ಭಾರತೀಯ ಸೇನೆ 
ದೇಶ

ಭಾರತ-ಚೀನಾ ಸಂಘರ್ಷ: 3 ಭಾರತೀಯ ಯೋಧರು ಹುತಾತ್ಮ, ಚೀನಾ ಕಡೆಯೂ ಸಾವು ನೋವು ವರದಿ!

ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವಿನ ಮಲ್ಲಯುದ್ಧದಲ್ಲಿ ಭಾರತದ ಮೂವರು ಯೋಧರು ಹತ್ಯೆಯಾಗಿದ್ದು ಸಂಚಲನ ಮೂಡಿಸಿತ್ತು. ಇದೀಗ ಚೀನಾ ಕಡೆಯೂ ಸಾವು-ನೋವು ಸಂಭವಿಸಿದೆ ಎಂದು ವರದಿಯಾಗಿದೆ.

ನವದೆಹಲಿ: ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವಿನ ಮಲ್ಲಯುದ್ಧದಲ್ಲಿ ಭಾರತದ ಮೂವರು ಯೋಧರು ಹತ್ಯೆಯಾಗಿದ್ದು ಸಂಚಲನ ಮೂಡಿಸಿತ್ತು. ಇದೀಗ ಚೀನಾ ಕಡೆಯೂ ಸಾವು-ನೋವು ಸಂಭವಿಸಿದೆ ಎಂದು ವರದಿಯಾಗಿದೆ. 

ಉಭಯ ದೇಶದ ಯೋಧರ ನಡುವಿನ ಸಂಘರ್ಷದಲ್ಲಿ ಭಾರತೀಯ ಸೇನೆಯ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಚೀನಾದ ಕಡೆಯೂ ಸಾವು ನೋವು ಸಂಭವಿಸಿದೆ. ಇದೇ ವೇಳೆ ಉಭಯ ದೇಶಗಳ ನಡುವಿನ ಸೈನಿಕರು ಗುಂಡಿನ ದಾಳಿ ನಡೆಸಿಲ್ಲ. ಬದಲಿಗೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆಯ ಹಿರಿಯ ವರದಿಗಾರ್ತಿ ವಾಂಗ್ ವೆನ್ವೆನ್ ಎಂಬುವರು ಟ್ವೀಟ್ ಮಾಡಿ ಕಳೆದ ರಾತ್ರಿ ಭಾರತ ಮತ್ತು ಚೀನಾ ಯೋಧರ ನಡುವಿನ ಸಂಘರ್ಷದಲ್ಲಿ ಐವರು ಚೀನಾದ ಸೈನಿಕರು ಹತ್ಯೆಯಾಗಿದ್ದು 11 ಜನ ಗಾಯಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು. 

ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ಅತಿಕ್ರಮಣ ಪ್ರವೇಶ ಮಾಡಿದ್ದರು. ಈ ವೇಳೆ ಭಾರತೀಯ ಸೇನೆ ಅವರನ್ನು ಹಿಂದೆ ಸರಿಯುವಂತೆ ಎಚ್ಚರಿಕೆ ನೀಡಿದ್ದರೂ ಅದನ್ನು ನಿರಾಕರಿಸಿದ್ದರಿಂದ ಉಭಯ ದೇಶಗಳ ಯೋಧರ ನಡುವೆ ಸಂಘರ್ಷ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT