ಕೋವಿಡ್ ಪರಿಣಾಮ 202-21 ನೇ ಸಾಲಿನಲ್ಲಿ ಅಧಿಕಾರಿಗಳಿಗೆ ವಿದೇಶ ತರಬೇತಿ ರದ್ದು! 
ದೇಶ

ಕೋವಿಡ್ ಪರಿಣಾಮ 202-21 ನೇ ಸಾಲಿನಲ್ಲಿ ಅಧಿಕಾರಿಗಳಿಗೆ ವಿದೇಶ ತರಬೇತಿ ರದ್ದು!

ಕೋವಿಡ್-19 ಪರಿಣಾಮವಾಗಿ ಅದಧಿಕಾರಿಗಳನ್ನು ವಿದೇಸಶಕ್ಕೆ ಕಳುಹಿಸಿ ತರಬೇತಿ ನೀಡಲಾಗುವ ಎಂದಿನ ಪರಿಪಾಠಕ್ಕೆ ಬ್ರೇಕ್ ಬಿದ್ದಿದೆ.

ನವದೆಹಲಿ: ಕೋವಿಡ್-19 ಪರಿಣಾಮವಾಗಿ ಅದಧಿಕಾರಿಗಳನ್ನು ವಿದೇಸಶಕ್ಕೆ ಕಳುಹಿಸಿ ತರಬೇತಿ ನೀಡಲಾಗುವ ಎಂದಿನ ಪರಿಪಾಠಕ್ಕೆ ಬ್ರೇಕ್ ಬಿದ್ದಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ತನ್ನ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಮಾಹಿತಿ ರವಾನಿಸಿದ್ದು, 2020-21 ನೇ ಸಾಲಿನಲ್ಲಿ ಅದಧಿಕಾರಿಗಳಿಗೆ ವಿದೇಸಶ ತರಬೇತಿಯನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ.

ಸಿಬ್ಬಂದಿ ಮತ್ತು ತರಬೇತಿ (ಡಿಒಪಿಟಿ) ಕೇಡರ್ ಕಂಟ್ರೋಲಿಂಗ್ ವಿಭಾಗ, ಕೇಂದ್ರ ತರಬೇತಿ ಇನ್ಸ್ಟಿಟ್ಯೂಟ್ ಗಳು ತನ್ನ ವ್ಯಾಪ್ತಿಗೆ ಬರುವ ಅಧಿಕಾರಿಗಳಿಗೆ ವಿದೇಶಿ ತರಬೇತಿಯನ್ನು ಒಟ್ಟಾರೆ ತರಬೇತಿಯ ಭಾಗವಾಗಿಸಿಕೊಂಡಿದೆ. ಆದರೆ ಈ ಬಾರಿ ಕೋವಿಡ್-19 ಸಾಂಕ್ರಾಮಿಕ ರೋಗ ಹಾಗೂ ಅದರ ಪರಿಣಾಮವಾಗಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಧಿಕಾರಿಗಳನ್ನು ವಿದೇಶಕ್ಕೆ ಕಳುಹಿಸಿ ತರಬೇತಿ ಕೊಡಿಸುವುದನ್ನು ಈ ಬಾರಿ ರದ್ದುಗೊಳಿಸಲಾಗಿದೆ. ಆದರೆ ವಿಶೇಷ ಸಂದರ್ಭಗಳಲ್ಲಿ ಅಧಿಕಾರಿಗಳನ್ನು ವಿದೇಶಕ್ಕೆ ಕಳಿಸಿ ತರಬೇತಿ ಕೊಡಿಸುವುದಾದರೆ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಅಧಿಕಾರಿಗಳಿಗೆ ವಿದೇಶ ತರಬೇತಿ ಕೊಡಿಸುವುದಕ್ಕಾಗಿ ಹಾಗೂ ಇನ್ನಿತರ ಮೂಲಸೌಕರ್ಯ ಕಲ್ಪಿಸುವುದಕ್ಕಾಗಿ ಈ ಬಾರಿಯ ಬಜೆಟ್ ನಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ನಿರ್ಮಲಾ ಸೀತಾರಾಮನ್ 238.45 ಕೋಟಿ ಅನುದಾನ ಘೋಷಿಸಿದ್ದರು. ಈ ಪೈಕಿ 83.45 ಕೋಟಿ ರೂಪಾಯಿಗಳಷ್ಟು ಮೊತ್ತವನ್ನು ದೆಹಲಿಯಲ್ಲಿ ಇನ್ಸ್ಟಿಟ್ಯೂಟ್ ಆಫ್ ಸೆಕ್ರೆಟೇರಿಯೆಟ್ ಟ್ರೈನಿಂಗ್ ಹಾಗೂ ಮ್ಯಾನೇಜ್ಮೆಂಟ್ (ಐಎಸ್ ಟಿಎಂ) ನ ಸ್ಥಾಪನೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ ಗೆ ಬಳಕೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT