ಚೀನಾ ಯೋಧರು ಬಳಸಿದ್ದಾರೆನ್ನಲಾಗುತ್ತಿದ್ದ ಮೊಳೆಗಳುಳ್ಳ ರಾಡ್ 
ದೇಶ

ಮೊಳೆಗಳುಳ್ಳ ರಾಡ್ ಬಳಸಿ ಭಾರತೀಯ ಯೋಧರ ಮೇಲೆ ಚೀನಾ ಹಲ್ಲೆ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್!

ಲಡಾಖ್'ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಯೋಧರ ಮೇಲೆ ಚೀನಾ ಭೀಕರವಾಗಿ ಹಲ್ಲೆ ನಡೆಸಿದ್ದು, ಈ ವೇಳೆ ಚೀನಾ ಯೋಧರು ಮೊಳೆಗಳುಳ್ಳ ರಾಡ್ ಬಳಸಿ ಭೀಕರವಾಗಿ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಈ ಕುರಿತು ರಕ್ಷಣಾ ವಿಶ್ಲೇಷಕರೊಬ್ಬರು ಹಂಚಿಕೊಂಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ನವದೆಹಲಿ: ಲಡಾಖ್'ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಯೋಧರ ಮೇಲೆ ಚೀನಾ ಭೀಕರವಾಗಿ ಹಲ್ಲೆ ನಡೆಸಿದ್ದು, ಈ ವೇಳೆ ಚೀನಾ ಯೋಧರು ಮೊಳೆಗಳುಳ್ಳ ರಾಡ್ ಬಳಸಿ ಭೀಕರವಾಗಿ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಈ ಕುರಿತು ರಕ್ಷಣಾ ವಿಶ್ಲೇಷಕರೊಬ್ಬರು ಹಂಚಿಕೊಂಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ರಕ್ಷಣಾ ವಿಶ್ಲೇಷಕ ಅಜಯ್ ಶುಕ್ಲಾ ಎಂಬುವವರು ಈ ಫೋಟೋವನ್ನು ಹಂಚಿಕೊಂಡಿದ್ದು, ಚೀನಾ ಯೋಧರ ವರ್ತನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. 

ಲಡಾಖ್ ಬಳಿ ಚೀನಾ ಹಾಗೂ ಭಾರತೀಯ ಯೋಧರ ನಡುವೆ ಭಾರೀ ಕಾಳಗವೇ ನಡೆದಿದ್ದು, ಚೀನಾ ಯೋಧರು ಗಡಿಯಲ್ಲಿ ಹತ್ಯಾಕಾಂಡವನ್ನೇ ನಡೆಸಿದ್ದಾರೆ. ಈ ಘಟನೆ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಭಾರೀ ಸದ್ದು ಮಾಡುತ್ತಿದೆ. 

ಈ ನಡುವೆ ಉಭಯ ದೇಶಗಳ ಮೇಜರ್ ಜನರಲ್ ಗಳು ನಿನ್ನೆಯಷ್ಟೇ ಮಾತುಕತೆ ನಡೆಸಿದ್ದು, ಮೇಲ್ನೋಟಕ್ಕೆ ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಒಳಗೊಳಗೆ ಯೋಧರು ಅಗ್ನಿಕುಂಟದಂತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ರಾಡ್ ಬಳಸಿ ದಾಳಿ ನಡೆಸುವ ಕುತಂತ್ರ ಬುದ್ಧಿ ಇಷ್ಟು ದಿನ ಪಾಕಿಸ್ತಾನ ನಡೆಸುತ್ತಿತ್ತು. ಆದರೆ, ಇದೀಗ ಪಾಕಿಸ್ತಾನ ಸೇನೆಯ ಬ್ಯಾಟ್ ಪಡೆಯನ್ನು ಚೀನಾ ಯೋಧರೂ ಕೂಡ ಅನುಸರಿಸಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರೂರು ಕಾಲ್ತುಳಿತ ದುರಂತ: 36 ಮಂದಿ ಸಾವು; ತಮಿಳುನಾಡಿನಿಂದ ವರದಿ ಕೇಳಿದ ಕೇಂದ್ರ; TVK ವಿಜಯ್ ಪ್ರತಿಕ್ರಿಯೆ ಏನು?

ಕರೂರ್ ಕಾಲ್ತುಳಿತ ಘಟನೆ ತನಿಖೆಗೆ ಆಯೋಗ; ಮೃತರ ಕುಟುಂಬಗಳಿಗೆ 10 ಲಕ್ಷ ರೂ ಪರಿಹಾರ: ಸಿಎಂ ಸ್ಟಾಲಿನ್ ಘೋಷಣೆ

ನಟ ವಿಜಯ್‌ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ: 36ಕ್ಕೂ ಹೆಚ್ಚು ಮಂದಿ ಸಾವು; ಪ್ರಧಾನಿ ಸಂತಾಪ; ಸಿಎಂ ಸ್ಟಾಲಿನ್ ಹೇಳಿದ್ದು ಏನು?

Asia CUP 2025: ಭಾರತ-ಪಾಕ್ ಫೈನಲ್ ಪಂದ್ಯಕ್ಕೂ ಮುನ್ನ ಕಿಡಿ ಹೊತ್ತಿಸಿದ PCB ಮುಖ್ಯಸ್ಥ! ಏನಿದು?

ನಟ ವಿಜಯ್‌ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ: 8 ಮಕ್ಕಳು ಸೇರಿ 36 ಮಂದಿ ಸಾವು; 40 ಜನರಿಗೆ ಗಂಭೀರ ಗಾಯ!

SCROLL FOR NEXT