ಕಾಂಗ್ರೆಸ್ ನಾಯಕ ಇಬೋಬಿ ಸಿಂಗ್ 
ದೇಶ

ಮಣಿಪುರ: ಸರ್ಕಾರ ರಚನೆಗೆ ಕಾಂಗ್ರೆಸ್ ಹಕ್ಕು ಮಂಡನೆ, ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಒತ್ತಾಯ

ಮಣಿಪುರ ಮುಖ್ಯಮಂತ್ರಿ ಎನ್‍ ಬಿರೇನ್‍ ಸಿಂಗ್ ಸರ್ಕಾರ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಶೀಘ್ರವೇ ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲರಾದ ಡಾ.ನಜ್ಮಾ ಹೆಪ್ತುಲ್ಲಾ ಅವರನ್ನು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ಇಂಫಾಲ್: ಮಣಿಪುರ ಮುಖ್ಯಮಂತ್ರಿ ಎನ್‍ ಬಿರೇನ್‍ ಸಿಂಗ್ ಸರ್ಕಾರ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಶೀಘ್ರವೇ ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲರಾದ ಡಾ.ನಜ್ಮಾ ಹೆಪ್ತುಲ್ಲಾ ಅವರನ್ನು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಅವಕಾಶ ನೀಡುವಂತೆ ಒಕ್ರಮ್ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ರಾಜ್ಯಪಾಲೆ ನಜ್ಮಾ ಹೆಪ್ತುಲ್ಲಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಅಲ್ಲದೆ  ವಿಧಾನಸಭೆ ಸ್ಪೀಕರ್ ವೈ ಖೇಮ್‌ಚಂದ್ ಅವರನ್ನು ವಜಾಗೊಳಿಸುವಂತೆ ನೋಟಿಸ್ ನೀಡಿದ್ದಾರೆ.

ಇಬೋಬಿ ಸಿಂಗ್ ಅವರು ಟಿಎಂಸಿ, ಎನ್ ಪಿಪಿ ಮತ್ತು ಪಕ್ಷೇತರ ಶಾಸಕರ ಬೆಂಬಲವಿರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದೆ.

ನಿನ್ನೆ ರಾತ್ರಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನವಾಗುವ ಹಂತಕ್ಕೆ ತಲುಪಿದ್ದು, ಬಿಜೆಪಿಯ ಮೂವರು ಸೇರಿ ಒಂಬತ್ತು ಶಾಸಕರು, ಎನ್ ಬಿರೇನ್ ಸಿಂಗ್ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್‍ ಪಡೆದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ನಿರ್ಧಾರ ಪ್ರಕಟಿಸಿದ್ದರು.

ಮೂವರು ಬಿಜೆಪಿ ಶಾಸಕರು ಈಗಾಗಲೇ ಶಾಸಕ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ.

ಒಂಬತ್ತು ಶಾಸಕರ ಬಲ ಕಳೆದುಕೊಂಡ ಬಿಜೆಪಿ ಸರ್ಕಾರ ಈಗ ಅಲ್ಪ ಮತಕ್ಕೆ ಕುಸಿದಿದ್ದು, 60 ಸದಸ್ಯಬಲದ ಮಣಿಪುರ ವಿಧಾನಸಭೆಯಲ್ಲಿ ಬಿಜೆಪಿ ಬಲ 23ಕ್ಕೆ ಇಳಿದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT