ರಾಜನಾಥ್ ಸಿಂಗ್(ಸಂಗ್ರಹ ಚಿತ್ರ) 
ದೇಶ

ಲಡಾಕ್ ನಲ್ಲಿ ಭಾರತೀಯ ಸೈನಿಕರ ಪ್ರಾಣತ್ಯಾಗ ಅತೀವ ನೋವು ತಂದಿದೆ: ರಾಜನಾಥ್ ಸಿಂಗ್

ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಭಾಗದಲ್ಲಿ ಸೋಮವಾರ ಮಧ್ಯರಾತ್ರಿ ನಡೆದ ಘರ್ಷಣೆಯಲ್ಲಿ 20 ಮಂದಿ ಭಾರತೀಯ ಯೋಧರು ಚೀನಾ ಸೈನಿಕರಿಂದ ಹುತಾತ್ಮರಾದ ಘಟನೆ ತೀವ್ರ ನೋವುಂಟುಮಾಡುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿ:ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಭಾಗದಲ್ಲಿ ಸೋಮವಾರ ಮಧ್ಯರಾತ್ರಿ ನಡೆದ ಘರ್ಷಣೆಯಲ್ಲಿ 20 ಮಂದಿ ಭಾರತೀಯ ಯೋಧರು ಚೀನಾ ಸೈನಿಕರಿಂದ ಹುತಾತ್ಮರಾದ ಘಟನೆ ತೀವ್ರ ನೋವುಂಟುಮಾಡುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ದೇಶವನ್ನು ಕಾಪಾಡುವ, ದೇಶದ ಘನತೆ ಗೌರವವನ್ನು ಎತ್ತಿ ಹಿಡಿಯುವ ವಿಚಾರದಲ್ಲಿ ನಮ್ಮ ಸೈನಿಕರು ವಿಶೇಷ ಧೈರ್ಯ, ಸಾಹಸ ಮೆರೆದಿದ್ದಾರೆ. ಪ್ರಾಣಕ್ಕಿಂತ ದೇಶ ಮುಖ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. 20 ಮಂದಿ ಯೋಧರ ತ್ಯಾಗ, ಬಲಿದಾನ ವಿಷಯ ಮನಸ್ಸಿಗೆ ತೀವ್ರ ನೋವು ಮತ್ತು ತೊಂದರೆಯನ್ನುಂಟುಮಾಡುತ್ತಿದೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಹುತಾತ್ಮ ಸೈನಿಕರ ವೀರ ಬಲಿದಾನವನ್ನು ದೇಶ ಯಾವತ್ತಿಗೂ ಮರೆಯುವುದಿಲ್ಲ. ಅವರ ಕುಟುಂಬಸ್ಥರ ಜೊತೆ ಈ ಕಠಿಣ ಪರಿಸ್ಥಿತಿಯಲ್ಲಿ ನಾವು ಖಂಡಿತವಾಗಿಯೂ ಇರುತ್ತೇವೆ. ಹುತಾತ್ಮ ಸೈನಿಕರ ಕುಟುಂಬಸ್ಥರಿಗೆ ಸಂತಾಪಗಳು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT