಖೆ

ಮಾರಕ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಭಾರತದಲ್ಲಿ ಸಮಾಧಾನಕರ ಸಂಗತಿಯೊಂದನ್ನು ಕೇಂದ್ರ ಆರೋಗ್ಯ ಇಲಾಖೆ ಹೊರ ಹಾಕಿದೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಭಾರತದಲ್ಲಿ ಸಮಾಧಾನಕರ ಸಂಗತಿಯೊಂದನ್ನು ಕೇಂದ್ರ ಆರೋಗ್ಯ ಇಲಾಖೆ ಹೊರ ಹಾಕಿದೆ.

ಹೌದು... ಭಾರತದಲ್ಲಿ ಮಾರಕ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿರುವಂತೆಯೇ ಕೇಂದ್ರ ಆರೋಗ್ಯ ಇಲಾಖೆ ಇಂದು ಸಮಾಧಾನಕರ ಸಂಗತಿಯೊಂದನ್ನು ಹೊರ ಹಾಕಿದೆ. ಅದರಂತೆ ಭಾರತದಲ್ಲಿ ಪ್ರಸ್ತುತ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ.

ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಂತೆ ಭಾರತದಲ್ಲಿ ಕೊರೋನ ಸೋಂಕಿತರ ಚೇತರಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಪ್ರಸ್ತುತ ಭಾರತದಲ್ಲಿರುವ ಒಟ್ಟಾರೆ ಸೋಂಕಿತರ ಪೈಕಿ ಶೇ.52.47ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಹೇಳಲಾಗಿದೆ. 

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 10,215 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ 1,80,012 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 10,667 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಪ್ರಸ್ತುತ ಭಾರತದಲ್ಲಿ  343091 ಸೋಂಕಿತರಿದ್ದು, ಈ ಪೈಕಿ ಅರ್ಧಕ್ಕಿಂತ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. 

ಚೇತರಿಕೆ ಪ್ರಕರಣ ಸಕ್ರಿಯ ಪ್ರಮಾಣಕ್ಕಿಂತ ನಿರಂತರ ಏಳು ದಿನಗಳಿಂದ ಹೆಚ್ಚಾಗಿರುವುದು ಸಮಾಧಾನಕರ ಸಂಗತಿಯಾಗಿದೆ. ಏಳು ದಿನಗಳ ಹಿಂದೆ ಸಕ್ರಿಯ ಮತ್ತುಚೇತರಿಕೆ ಪ್ರಮಾಣ ಸರಿಸಮನವಾಗಿತ್ತು. ಅಕ್ಟಿವ್ ಕೇಸ್‍ಗಳಿಗಿಂತ ರಿಕವರಿರೇಟ್‍ನಲ್ಲಿ ವೃದ್ದಿ ಕಂಡುಬಂದುಅದುಒಂದು ವಾರದಿಂದಮುಂದುವರಿದಿರುವುದುಜನರಲ್ಲಿ ನಿರಾಳತೆಯ ಭಾವ ಮೂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT