ಸಂಗ್ರಹ ಚಿತ್ರ 
ದೇಶ

ಲಡಾಖ್ ಗಡಿ ಸಂಘರ್ಷ: ಚೀನಾ ದಾಳಿಯಲ್ಲಿ ಗಾಯಗೊಂಡಿದ್ದ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರ

ಪೂರ್ವ ಲಡಾಖ್'ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಭಾರತ ಹಾಗೂ ಚೀನಾ ಉಭಯ ಸೇನೆಗಳ ನಡುವೆ ನಡೆದ ಸಂಘರ್ಷದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಲವು ಯೋಧರ ಪೈಕಿ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ನವದೆಹಲಿ: ಪೂರ್ವ ಲಡಾಖ್'ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಭಾರತ ಹಾಗೂ ಚೀನಾ ಉಭಯ ಸೇನೆಗಳ ನಡುವೆ ನಡೆದ ಸಂಘರ್ಷದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಲವು ಯೋಧರ ಪೈಕಿ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಗಲ್ವಾನ್ ಕಣಿವೆ ಪ್ರದೇಶದಲ್ಲಿ ಉಭಯ ಸೇನೆಗಳ ನಡುವೆ 5 ವಾರಗಳಿಂದ ಸೃಷ್ಟಿಯಾಗಿದ್ದ ಗಡಿ ಸಂಘರ್ಷ, ಸೋಮವಾರ ರಾತ್ರಿ 50 ವರ್ಷಗಳಲ್ಲಿಯೇ ಭೀಕರ ಕಾಳಗಕ್ಕೆ ಕಾರಣವಾಗಿದೆ. ವಿವಾದಿತ ಪ್ರದೇಶದಿಂದ ಹಿಂದೆ ಸರಿಯುವಾಗ ಭಾರತೀಯ ಯೋಧರ ಮೇಲೆ ಚೀನಾ ಸೈನಿಕರು ಕಲ್ಲು, ದೊಣ್ಣೆಗಳಿಂದ ತೀವ್ರ ದಾಳಿ ನಡೆಸಿದ್ದು, ಈ ದಾಳಿ ವಿರುದ್ಧ ಭಾರತೀಯ ಯೋಧರೂ ಕೂಡ ತಿರುಗಿ ಬಿದ್ದಿದ್ದಾರೆ. 

ರಾತ್ರಿ ಹಲವು ಗಂಟೆಗಳ ಕಾಡ ನಡೆದ ಈ ಹೊಡೆದಾಟ, ಬಡಿದಾಟಗಳಿಂದ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಸಂಘರ್ಷದಲ್ಲಿ ಹಲವು ಯೋಧರೂ ಕೂಡ ಗಾಯಗೊಂಡಿದ್ದು, ಇದರಲ್ಲಿ ನಾಲ್ವರು ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 

ಪೂರ್ವ ಲಡಾಖ್'ನ ಗಲ್ವಾನ್ ಗಡಿಯಲ್ಲಿ ಕಳೆದ 5 ವಾರಗಳಿಂದ ಬಿಕ್ಕಟ್ಟು ಏರ್ಪಟ್ಟಿದೆ. ಈ ಕುರಿತು ಎರಡೂ ದೇಶಗಳ ನಡುವೆ ಮಾತುಕತೆ ನಡೆದಿದ್ದು, ಸ್ಥಳದಿಂದ ಹಿಂದೆ ಸರಿಯುವ ಕುರಿತು ಒಮ್ಮತಕ್ಕೆ ಬರಲಾಗಿತ್ತು. ಅದರಂತೆ ಚೀನಾ ಯೋಧರು ಸೋಮವಾರ ರಾತ್ರಿ ಕಾಲ್ತೆಗೆಯಲು ಆರಂಭಿಸಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಭಾರತೀಯ ಯೋಧರ ಮೇಲೆ ದೊಣ್ಣೆ ಹಾಗೂ ಕಲ್ಲುಗಳಿಂದ ದಾಳಿ ನಡೆಸಿದ್ದರು. ಕೂಡಲೇ ಭಾರತೀಯ ಯೋಧರು ಪ್ರತಿದಾಳಿಗೆ ಇಳಿದರು. ಹಲವು ತಾಸುಗಳ ಕಾಲ ಯೋಧರ ನಡುವೆ ಘರ್ಷಣೆ ನಡೆಯಿತು. ಮಧ್ಯರಾತ್ರಿ ಬಳಿಕ ಕಲಹ ನಿಂತಿತ್ತು. ಈ ಘರ್ಷಣೆಯಲ್ಲಿ ಭಾರತದ ಕರ್ನಲ್ ಸೇರಿ 20 ಮಂದಿ ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT