ಪ್ರಧಾನಿ ಮೋದಿ 
ದೇಶ

ಭಾರತಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ತಾತ್ಕಾಲಿಕ ಸದಸ್ಯತ್ವ: ವಿಶ್ವ ಸಮುದಾಯಕ್ಕೆ ಪ್ರಧಾನಿ ಮೋದಿ ಧನ್ಯವಾದ

ವಿಶ್ವಸಂಸ್ಥೆಯ ಭದ್ರತಾ ಮಂಡಳಿತ ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿ ಭಾರತ ಎರಡು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತಕ್ಕೆ ಅಭೂತಪೂರ್ವ ಬೆಂಬಲ ನೀಡಿದ ವಿಶ್ವ ಸಮುದಾಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಧನ್ಯವಾದಗಳನ್ನು ಹೇಳಿದ್ದಾರೆ. 

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿತ ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿ ಭಾರತ ಎರಡು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತಕ್ಕೆ ಅಭೂತಪೂರ್ವ ಬೆಂಬಲ ನೀಡಿದ ವಿಶ್ವ ಸಮುದಾಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಧನ್ಯವಾದಗಳನ್ನು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಜಾಗತಿಕವಾಗಿ ಶಾಂತಿ, ಭದ್ರತೆ, ಸ್ಥಿತಿಸ್ಥಾಪಕತ್ವ ಮತ್ತು ಸಮಾನತೆಯನ್ನು ಉತ್ತೇಜಿಸಲು ಭಾರತವು ಎಲ್ಲಾ ಸದಸ್ಯ ರಾಷ್ಟ್ರಗಳೊಂದಿಗೆ ಕೆಲಸ ಮಾಡಲಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವಕ್ಕಾಗಿ ಜಾಗತಿಕ ಸಮುದಾಯವು ತೋರಿಸಿದ ಅಗಾಧ ಬೆಂಬಲಕ್ಕೆ ತೀವ್ರ ಕೃತಜ್ಞತೆ ಸಲ್ಲಿಸುತ್ತೇನೆಂದು ಹೇಳಿದ್ದಾರೆ. 

75ನೇ ಅಧಿವೇಶನದ ಅಧ್ಯಕ್ಷ, ಭದ್ರತಾ ಮಂಡಳಿಯ ಐದು ಕಾಯಂ ಅಲ್ಲದ ಸದಸ್ಯ ದೇಶಗಳು ಹಾಗೂ ಆರ್ಥಿಕ–ಸಾಮಾಜಿಕ ಮಂಡಳಿಯ ಸದಸ್ಯ ಹುದ್ದೆಗೆ 193 ಸದಸ್ಯ ರಾಷ್ಟ್ರಗಳ ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಬುಧವಾರ ಚುನಾವಣೆ ನಡೆಯಿತು. ಕೋವಿಡ್ ಕಾರಣದಿಂದ ಮತದಾನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು. 

ಏಷ್ಯಾ–ಪೆಸಿಫಿಕ್ ಭಾಗದಿಂದ ಭಾರತ ಮಾತ್ರ ಸ್ಪರ್ಧಿಸಿತ್ತು. ಹೀಗಾಗಿ ಈ ಭಾಗದಿಂದ ಚುನಾವಣಾ ಕಣದಲ್ಲಿದ್ದ ಏಕೈಕ ರಾಷ್ಟ್ರ ಭಾರತವಾಗಿತ್ತು. ಭಾರತದ ಉಮೇದುವಾರಿಕೆಯನ್ನು ಏಷ್ಯಾ–ಪೆಸಿಫಿಕ್ ಭಾಗದ 55 ಸದಸ್ಯ ದೇಶಗಳ ಗುಂಪು ಅವಿರೋಧವಾಗಿ ಅನುಮೋದಿಸಿದ್ದವು. ವಿಶೇಷವೆಂದರೆ, ಚೀನಾ, ಪಾಕಿಸ್ತಾನ ಕೂಡ ಭಾರತದ ಆಯ್ಕೆಗೆ ಬೆಂಬಲ ಸೂಚಿಸಿದ್ದವು.  

ಭಾರತದೊಂದಿಗೆ, ಐರ್ಲೆಂಡ್, ಮೆಕ್ಸಿಕೊ ಮತ್ತು ನಾರ್ವೆ ಕೂಡ ಬುಧವಾರ ನಡೆದ ಭದ್ರತಾ ಮಂಡಳಿ ಚುನಾವಣೆಯಲ್ಲಿ ಆಯ್ಕೆಯಾಗಿವೆ. 

ಪ್ರತೀ ವರ್ಷ 2 ವರ್ಷಗಳ ಅವಧಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಅಲ್ಲದ ಸದಸ್ಯ ದೇಶಗಳ ಆಯ್ಕೆಗೆ ಚುನಾವಣೆ ನಡೆಯುತ್ತದೆ. 10 ಸದಸ್ಯ ಸ್ಥಾನಗಳನ್ನು ವಿಭಾಗವಾರು ಹಂಚಿಕೆ ಮಾಡಲಾಗಿದೆ. ಮೂರನೇ ಎರಡರಷ್ಟು ಬಹುಮತ ಪಡೆಯುವ ದೇಶಗಳು ಚುನಾವಣೆಯಲ್ಲಿ ಆಯ್ಕೆಯಾಗಲಿವೆ.  

ಭಾರತ ಈ ಹಿಂದೆ ಹಲವು ಭಾರಿ ಭದ್ರತಾ ಮಂಡಳಿಯ ಕಾಯಂ ಅಲ್ಲದ ಸದಸ್ಯ ದೇಶವಾಗಿ ಆಯ್ಕೆಯಾಗಿತ್ತು. 1950-1951, 1967-1968, 1972-1973, 1977-1978, 1984-1985, 1991-1992 ಮತ್ತು ಇತ್ತೀಚೆಗೆ 2011-2012ರಲ್ಲಿ ಖಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿ ಭದ್ರತಾ ಮಂಡಳಿಗೆ ಪ್ರವೇಶಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು, ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

SCROLL FOR NEXT