ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ 
ದೇಶ

ಲಡಾಖ್ ನಲ್ಲಿ ಹುತಾತ್ಮರಾದ ತಮಿಳುನಾಡು ಯೋಧನ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಿಸಿದ ಸಿಎಂ ಪಳನಿಸ್ವಾಮಿ

ಲಡಾಖ್ ನ ಗಾಲ್ವನ್ ಕಣಿವೆ ಭಾಗದಲ್ಲಿ ನಡೆದ ಚೀನಾ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ತಮಿಳುನಾಡಿನ ಕೆ ಪಳನಿ ಸೇರಿದಂತೆ ಭಾರತೀಯ ಸೇನೆಯ ಮೂವರು ಯೋಧರಿಗೆ ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಚೆನ್ನೈ: ಲಡಾಖ್ ನ ಗಾಲ್ವನ್ ಕಣಿವೆ ಭಾಗದಲ್ಲಿ ನಡೆದ ಭಾರತ - ಚೀನಾ ನಡುವಿನ ಮಲ್ಲಯುದ್ಧದಲ್ಲಿ ಹುತಾತ್ಮರಾದ ತಮಿಳುನಾಡಿನ ಕೆ ಪಳನಿ ಸೇರಿದಂತೆ ಭಾರತೀಯ ಸೇನೆಯ ಮೂವರು ಯೋಧರಿಗೆ ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ದೇಶದ ಸುರಕ್ಷತೆಗಾಗಿ ಪ್ರಾಣ ತ್ಯಾಗ ಮಾಡಿದ ಕಡುಕಲ್ಲೂರ್ ಗ್ರಾಮದ ಪಳನಿ ಹಾಗೂ ಭಾರತೀಯ ಸೇನೆಯ ಇತರ ಇಬ್ಬರು ಹುತಾತ್ಮ ಯೋಧರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪವನ್ನು ಅರ್ಪಿಸುತ್ತೇನೆ ಎಂದು ಸಿಎಂ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ, ರಾಜ್ಯದ ಹುತಾತ್ಮ ಯೋಧ ಪಳನಿ ಅವರ ಕುಟುಂಬಕ್ಕೆ ತಕ್ಷಣವೇ 20 ಲಕ್ಷ ರೂಪಾಯಿ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಯೋಧ ಪಳನಿ ಅವರ ಕುಟುಂಬವನ್ನು ಖುದ್ದಾಗಿ ಭೇಟಿಯಾಗಿ ಸಮಾಧಾನಪಡಿಸುವಂತೆ ಸಿಎಂ ಪಳನಿಸ್ವಾಮಿ ಅವರು ರಾಮನಾಥಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಅಲ್ಲದೆ ಅಗಲಿದ ಯೋಧನಿಗೆ ರಾಜ್ಯ ಸರ್ಕಾರದ ಪರವಾಗಿ ಗೌರವ ಸಲ್ಲಿಸಬೇಕು ಎಂದು ನಿರ್ದೇಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

'ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ'.. 'ಉತ್ತರಿಸದಿದ್ದ ಮೇಲೆ ಅಧಿವೇಶನ ಏಕೆ ಕರೆಯಬೇಕು': ಸ್ಪೀಕರ್ UT Khader ಕಿಡಿ

ಹಾರ್ಮುಜ್ ಜಲಸಂಧಿ ಬಂದ್ ಮಾಡಿಲ್ಲ; ವಿಶ್ವ ನಾಯಕರು ಯುದ್ಧ ನಿಲ್ಲಿಸಲು ಅಮೆರಿಕ ಮೇಲೆ ಒತ್ತಡ ಹೇರಬೇಕು: ಇರಾನ್

SCROLL FOR NEXT