ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ 
ದೇಶ

ದೆಹಲಿಗೆ ಬರುವವರಿಗೆ 5 ದಿನ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಆದೇಶ ಹಿಂಪಡೆದ ಲೆಫ್ಟಿನೆಂಟ್ ಗವರ್ನರ್

ದೆಹಲಿಯ ಆಪ್ ಸರ್ಕಾರದ ತೀವ್ರ ವಿರೋಧದ ನಂತರ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ಕೋವಿಡ್-19 ರೋಗಿಗಳಿಗೆ 5 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ.

ನವದೆಹಲಿ: ದೆಹಲಿಯ ಆಪ್ ಸರ್ಕಾರದ ತೀವ್ರ ವಿರೋಧದ ನಂತರ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ಕೋವಿಡ್-19 ರೋಗಿಗಳಿಗೆ 5 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ.

ಆದೇಶವನ್ನು ಹಿಂಪಡೆದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಕಚೇರಿ ಮಾಡಿರುವ ಟ್ವೀಟ್ ನಲ್ಲಿ, ಕ್ಲಿನಿಕಲ್ ಪರೀಕ್ಷೆಯ ನಂತರ ಆಸ್ಪತ್ರೆಯ ಅಗತ್ಯವಿಲ್ಲದಿರುವ ಕೋವಿಡ್-19 ಪಾಸಿಟಿವ್ ಇರುವವರು, ಮನೆಯಲ್ಲಿ ಸ್ವ ನಿರ್ಬಂಧದಲ್ಲಿರಲು ಸರಿಯಾದ ಸೌಲಭ್ಯ ಹೊಂದಿಲ್ಲದವರು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಬೇಕು ಎಂದು ಹೇಳಿದ್ದಾರೆ.

ಕೋವಿಡ್-19 ರೋಗಿಗಳಿಗೆ ದೆಹಲಿಯಲ್ಲಿ ಕಡ್ಡಾಯವಾಗಿ 5 ದಿನ ಸಾಂಸ್ಥಿಕ ಕ್ವಾರಂಟೈನ್ ಇರಬೇಕು ಎಂಬ ರಾಜ್ಯಪಾಲರ ಆದೇಶವನ್ನು ದೆಹಲಿ ಸರ್ಕಾರ ವಿರೋಧಿಸಿತ್ತು. ಇದೊಂದು ಅನಿಯಂತ್ರಿತ ನಡೆಯಾಗಿದ್ದು ರಾಷ್ಟ್ರ ರಾಜಧಾನಿಯ ಜನರನ್ನು ಖಂಡಿತವಾಗಿಯೂ ತೊಂದರೆಗೀಡು ಮಾಡುತ್ತದೆ, ರಾಜ್ಯಪಾಲರ ಸರ್ವಾಧಿಕಾರ ನಡೆಯನ್ನು ಇದು ತೋರಿಸುತ್ತದೆ ಎಂದು ಆಪ್ ಹಿರಿಯ ನಾಯಕ ಸಂಜಯ್ ಸಿಂಗ್ ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT