ಸಂಗ್ರಹ ಚಿತ್ರ 
ದೇಶ

ಕೊರೋನಾ ಎಫೆಕ್ಟ್: ಪುರಿ ಜಗನ್ನಾಥ ರಥ ಯಾತ್ರೆಗೆ 'ಸುಪ್ರೀಂ' ಬ್ರೇಕ್!

ಒಡಿಶಾದ ಪುರಿಯಲ್ಲಿ ಪ್ರತೀವರ್ಷ ನಡೆಯುವ ವಿಶ್ವವಿಖ್ಯಾತ ಜಗನ್ನಾಥ ಯಾತ್ರೆಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. 

ನವದೆಹಲಿ: ಒಡಿಶಾದ ಪುರಿಯಲ್ಲಿ ಪ್ರತೀವರ್ಷ ನಡೆಯುವ ವಿಶ್ವವಿಖ್ಯಾತ ಜಗನ್ನಾಥ ಯಾತ್ರೆಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. 

ಪ್ರಸಕ್ತ ಸಾಲಿನ ಜಗನ್ನಾಥ ರಥ ಯಾತ್ರೆ ನಡೆದರೆ ಸಾರ್ವಜನಿಕ ಆರೋಗ್ಯ ಅಪಾಯಕ್ಕೆ ಸಿಲುಕಲಿದೆ ಎಂದು ಹೇಳಿ ಒಡಿಶಾದ ಎನ್'ಜಿಒ ಸಂಸ್ಥೆಯೊಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. 

ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯ, ಜಗನ್ನಾಥ ಯಾತ್ರೆಯಲ್ಲಿ ರಥೆ ಎಳೆಯಲಾಗುತ್ತದೆ. ಈ ವೇಳೆ ಜನರಿಂದ ಜನರಿಗೆ ಸಂಪರ್ಕ ಹೆಚ್ಚಾಗುತ್ತದೆ. ಇದರಿಂದ ಸಾಮಾಜಿಕ ಅಂತರ ನಿಯಮ ಉಲ್ಲಂಘನೆಯಾದಂತಾಗುತ್ತದೆ. ಜನರ ಆರೋಗ್ಯ ಹಾಗೂ ಸುರಕ್ಷತಾ ಸೃಷಅಟಿಯಿಂದ ಪ್ರತೀ ವರ್ಷ ನಡೆಯುತ್ತಿದ್ದ ಜಗನ್ನಾಥ ಯಾತ್ರೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಈ ವೇಳೆ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಶಾರ್ ಮೆಹ್ತಾ ಅವರು, ಯಾತ್ರೆಗೆ ಸಂಪೂರ್ಣ ನಿಷೇಧ ಹೇರದೆ, ಸಾರ್ವಜನಿಕರು ಪಾಲ್ಗೊಳ್ಳದಂತೆ ದೇವಾಲಯದ ಸಂಪ್ರದಾಯಗಳನ್ನು ಮುಂದುವರೆಸಲು ಅನುಮತಿ ನೀಡುವಂತೆ ಮನವಿ ಮಾಡಿಕೊಂಡರು. 

ಈ ವೇಳೆ ಪ್ರತಿಕ್ರಿಯೆ ನೀಡಿದ ನ್ಯಾಯಾಲಯ, ಈ ಬಗ್ಗೆ ನಮಗೆ ಸಾಕಷ್ಟು ಅನುಭವಗಳಿವೆ. ಸಾಂಪ್ರದಾಯಿಕ ಚಟುವಟಿಕೆಗಳಿಗೆ ಅನುಮತಿ ನೀಡಿದ್ದೇ ಆದರೆ, ಅಲ್ಲಿ ಜನರು ಸೇರುವುದು ಸಾಮಾನ್ಯವಾಗುತ್ತದೆ. ಪ್ರಸ್ತುತ ಇರುವ ಕಠಿಣ ಪರಿಸ್ಥಿತಿಯಲ್ಲಿ ನಾವು ಯಾತ್ರೆಗೆ ಅವಕಾಶ ನೀಡಿದ್ದೇ ಆದರೆ, ಜಗನ್ನಾಥನೇ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT