ಲೆ.ಜ.ಡಿ.ಎಸ್.ಹೂಡಾ 
ದೇಶ

ಪೂರ್ವ ಲಡಾಕ್ ನಲ್ಲಿ ಪರಿಸ್ಥಿತಿ ಉದ್ವಿಗ್ನ, ತೀವ್ರ ಆತಂಕಕ್ಕೆ ಕಾರಣವಾಗಿದೆ: ಲೆಫ್ಟಿನೆಂಟ್ ಜನರಲ್ ಡಿ.ಎಸ್. ಹೂಡಾ

ಪೂರ್ವ ಲಡಾಕ್ ಸಂಘರ್ಷದಲ್ಲಿ ಅಪಾರ ಪ್ರಮಾಣದಲ್ಲಿ ಸಾವು-ನೋವು ಸಂಭವಿಸಿದೆ. ಭಾರತದ ಕಡೆಯ ಕನಿಷ್ಠ 20 ಯೋಧರು ಹುತಾತ್ಮರಾಗಿದ್ದಾರೆ.

ನವದೆಹಲಿ: ಪೂರ್ವ ಲಡಾಕ್ ಸಂಘರ್ಷದಲ್ಲಿ ಅಪಾರ ಪ್ರಮಾಣದಲ್ಲಿ ಸಾವು-ನೋವು ಸಂಭವಿಸಿದೆ. ಭಾರತದ ಕಡೆಯ ಕನಿಷ್ಠ 20 ಯೋಧರು ಹುತಾತ್ಮರಾಗಿದ್ದಾರೆ.

ಪೂರ್ವ ಲಡಾಕ್ ನಲ್ಲಿ ಕಳೆದ ಮೇ 5ರಂದು ಚೀನಾ ಸೇನಾಪಡೆಯನ್ನು ನಿಯೋಜಿಸಿದ ನಂತರ ಭಾರತ ಸಹ ತನ್ನ ಸೇನಾಪಡೆಯನ್ನು ನಿಯೋಜಿಸಿತ್ತು. ಬಳಿಕ ಗಡಿ ಸಮಸ್ಯೆಯನ್ನು ಶಾಂತಿ ಮಾತುಕತೆ ಮೂಲಕ ಬಗೆಹರಿಸೋಣವೆಂದು ಈಗಾಗಲೇ ಐದಾರು ಸುತ್ತಿನ ಮಾತುಕತೆ ಸಹ ಮುಗಿದಿತ್ತು. ಆದರೆ ನಿನ್ನೆ ಇದ್ದಕ್ಕಿದ್ದಂತೆ ಗಡಿಯಲ್ಲಿ ಘರ್ಷಣೆ ನಡೆದಿದೆ. ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಚೀನಾ ಕಡೆಯ ಯೋಧರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ ಎಂಬ ವರದಿ ಬಂದಿದ್ದು ನಿಜಕ್ಕೂ ಆಘಾತಕಾರಿ ವಿಷಯ ಎಂದು ಭಾರತೀಯ ಸೇನೆಯ ಕಮಾಂಡಿಂಗ್ ಇನ್ ಚೀಫ್ ಮಾಜಿ ಜನರಲ್ ಆಫೀಸರ್ ಲೆ.ಜ.ಡಿ ಎಸ್ ಹೂಡಾ ಅಭಿಪ್ರಾಯಪಟ್ಟಿದ್ದಾರೆ.

ಭಾರತ-ಚೀನಾ ಸಮಸ್ಯೆಯನ್ನು ಬಗೆಹರಿಸಲು ಕೆಲವು ಕಠಿಣ ಮಾತುಕತೆಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮೊದಲಿಗೆ ಭಾವಿಸಲಾಗಿತ್ತು ಆದರೆ ಇತ್ತೀಚಿನ ಹಿಂಸಾಚಾರವು ಸಾವಿಗೆ ಕಾರಣವಾಗಿರುವುದರಿಂದ ಇನ್ನು ಮುಂದೆ ನಿರ್ಣಯಿಸುವುದು ಕಷ್ಟವಾಗಬಹುದು. ಎರಡೂ ರಾಷ್ಟ್ರಗಳ ಬೇಡಿಕೆಗಳು ಯಾವುವು, ಎರಡೂ ದೇಶಗಳು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧವಿದೆಯೇ ಎಂಬುದರ ಮೇಲೆ ಮುಂದಿನ ವಿಷಯ ನಿರ್ಧಾರವಾಗುತ್ತದೆ.

ಕಳೆದ ಬಾರಿಯ ಡೋಕ್ಲಾಮ್ ಅಥವಾ ಚುಮಾರ್ ಘಟನೆಗಳಿಗೆ ವಿರುದ್ಧವಾಗಿ ಈ ಬಾರಿ ಚೀನಾದ ಉದ್ದೇಶಗಳ ಬಗ್ಗೆ ನಮಗೆ ಹೆಚ್ಚು ತಿಳಿದಿಲ್ಲ. ಚೀನಾ ದೇಶ ಪೂರ್ವ ಲಡಾಕ್ ನಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾದಾಗ ಅದನ್ನು ಭಾರತ ವಿರೋಧಿಸಿ ಘರ್ಷಣೆ ಆರಂಭವಾಗಿದೆ. ಚೀನೀಯರ ಆಕಾಂಕ್ಷೆಗೆ ಭಾರತ ಒಪ್ಪದಿದ್ದರೆ ಈ ಬಾರಿ ಹೆಚ್ಚಿನ ಉದ್ವಿಗ್ನತೆಗೆ ಕಾರಣವಾಗಬಹುದು. ಗಡಿ ವಾಸ್ತವ ರೇಖೆಯ ಉದ್ದಕ್ಕೂ ಮೂಲ ಸ್ಥಾನಕ್ಕೆ ಮರಳಲು ಚೀನಾ ಒಪ್ಪಿದರೆ ಉದ್ವಿಗ್ನತೆ ಕಡಿಮೆಯಾಗಬಹುದು. ಆದರೆ, ಈ ಬಾರಿ ಚೀನಿಯರು ಆ ಪ್ರದೇಶದಿಂದ ಹಿಂದೆ ಸರಿಯಲು ಒಪ್ಪುವ ಹಾಗೆ ಕಾಣುತ್ತಿಲ್ಲ ಎಂದು ಲೆ.ಜ.ಡಿ ಎಸ್ ಹೂಡಾ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ನೇಮಕಾತಿ ವಯೋಮಿತಿ 5 ವರ್ಷ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು

ಐಷಾರಾಮಿ ರಿಯಲ್ ಎಸ್ಟೇಟ್ ಮೂಲಕ ಅಮೆರಿಕದಿಂದ 'ಹೊಸ ಗಾಜಾ' ಕಟ್ಟುವ ಭರವಸೆ!

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತದಿಂದ ಮುರಳಿ ಕೃಷ್ಣ ಸಾವು!

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ 'ದಂಡುಪಾಳ್ಯ ಗ್ಯಾಂಗ್' ಸದಸ್ಯನ ಬಂಧನ!

ಟ್ರಂಪ್ ರ 'ಶಾಂತಿ ಮಂಡಳಿ' ಸೇರಲು ಭಾರತ ನಕಾರ; ಪಾಕಿಸ್ತಾನ ಸಹಿ!

SCROLL FOR NEXT