2019 ಮಹಾರಾಷ್ಟ್ರ ಪ್ರವಾಹ: ಕರ್ನಾಟಕದಿಂದ ಹೆಚ್ಚಿನ ಹಾನಿಯಾಗಿಲ್ಲ-ತಜ್ಞರ ಸಮಿತಿ 
ದೇಶ

2019 ಮಹಾರಾಷ್ಟ್ರ ಪ್ರವಾಹ: ಕರ್ನಾಟಕದಿಂದ ಹೆಚ್ಚಿನ ಹಾನಿಯಾಗಿಲ್ಲ-ತಜ್ಞರ ಸಮಿತಿ

2019 ರಲ್ಲಿ ಮಹಾರಾಷ್ಟ್ರ ಪ್ರವಾಹಕ್ಕೆ ಕರ್ನಾಟಕದ ಆಲಮಟ್ಟಿ ಹಾಗೂ ಹಿಪ್ಪರಗಿ ಜಲಾಶಯಗಳು ಹಾಗೂ ಅಲ್ಲಿನ ಪ್ರವಾಹ ನಿರ್ವಹಣೆ ಕಾರ್ಯಾಚರಣೆಗಳು ಹೆಚ್ಚಿನ ಹಾನಿಯುಂಟುಮಾಡಿಲ್ಲ ಎಂದು ತಜ್ಞರ ಸಮಿತಿ ಹೇಳಿದೆ.

2019 ರಲ್ಲಿ ಮಹಾರಾಷ್ಟ್ರ ಪ್ರವಾಹಕ್ಕೆ ಕರ್ನಾಟಕದ ಆಲಮಟ್ಟಿ ಹಾಗೂ ಹಿಪ್ಪರಗಿ ಜಲಾಶಯಗಳು ಹಾಗೂ ಅಲ್ಲಿನ ಪ್ರವಾಹ ನಿರ್ವಹಣೆ ಕಾರ್ಯಾಚರಣೆಗಳು ಹೆಚ್ಚಿನ ಹಾನಿಯುಂಟುಮಾಡಿಲ್ಲ ಎಂದು ತಜ್ಞರ ಸಮಿತಿ ಹೇಳಿದೆ.

ಮಹಾರಾಷ್ಟ್ರದಲ್ಲಿ ಈ ಹಿಂದಿದ್ದ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ ಸರ್ಕಾರ ಈ ತಜ್ಞರ ಸಮಿತಿಯನ್ನು ನೇಮಕ ಮಾಡಿತ್ತು.
ಮಾಜಿ ಹಿರಿಯ ಅಧಿಕಾರಿ ನಂದಕುಮಾರ್ ವಡ್ನೆರೆ ಹಾಗೂ ಹಾಲಿ ಹಿರಿಯ ಅಧಿಕಾರಿ ರಾಜೇಂದ್ರ ಪವಾರ್ ಅವರಿದ್ದ ಸಮಿತಿ ಈಗ ವರದಿಯನ್ನು ಮಹಾರಾಷ್ಟ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, 3 ಸಂಪುಟಗಳಷ್ಟು ಅಧ್ಯಯನ ವರದಿಯನ್ನು ಸಲಿಸಿದ್ದು, ಮಹಾರಾಷ್ಟ್ರದ ಪ್ರವಾಹ ಪರಿಸ್ಥಿತಿಯ ಮೇಲೆ ಕರ್ನಾಟಕದ ಆಲಮಟ್ಟಿ ಹಾಗೂ ಹಿಪ್ಪರಗಿ ಜಲಾಶಯಗಳು ಹಾಗೂ ಅಲ್ಲಿನ ಪ್ರವಾಹ ನಿರ್ವಹಣೆ ಕಾರ್ಯಾಚರಣೆಗಳು ಹೆಚ್ಚಿನ ಹಾನಿಯುಂಟುಮಾಡಿಲ್ಲ ಎಂದು ಹೇಳಿದೆ. 

ಸಂಗ್ಲಿ, ಕೊಲ್ಹಾಪುರ ಅದರ ಸುತ್ತಮುತ್ತಲಿನ ಪ್ರದೇಶಗಳು ನೀರಿನಲ್ಲಿ ಮುಳುಗಿ ಜನಜೀವನ ಸಂಕಷ್ಟಕ್ಕೆ ಸಿಲುಕಿದ್ದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಯಕರು ಕರ್ನಾಟಕ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದ ಆಲಮಟ್ಟಿ ಜಲಾಶಯದಿಂದ ನೀರು ಹೊರಬಿಡುವಂತೆ ಮನವಿ ಮಾಡಿದ್ದರು. ಕರ್ನಾಟಕ ತನ್ನಲ್ಲಿದ್ದ ಬೃಹತ್ ಪ್ರಮಾಣದ ನೀರನ್ನು ಇಷ್ಟವಿಲ್ಲದಿದ್ದರೂ  ನಿರಂತರ ಮನವಿಯ ಪರಿಣಾಮವಾಗಿ ಹೊರಬಿಟ್ಟಿತ್ತು.

ಮಹಾರಾಷ್ಟ್ರದ ಪ್ರವಾಹ ಸ್ಥಿತಿಯ ಬಗ್ಗೆ 426 ಪುಟಗಳ ವರದಿ ಸಲ್ಲಿಸಿರುವ ಇಎಸ್ ಸಿ ಮಹಾರಾಷ್ಟ್ರದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಗೆ ಕರ್ನಾಟಕ ಹೊಣೆಯಲ್ಲ ಎಂದು ಹೇಳಿದ್ದು, ಮಹಾರಾಷ್ಟ್ರದಲ್ಲಿ ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ವೇಳೆ ಕೃಷ್ಣ, ಭೀಮ ಹಾಗೂ ಇತರ ನದಿ ಕಣಿವೆ ಪ್ರದೇಶಗಳಲ್ಲಿ ಹಾಗೂ ಪಶ್ಚಿಮ ಹಾಗೂ ದಕ್ಷಿಣ ಭಾಗಗಳಲ್ಲಿ ನಡೆದಿರುವ ಅತಿಕ್ರಮಣ ಪ್ರವಾಹದಿಂದ ಹೆಚ್ಚಿನ ಹಾನಿ ಉಂಟಾಗಲು ಕಾರಣವಾಗಿರುವ ಅಂಶಗಳಲ್ಲಿದೆ ಎಂದು ಸಮಿತಿಯ ವರದಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT