ಸಂಗ್ರಹ ಚಿತ್ರ 
ದೇಶ

ಲಡಾಖ್ ಗಡಿ ಸಂಘರ್ಷ: ಚೀನಾ ದಾಳಿಯಲ್ಲಿ ಗಾಯಗೊಂಡಿದ್ದ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರ

ಪೂರ್ವ ಲಡಾಖ್'ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಭಾರತ ಹಾಗೂ ಚೀನಾ ಉಭಯ ಸೇನೆಗಳ ನಡುವೆ ನಡೆದ ಸಂಘರ್ಷದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಲವು ಯೋಧರ ಪೈಕಿ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ನವದೆಹಲಿ: ಪೂರ್ವ ಲಡಾಖ್'ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಭಾರತ ಹಾಗೂ ಚೀನಾ ಉಭಯ ಸೇನೆಗಳ ನಡುವೆ ನಡೆದ ಸಂಘರ್ಷದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಲವು ಯೋಧರ ಪೈಕಿ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಗಲ್ವಾನ್ ಕಣಿವೆ ಪ್ರದೇಶದಲ್ಲಿ ಉಭಯ ಸೇನೆಗಳ ನಡುವೆ 5 ವಾರಗಳಿಂದ ಸೃಷ್ಟಿಯಾಗಿದ್ದ ಗಡಿ ಸಂಘರ್ಷ, ಸೋಮವಾರ ರಾತ್ರಿ 50 ವರ್ಷಗಳಲ್ಲಿಯೇ ಭೀಕರ ಕಾಳಗಕ್ಕೆ ಕಾರಣವಾಗಿದೆ. ವಿವಾದಿತ ಪ್ರದೇಶದಿಂದ ಹಿಂದೆ ಸರಿಯುವಾಗ ಭಾರತೀಯ ಯೋಧರ ಮೇಲೆ ಚೀನಾ ಸೈನಿಕರು ಕಲ್ಲು, ದೊಣ್ಣೆಗಳಿಂದ ತೀವ್ರ ದಾಳಿ ನಡೆಸಿದ್ದು, ಈ ದಾಳಿ ವಿರುದ್ಧ ಭಾರತೀಯ ಯೋಧರೂ ಕೂಡ ತಿರುಗಿ ಬಿದ್ದಿದ್ದಾರೆ. 

ರಾತ್ರಿ ಹಲವು ಗಂಟೆಗಳ ಕಾಡ ನಡೆದ ಈ ಹೊಡೆದಾಟ, ಬಡಿದಾಟಗಳಿಂದ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಸಂಘರ್ಷದಲ್ಲಿ ಹಲವು ಯೋಧರೂ ಕೂಡ ಗಾಯಗೊಂಡಿದ್ದು, ಇದರಲ್ಲಿ ನಾಲ್ವರು ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 

ಪೂರ್ವ ಲಡಾಖ್'ನ ಗಲ್ವಾನ್ ಗಡಿಯಲ್ಲಿ ಕಳೆದ 5 ವಾರಗಳಿಂದ ಬಿಕ್ಕಟ್ಟು ಏರ್ಪಟ್ಟಿದೆ. ಈ ಕುರಿತು ಎರಡೂ ದೇಶಗಳ ನಡುವೆ ಮಾತುಕತೆ ನಡೆದಿದ್ದು, ಸ್ಥಳದಿಂದ ಹಿಂದೆ ಸರಿಯುವ ಕುರಿತು ಒಮ್ಮತಕ್ಕೆ ಬರಲಾಗಿತ್ತು. ಅದರಂತೆ ಚೀನಾ ಯೋಧರು ಸೋಮವಾರ ರಾತ್ರಿ ಕಾಲ್ತೆಗೆಯಲು ಆರಂಭಿಸಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಭಾರತೀಯ ಯೋಧರ ಮೇಲೆ ದೊಣ್ಣೆ ಹಾಗೂ ಕಲ್ಲುಗಳಿಂದ ದಾಳಿ ನಡೆಸಿದ್ದರು. ಕೂಡಲೇ ಭಾರತೀಯ ಯೋಧರು ಪ್ರತಿದಾಳಿಗೆ ಇಳಿದರು. ಹಲವು ತಾಸುಗಳ ಕಾಲ ಯೋಧರ ನಡುವೆ ಘರ್ಷಣೆ ನಡೆಯಿತು. ಮಧ್ಯರಾತ್ರಿ ಬಳಿಕ ಕಲಹ ನಿಂತಿತ್ತು. ಈ ಘರ್ಷಣೆಯಲ್ಲಿ ಭಾರತದ ಕರ್ನಲ್ ಸೇರಿ 20 ಮಂದಿ ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!