ಕಾಂಗ್ರೆಸ್ ನಾಯಕ ಇಬೋಬಿ ಸಿಂಗ್ 
ದೇಶ

ಮಣಿಪುರ: ಬಿಜೆಪಿ ಸರ್ಕಾರ ತೀವ್ರ ಬಿಕ್ಕಟ್ಟಿನಲ್ಲಿ, ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್‍ ಸಿದ್ಧತೆ, ಸರ್ಕಾರ ರಚಿಸುವ ವಿಶ್ವಾಸ

ಮಣಿಪುರದಲ್ಲಿ ಮೂವರು ಬಿಜೆಪಿ ಶಾಸಕರು, ಮೈತ್ರಿಪಕ್ಷಗಳು ಸೇರಿದಂತೆ ಒಂಬತ್ತು ಶಾಸಕರು ಬುಧವಾರ ಸರ್ಕಾರಕ್ಕೆ ಬೆಂಬಲವನ್ನು ವಾಪಸ್‍ ಪಡೆಯುವುದರೊಂದಿಗೆ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ತೀವ್ರ ಬಿಕ್ಕಟ್ಟಿನಲ್ಲಿದೆ. 

ಇಂಫಾಲ್: ಮಣಿಪುರದಲ್ಲಿ ಮೂವರು ಬಿಜೆಪಿ ಶಾಸಕರು, ಮೈತ್ರಿಪಕ್ಷಗಳು ಸೇರಿದಂತೆ ಒಂಬತ್ತು ಶಾಸಕರು ಬುಧವಾರ ಸರ್ಕಾರಕ್ಕೆ ಬೆಂಬಲವನ್ನು ವಾಪಸ್‍ ಪಡೆಯುವುದರೊಂದಿಗೆ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ತೀವ್ರ ಬಿಕ್ಕಟ್ಟಿನಲ್ಲಿದೆ. 

ಬಿರೆನ್‍ ಸಿಂಗ್ ಸರ್ಕಾರ ಬಹುಮತ ಸಾಬೀತು ಪಡಿಸುವಂತೆ ಸೂಚಿಸಬೇಕು ಎಂದು ರಾಜ್ಯಪಾಲರಾದ ಡಾ.ನಜ್ಮಾ ಹೆಪ್ತುಲ್ಲಾ ಅವರನ್ನು ಒತ್ತಾಯಿಸುವುದಾಗಿ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಒ.ಇಬೊಬಿ ಸಿಂಗ್ ಹೇಳಿದ್ದಾರೆ. 
ಸರ್ಕಾರ ರಚಿಸಲು ರಾಜ್ಯಪಾಲರು ಕಾಂಗ್ರೆಸ್ ಪಕ್ಷವನ್ನು ಆಹ್ವಾನಿಸುತ್ತಾರೆ ಎಂಬ ವಿಶ್ವಾಸ ಹೊಂದಿರುವ ಕಾಂಗ್ರೆಸ್ ನಾಯಕರು ಮುಂದಿನ ಕಾರ್ಯತಂತ್ರಗಳ ಕುರಿತು ಗುರುವಾರ ಹುಮ್ಮಸ್ಸಿನಿಂದ ಓಡಾಡುತ್ತಿದ್ದರು.

ಬುಧವಾರ ಮೂವರು ಬಿಜೆಪಿ ಶಾಸಕರು ಶಾಸಕ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿಯ ಮೂವರು ಶಾಸಕರಾದ ಸ್ಯಾಮ್ಯುಯೆಲ್ ಜೆಂಡೈ, ಟಿಟಿ ಹಾಕಿಪ್, ಸುಭಾಷ್‍ ಚಂದ್ರ ಅವರನ್ನು ಮಾಜಿ ಮುಖ್ಯಮಂತ್ರಿ ಓ ಸಿ ಇಬೊಬಿ ಮತ್ತು ಇತರ ಕಾಂಗ್ರೆಸ್ ನಾಯಕರು ಔಪಚಾರಿಕವಾಗಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಬಿರೇನ್ ಸರ್ಕಾರದ ಸಚಿವರಾದ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ನಾಲ್ವರು ಶಾಸಕರು ಸಹ ಸರ್ಕಾರಕ್ಕೆ ಬೆಂಬಲವನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾಲ್ವರು ಶಾಸಕರಾದ ವೈ ಜಾಯ್‌ಕುಮಾರ್, ಎಲ್ ಜಯಂತಕುಮಾರ್, ಲೆಟ್‌ಪಾವೊ ಹಾಕಿಪ್ ಮತ್ತು ಎನ್ ಕಯಿಸಿ ಅವರು ರಾಜೀನಾಮೆ ಪತ್ರಗಳನ್ನು ನಿನ್ನೆ ಮುಖ್ಯಮಂತ್ರಿಗೆ ಸಲ್ಲಿಸಿದ್ದಾರೆ.ಎಐಟಿಸಿ ಶಾಸಕ ಎಲ್ ರೊಬಿಂದ್ರೋ ಮತ್ತು ಪಕ್ಷೇತರ ಶಾಸಕ ಆಶಾಬುದ್ದೀನ್ ಸಹ ಸರ್ಕಾರಕ್ಕೆ ತಮ್ಮ ಬೆಂಬಲ ವಾಪಸ್‍ ಪಡೆಯುವ ನಿರ್ಧಾರವನ್ನು ನಿನ್ನೆ ಪ್ರಕಟಿಸಿದ್ದಾರೆ.

ಸದ್ಯ ಕಾಂಗ್ರೆಸ್ ನೊಂದಿಗೆ 27 ಶಾಸಕರಿದ್ದು, ನಾಲ್ವರು ಎನ್‌ಪಿಪಿ ಶಾಸಕರು, ಎಐಟಿಸಿ ಮತ್ತು ಪಕ್ಷೇತರ ಶಾಸಕ ಸೇರಿ ಒಟ್ಟು 33 ಶಾಸಕರ ಬೆಂಬಲವನ್ನು ಹೊಂದಿದೆ. ಬಿಜೆಪಿ ಕಡೆ 26 ಶಾಸಕರಿದ್ದಾರೆ. ಇದೀಗ ಪಕ್ಷದ ಮೂವರು ಶಾಸಕರ ರಾಜೀನಾಮೆ ನಂತರ ಕೇವಲ 23 ಶಾಸಕರನ್ನು ಹೊಂದಿದೆ ಎಂದು ಇಬೋಬಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT