ಹುತಾತ್ಮ ಯೋಧನಿಗೆ ಪುಶ್ಪ ನಮನ ಸಲ್ಲಿಸಿದ ಹಿಮಾಚಲ ಪ್ರದೇಶ ಸಿಎಂ 
ದೇಶ

ಹಿಮಾಚಲ ಪ್ರದೇಶ ಶಾಲೆಗೆ ಗಾಲ್ವಾನ್ ಹುತಾತ್ಮ ವೀರಯೋಧನ ಹೆಸರು!

ಚೀನಾ ಯೋಧರೊಂದಿಗಿನ ಸಂಘರ್ಷದಲ್ಲಿ ವೀರಮರಣನಪ್ಪಿದ ಸೆಪೋಯ್ ಅಂಕುಶ್ ಠಾಕೂರ್ ಅವರ ಹೆಸರನ್ನು ಹಿಮಾಚಲ ಪ್ರದೇಶದಲ್ಲಿನ ಶಾಲೆಗೆ ಮರುನಾಮಕರಣ ಮಾಡಲಾಗಿದೆ.

ಶಿಮ್ಲಾ: ಚೀನಾ ಯೋಧರೊಂದಿಗಿನ ಸಂಘರ್ಷದಲ್ಲಿ ವೀರಮರಣನಪ್ಪಿದ ಸೆಪೋಯ್ ಅಂಕುಶ್ ಠಾಕೂರ್ ಅವರ ಹೆಸರನ್ನು ಹಿಮಾಚಲ ಪ್ರದೇಶದಲ್ಲಿನ ಶಾಲೆಗೆ ಮರುನಾಮಕರಣ ಮಾಡಲಾಗಿದೆ.

ಸಿಎಂ ಜೈರಾಮ್ ಠಾಕೂರ್ ಅವರು ಕೊರೋಹ್ತಾ ಗ್ರಾಮದಲ್ಲಿರುವ ಹುತಾತ್ಮ ಯೋಧ ಸೆಪೋಯ್ ಅಂಕುಶ್ ಠಾಕೂರ್ ಅವರ ಮನೆಗೆ ತೆರಳಿ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದರು. ಈ ವೇಳೆ ಕುಟುಂಬಸ್ಖರನ್ನು ಸಂತೈಸಿದ ಅವರು ಕುಟುಂಬಸ್ಥರಿಗೆ 20 ಲಕ್ಷ ರೂ ಪರಿಹಾರ ನೀಡುವುದಾಗಿ ಆಶ್ವಾಸನೆ ನೀಡಿದರು. 

ಯೋಧ ಸೆಪೋಯ್ ಅಂಕುಶ್ ಠಾಕೂರ್ ಬಲಿದಾನವನ್ನು ದೇಶ ಎಂದಿಗೂ ಮರೆಯುವುದಿಲ್ಲ. ಅವರ ಕುರಿತಂತೆ ದೇಶ ಹೆಮ್ಮೆಯಿಂದ ಹೇಳಿಕೊಳ್ಳುತ್ತದೆ ಎಂದು ಹೇಳಿದರು. ಅಂತೆಯೇ ಇದೇ ಸಂದರ್ಭದಲ್ಲಿ ಸ್ಥಳೀಯ ಶಾಸಕರು ತಮ್ಮ ಗ್ರಾಮದಲ್ಲಿ ಯೋಧನ ಪ್ರತಿಮೆ ನಿರ್ಮಾಣ ಮಾಡಲಾಗುತ್ತದೆ. ಅಂತೆಯೇ ಯೋಧನ ಗ್ರಾಮಕ್ಕೆ ಸಾಗುವ ರಸ್ತೆಗಳನ್ನು ಕೂಡವೇ ದುರಸ್ತಿ ಮಾಡಲಾಗುತ್ತದೆ ಎಂದು ಹೇಳಿದರು. 

ಇನ್ನು ಶಾಲಾ ಮಕ್ಕಳ ನೆನಪಿನಲ್ಲಿ ವೀರಯೋಧನ ನೆನಪು ಅಚ್ಚಳಿಯುವಂತೆ ಮಾಡಿದ ಹಿಮಾಚಲ ಪ್ರದೇಶ ಸರ್ಕಾರದ ನಡೆಗೆ ಇದೀಗ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚುನಾವಣೆಗೂ ಮುನ್ನ ಯೋಗಿ ಸರ್ಕಾರದಲ್ಲಿ ಮಹತ್ತರ ಬದಲಾವಣೆ: ಸಂಪುಟ ಪುನಾರಚನೆ; 6 ಹೊಸ ಸಚಿವರ ಸೇರ್ಪಡೆ

IPL 2026: ನಿರ್ಣಾಯಕ ಪಂದ್ಯದಲ್ಲಿ ಲಖನೌ ವಿರುದ್ಧ ಗೆದ್ದ CSK; ಪ್ಲೇ ಆಫ್ ಕನಸು ಜೀವಂತ!

IPL 2026, RCB vs MI: MS Dhoni ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಜೋಡಿ

ಕೇರಳ ಸಿಎಂ ಆಯ್ಕೆ: ಕೆಸಿ ವೇಣುಗೋಪಾಲ್ ರಾಹುಲ್ ಗಾಂಧಿಯ ಆದ್ಯತೆ; ಕುತೂಹಲ ಮೂಡಿಸಿದ ಖಾಸಗಿ ಭೇಟಿ!

Tamil Nadu: 'ಡಿಎಂಕೆ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ': ಇಚ್ಛಾಶಕ್ತಿ ಬೇಕು ಎಂದ Stalin ಗೆ ಶಾಕ್ ಕೊಟ್ಟ ಸಿಎಂ ವಿಜಯ್

SCROLL FOR NEXT