ಸಂಗ್ರಹ ಚಿತ್ರ 
ದೇಶ

ಲಡಾಖ್ ಗಡಿ ಸಂಘರ್ಷ: ಚೀನಾ ದಾಳಿಯಲ್ಲಿ ಗಾಯಗೊಂಡಿದ್ದ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರ

ಪೂರ್ವ ಲಡಾಖ್'ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಭಾರತ ಹಾಗೂ ಚೀನಾ ಉಭಯ ಸೇನೆಗಳ ನಡುವೆ ನಡೆದ ಸಂಘರ್ಷದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಲವು ಯೋಧರ ಪೈಕಿ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ನವದೆಹಲಿ: ಪೂರ್ವ ಲಡಾಖ್'ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಭಾರತ ಹಾಗೂ ಚೀನಾ ಉಭಯ ಸೇನೆಗಳ ನಡುವೆ ನಡೆದ ಸಂಘರ್ಷದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಲವು ಯೋಧರ ಪೈಕಿ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಗಲ್ವಾನ್ ಕಣಿವೆ ಪ್ರದೇಶದಲ್ಲಿ ಉಭಯ ಸೇನೆಗಳ ನಡುವೆ 5 ವಾರಗಳಿಂದ ಸೃಷ್ಟಿಯಾಗಿದ್ದ ಗಡಿ ಸಂಘರ್ಷ, ಸೋಮವಾರ ರಾತ್ರಿ 50 ವರ್ಷಗಳಲ್ಲಿಯೇ ಭೀಕರ ಕಾಳಗಕ್ಕೆ ಕಾರಣವಾಗಿದೆ. ವಿವಾದಿತ ಪ್ರದೇಶದಿಂದ ಹಿಂದೆ ಸರಿಯುವಾಗ ಭಾರತೀಯ ಯೋಧರ ಮೇಲೆ ಚೀನಾ ಸೈನಿಕರು ಕಲ್ಲು, ದೊಣ್ಣೆಗಳಿಂದ ತೀವ್ರ ದಾಳಿ ನಡೆಸಿದ್ದು, ಈ ದಾಳಿ ವಿರುದ್ಧ ಭಾರತೀಯ ಯೋಧರೂ ಕೂಡ ತಿರುಗಿ ಬಿದ್ದಿದ್ದಾರೆ. 

ರಾತ್ರಿ ಹಲವು ಗಂಟೆಗಳ ಕಾಡ ನಡೆದ ಈ ಹೊಡೆದಾಟ, ಬಡಿದಾಟಗಳಿಂದ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಸಂಘರ್ಷದಲ್ಲಿ ಹಲವು ಯೋಧರೂ ಕೂಡ ಗಾಯಗೊಂಡಿದ್ದು, ಇದರಲ್ಲಿ ನಾಲ್ವರು ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 

ಪೂರ್ವ ಲಡಾಖ್'ನ ಗಲ್ವಾನ್ ಗಡಿಯಲ್ಲಿ ಕಳೆದ 5 ವಾರಗಳಿಂದ ಬಿಕ್ಕಟ್ಟು ಏರ್ಪಟ್ಟಿದೆ. ಈ ಕುರಿತು ಎರಡೂ ದೇಶಗಳ ನಡುವೆ ಮಾತುಕತೆ ನಡೆದಿದ್ದು, ಸ್ಥಳದಿಂದ ಹಿಂದೆ ಸರಿಯುವ ಕುರಿತು ಒಮ್ಮತಕ್ಕೆ ಬರಲಾಗಿತ್ತು. ಅದರಂತೆ ಚೀನಾ ಯೋಧರು ಸೋಮವಾರ ರಾತ್ರಿ ಕಾಲ್ತೆಗೆಯಲು ಆರಂಭಿಸಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಭಾರತೀಯ ಯೋಧರ ಮೇಲೆ ದೊಣ್ಣೆ ಹಾಗೂ ಕಲ್ಲುಗಳಿಂದ ದಾಳಿ ನಡೆಸಿದ್ದರು. ಕೂಡಲೇ ಭಾರತೀಯ ಯೋಧರು ಪ್ರತಿದಾಳಿಗೆ ಇಳಿದರು. ಹಲವು ತಾಸುಗಳ ಕಾಲ ಯೋಧರ ನಡುವೆ ಘರ್ಷಣೆ ನಡೆಯಿತು. ಮಧ್ಯರಾತ್ರಿ ಬಳಿಕ ಕಲಹ ನಿಂತಿತ್ತು. ಈ ಘರ್ಷಣೆಯಲ್ಲಿ ಭಾರತದ ಕರ್ನಲ್ ಸೇರಿ 20 ಮಂದಿ ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT