ಕೋವಿಡ್ ಪರಿಣಾಮ 202-21 ನೇ ಸಾಲಿನಲ್ಲಿ ಅಧಿಕಾರಿಗಳಿಗೆ ವಿದೇಶ ತರಬೇತಿ ರದ್ದು! 
ದೇಶ

ಕೋವಿಡ್ ಪರಿಣಾಮ 202-21 ನೇ ಸಾಲಿನಲ್ಲಿ ಅಧಿಕಾರಿಗಳಿಗೆ ವಿದೇಶ ತರಬೇತಿ ರದ್ದು!

ಕೋವಿಡ್-19 ಪರಿಣಾಮವಾಗಿ ಅದಧಿಕಾರಿಗಳನ್ನು ವಿದೇಸಶಕ್ಕೆ ಕಳುಹಿಸಿ ತರಬೇತಿ ನೀಡಲಾಗುವ ಎಂದಿನ ಪರಿಪಾಠಕ್ಕೆ ಬ್ರೇಕ್ ಬಿದ್ದಿದೆ.

ನವದೆಹಲಿ: ಕೋವಿಡ್-19 ಪರಿಣಾಮವಾಗಿ ಅದಧಿಕಾರಿಗಳನ್ನು ವಿದೇಸಶಕ್ಕೆ ಕಳುಹಿಸಿ ತರಬೇತಿ ನೀಡಲಾಗುವ ಎಂದಿನ ಪರಿಪಾಠಕ್ಕೆ ಬ್ರೇಕ್ ಬಿದ್ದಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ತನ್ನ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಮಾಹಿತಿ ರವಾನಿಸಿದ್ದು, 2020-21 ನೇ ಸಾಲಿನಲ್ಲಿ ಅದಧಿಕಾರಿಗಳಿಗೆ ವಿದೇಸಶ ತರಬೇತಿಯನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ.

ಸಿಬ್ಬಂದಿ ಮತ್ತು ತರಬೇತಿ (ಡಿಒಪಿಟಿ) ಕೇಡರ್ ಕಂಟ್ರೋಲಿಂಗ್ ವಿಭಾಗ, ಕೇಂದ್ರ ತರಬೇತಿ ಇನ್ಸ್ಟಿಟ್ಯೂಟ್ ಗಳು ತನ್ನ ವ್ಯಾಪ್ತಿಗೆ ಬರುವ ಅಧಿಕಾರಿಗಳಿಗೆ ವಿದೇಶಿ ತರಬೇತಿಯನ್ನು ಒಟ್ಟಾರೆ ತರಬೇತಿಯ ಭಾಗವಾಗಿಸಿಕೊಂಡಿದೆ. ಆದರೆ ಈ ಬಾರಿ ಕೋವಿಡ್-19 ಸಾಂಕ್ರಾಮಿಕ ರೋಗ ಹಾಗೂ ಅದರ ಪರಿಣಾಮವಾಗಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಧಿಕಾರಿಗಳನ್ನು ವಿದೇಶಕ್ಕೆ ಕಳುಹಿಸಿ ತರಬೇತಿ ಕೊಡಿಸುವುದನ್ನು ಈ ಬಾರಿ ರದ್ದುಗೊಳಿಸಲಾಗಿದೆ. ಆದರೆ ವಿಶೇಷ ಸಂದರ್ಭಗಳಲ್ಲಿ ಅಧಿಕಾರಿಗಳನ್ನು ವಿದೇಶಕ್ಕೆ ಕಳಿಸಿ ತರಬೇತಿ ಕೊಡಿಸುವುದಾದರೆ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಅಧಿಕಾರಿಗಳಿಗೆ ವಿದೇಶ ತರಬೇತಿ ಕೊಡಿಸುವುದಕ್ಕಾಗಿ ಹಾಗೂ ಇನ್ನಿತರ ಮೂಲಸೌಕರ್ಯ ಕಲ್ಪಿಸುವುದಕ್ಕಾಗಿ ಈ ಬಾರಿಯ ಬಜೆಟ್ ನಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ನಿರ್ಮಲಾ ಸೀತಾರಾಮನ್ 238.45 ಕೋಟಿ ಅನುದಾನ ಘೋಷಿಸಿದ್ದರು. ಈ ಪೈಕಿ 83.45 ಕೋಟಿ ರೂಪಾಯಿಗಳಷ್ಟು ಮೊತ್ತವನ್ನು ದೆಹಲಿಯಲ್ಲಿ ಇನ್ಸ್ಟಿಟ್ಯೂಟ್ ಆಫ್ ಸೆಕ್ರೆಟೇರಿಯೆಟ್ ಟ್ರೈನಿಂಗ್ ಹಾಗೂ ಮ್ಯಾನೇಜ್ಮೆಂಟ್ (ಐಎಸ್ ಟಿಎಂ) ನ ಸ್ಥಾಪನೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ ಗೆ ಬಳಕೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT