ಪ್ರಧಾನಿ ಮೋದಿ 
ದೇಶ

ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಇಂಡೋ-ಚೀನಾ ಸಂಘರ್ಷ ಸಂಬಂಧ ಪ್ರಧಾನಿ ಮೋದಿ ಹೇಳಿಕೆ

ಲಡಾಖ್ ಗಡಿಯಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಈ ವಿಚಾರವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದು,ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಲಡಾಖ್ ಗಡಿಯಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಈ ವಿಚಾರವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದು,ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಮಾರಕ ಕೊರೋನಾ ವೈರಸ್ ನಿರ್ವಹಣೆ ವಿಚಾರವಾಗಿ ನಿನ್ನೆಯಿಂದ ನಡೆಯುತ್ತಿರುವ ಎಲ್ಲ ರಾಜ್ಯಗಳ ಸಿಎಂಗಳ ಮ್ಯಾರಥಾನ್ ಸಭೆಯ 2ನೇ ದಿನ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಮೊದಲು ಹುತಾತ್ಮ ಸೈನಿಕರಿ ಆತ್ಮಕ್ಕೆ 2 ನಿಮಿಷ ಶಾಂತಿ ಕೋರಿದರು. ಬಳಿಕ ಸೈನಿಕರ ಬಲಿದಾನದ ಕುರಿತು ಮಾತನಾಡಿದ ಪ್ರಧಾನಿ ಮೋದಿ, 'ಭಾರತ ಶಾಂತಿಯನ್ನು ಬಯಸುತ್ತದೆ ಆದರೆ ಪ್ರಚೋದಿಸಿದಾಗ, ಯಾವುದೇ ರೀತಿಯ ಪರಿಸ್ಥಿತಿ ಇರಲಿ ಭಾರತ ಅದಕ್ಕೆ ಸೂಕ್ತ ತಿರುಗೇಟು ನೀಡಲು ಸಮರ್ಥವಾಗಿದೆ. ಈ ಮೂಲಕ ನಾನು ದೇಶದ ಪ್ರಜೆಗಳಿಗೆ ಭರವಸೆ ನೀಡುತ್ತೇನೆ. ಅದೇನೆಂದರೆ ಸೈನಿಕರ ಬಲಿದಾನ ವ್ಯರ್ಥವಾಗದು. ನಮಗೆ, ದೇಶದ ಏಕತೆ ಮತ್ತು ಸಾರ್ವಭೌಮತ್ವ ಅತ್ಯಂತ ಮುಖ್ಯವಾದದ್ದು. ಆದಕೆ ಪ್ರಚೋದಿಸಿದರೆ ಅದಕ್ಕೆ ತಕ್ಕ ಶಾಸ್ತಿ ಖಂಡಿತ ಮಾಡುತ್ತೇವೆ ಎಂದು ಹೇಳಿದರು.

ಲಡಾಖ್ ನಲ್ಲಿ ವೀರಮರಣವನ್ನಪ್ಪಿದ ಸೈನಿಕರ ಶೌರ್ಯ ಅಪ್ರತಿಮವಾದದ್ದು. ಅವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಈ ಬಗ್ಗೆ ಯಾರಿಗೂ ಸ್ವಲ್ಪವೂ ಅನುಮಾನ ಬೇಡ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇನ್ನು ಇಂದಿನ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 15 ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. 

Related Article

ಲಡಾಖ್ ಗಡಿ ಸಂಘರ್ಷ: ಜೂನ್ 19 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ

ಲಡಾಕ್ ನಲ್ಲಿ ಭಾರತೀಯ ಸೈನಿಕರ ಪ್ರಾಣತ್ಯಾಗ ಅತೀವ ನೋವು ತಂದಿದೆ: ರಾಜನಾಥ್ ಸಿಂಗ್

ಲಡಾಖ್ ಸಂಘರ್ಷ: 17 ದಿನದ ಹಿಂದೆ ಹುಟ್ಟಿದ ತನ್ನ ಮಗುವಿನ ಮುಖವನ್ನೂ ನೋಡದೆ ಯೋಧ ಕೆಕೆ ಓಝಾ ಹುತಾತ್ಮ!

ವಿದೇಶಿ ಯೋಧರು ಗಡಿ ಪ್ರವೇಶಿಸಿದ್ದರೂ, 7 ವಾರಗಳಿಂದ ಪ್ರಧಾನಿ ಮೋದಿ ಮೌನವಾಗಿದದ್ದೇಕೆ: ಚಿದಂಬರಂ ಪ್ರಶ್ನೆ

ಪೂರ್ವ ಲಡಾಕ್ ನಲ್ಲಿ ಘರ್ಷಣೆ: ನಾಲ್ವರು ಉನ್ನತ ಸಚಿವರು, ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ತಡರಾತ್ರಿ ಮಾತುಕತೆ

ಲಡಾಖ್ ಗಡಿ ಸಂಘರ್ಷ: ಚೀನಾ ದಾಳಿಯಲ್ಲಿ ಗಾಯಗೊಂಡಿದ್ದ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರ

ಲಡಾಖ್ ಗಡಿಯಲ್ಲಿ ಚೀನಾ ಹತ್ಯಾಕಾಂಡ: ನನಗಾಗಿರುವ ನೋವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ- ರಾಹುಲ್ ಗಾಂಧಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT