ಹುತಾತ್ಮ ಯೋಧನಿಗೆ ಪುಶ್ಪ ನಮನ ಸಲ್ಲಿಸಿದ ಹಿಮಾಚಲ ಪ್ರದೇಶ ಸಿಎಂ 
ದೇಶ

ಹಿಮಾಚಲ ಪ್ರದೇಶ ಶಾಲೆಗೆ ಗಾಲ್ವಾನ್ ಹುತಾತ್ಮ ವೀರಯೋಧನ ಹೆಸರು!

ಚೀನಾ ಯೋಧರೊಂದಿಗಿನ ಸಂಘರ್ಷದಲ್ಲಿ ವೀರಮರಣನಪ್ಪಿದ ಸೆಪೋಯ್ ಅಂಕುಶ್ ಠಾಕೂರ್ ಅವರ ಹೆಸರನ್ನು ಹಿಮಾಚಲ ಪ್ರದೇಶದಲ್ಲಿನ ಶಾಲೆಗೆ ಮರುನಾಮಕರಣ ಮಾಡಲಾಗಿದೆ.

ಶಿಮ್ಲಾ: ಚೀನಾ ಯೋಧರೊಂದಿಗಿನ ಸಂಘರ್ಷದಲ್ಲಿ ವೀರಮರಣನಪ್ಪಿದ ಸೆಪೋಯ್ ಅಂಕುಶ್ ಠಾಕೂರ್ ಅವರ ಹೆಸರನ್ನು ಹಿಮಾಚಲ ಪ್ರದೇಶದಲ್ಲಿನ ಶಾಲೆಗೆ ಮರುನಾಮಕರಣ ಮಾಡಲಾಗಿದೆ.

ಸಿಎಂ ಜೈರಾಮ್ ಠಾಕೂರ್ ಅವರು ಕೊರೋಹ್ತಾ ಗ್ರಾಮದಲ್ಲಿರುವ ಹುತಾತ್ಮ ಯೋಧ ಸೆಪೋಯ್ ಅಂಕುಶ್ ಠಾಕೂರ್ ಅವರ ಮನೆಗೆ ತೆರಳಿ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದರು. ಈ ವೇಳೆ ಕುಟುಂಬಸ್ಖರನ್ನು ಸಂತೈಸಿದ ಅವರು ಕುಟುಂಬಸ್ಥರಿಗೆ 20 ಲಕ್ಷ ರೂ ಪರಿಹಾರ ನೀಡುವುದಾಗಿ ಆಶ್ವಾಸನೆ ನೀಡಿದರು. 

ಯೋಧ ಸೆಪೋಯ್ ಅಂಕುಶ್ ಠಾಕೂರ್ ಬಲಿದಾನವನ್ನು ದೇಶ ಎಂದಿಗೂ ಮರೆಯುವುದಿಲ್ಲ. ಅವರ ಕುರಿತಂತೆ ದೇಶ ಹೆಮ್ಮೆಯಿಂದ ಹೇಳಿಕೊಳ್ಳುತ್ತದೆ ಎಂದು ಹೇಳಿದರು. ಅಂತೆಯೇ ಇದೇ ಸಂದರ್ಭದಲ್ಲಿ ಸ್ಥಳೀಯ ಶಾಸಕರು ತಮ್ಮ ಗ್ರಾಮದಲ್ಲಿ ಯೋಧನ ಪ್ರತಿಮೆ ನಿರ್ಮಾಣ ಮಾಡಲಾಗುತ್ತದೆ. ಅಂತೆಯೇ ಯೋಧನ ಗ್ರಾಮಕ್ಕೆ ಸಾಗುವ ರಸ್ತೆಗಳನ್ನು ಕೂಡವೇ ದುರಸ್ತಿ ಮಾಡಲಾಗುತ್ತದೆ ಎಂದು ಹೇಳಿದರು. 

ಇನ್ನು ಶಾಲಾ ಮಕ್ಕಳ ನೆನಪಿನಲ್ಲಿ ವೀರಯೋಧನ ನೆನಪು ಅಚ್ಚಳಿಯುವಂತೆ ಮಾಡಿದ ಹಿಮಾಚಲ ಪ್ರದೇಶ ಸರ್ಕಾರದ ನಡೆಗೆ ಇದೀಗ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT