ಸಂಗ್ರಹ ಚಿತ್ರ 
ದೇಶ

ಕೊರೋನಾ ಎಫೆಕ್ಟ್: ಪುರಿ ಜಗನ್ನಾಥ ರಥ ಯಾತ್ರೆಗೆ 'ಸುಪ್ರೀಂ' ಬ್ರೇಕ್!

ಒಡಿಶಾದ ಪುರಿಯಲ್ಲಿ ಪ್ರತೀವರ್ಷ ನಡೆಯುವ ವಿಶ್ವವಿಖ್ಯಾತ ಜಗನ್ನಾಥ ಯಾತ್ರೆಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. 

ನವದೆಹಲಿ: ಒಡಿಶಾದ ಪುರಿಯಲ್ಲಿ ಪ್ರತೀವರ್ಷ ನಡೆಯುವ ವಿಶ್ವವಿಖ್ಯಾತ ಜಗನ್ನಾಥ ಯಾತ್ರೆಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. 

ಪ್ರಸಕ್ತ ಸಾಲಿನ ಜಗನ್ನಾಥ ರಥ ಯಾತ್ರೆ ನಡೆದರೆ ಸಾರ್ವಜನಿಕ ಆರೋಗ್ಯ ಅಪಾಯಕ್ಕೆ ಸಿಲುಕಲಿದೆ ಎಂದು ಹೇಳಿ ಒಡಿಶಾದ ಎನ್'ಜಿಒ ಸಂಸ್ಥೆಯೊಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. 

ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯ, ಜಗನ್ನಾಥ ಯಾತ್ರೆಯಲ್ಲಿ ರಥೆ ಎಳೆಯಲಾಗುತ್ತದೆ. ಈ ವೇಳೆ ಜನರಿಂದ ಜನರಿಗೆ ಸಂಪರ್ಕ ಹೆಚ್ಚಾಗುತ್ತದೆ. ಇದರಿಂದ ಸಾಮಾಜಿಕ ಅಂತರ ನಿಯಮ ಉಲ್ಲಂಘನೆಯಾದಂತಾಗುತ್ತದೆ. ಜನರ ಆರೋಗ್ಯ ಹಾಗೂ ಸುರಕ್ಷತಾ ಸೃಷಅಟಿಯಿಂದ ಪ್ರತೀ ವರ್ಷ ನಡೆಯುತ್ತಿದ್ದ ಜಗನ್ನಾಥ ಯಾತ್ರೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಈ ವೇಳೆ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಶಾರ್ ಮೆಹ್ತಾ ಅವರು, ಯಾತ್ರೆಗೆ ಸಂಪೂರ್ಣ ನಿಷೇಧ ಹೇರದೆ, ಸಾರ್ವಜನಿಕರು ಪಾಲ್ಗೊಳ್ಳದಂತೆ ದೇವಾಲಯದ ಸಂಪ್ರದಾಯಗಳನ್ನು ಮುಂದುವರೆಸಲು ಅನುಮತಿ ನೀಡುವಂತೆ ಮನವಿ ಮಾಡಿಕೊಂಡರು. 

ಈ ವೇಳೆ ಪ್ರತಿಕ್ರಿಯೆ ನೀಡಿದ ನ್ಯಾಯಾಲಯ, ಈ ಬಗ್ಗೆ ನಮಗೆ ಸಾಕಷ್ಟು ಅನುಭವಗಳಿವೆ. ಸಾಂಪ್ರದಾಯಿಕ ಚಟುವಟಿಕೆಗಳಿಗೆ ಅನುಮತಿ ನೀಡಿದ್ದೇ ಆದರೆ, ಅಲ್ಲಿ ಜನರು ಸೇರುವುದು ಸಾಮಾನ್ಯವಾಗುತ್ತದೆ. ಪ್ರಸ್ತುತ ಇರುವ ಕಠಿಣ ಪರಿಸ್ಥಿತಿಯಲ್ಲಿ ನಾವು ಯಾತ್ರೆಗೆ ಅವಕಾಶ ನೀಡಿದ್ದೇ ಆದರೆ, ಜಗನ್ನಾಥನೇ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT