ಪ್ರಧಾನಿ ನರೇಂದ್ರ ಮೋದಿ 
ದೇಶ

ಕೊರೋನಾ ಸಾಂಕ್ರಾಮಿಕ ಮಧ್ಯೆ 'ಪ್ರಾಣಾಯಾಮ' ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿ:ಪಿಎಂ ಮೋದಿ

ಯೋಗದಲ್ಲಿ ಉಸಿರಾಟವನ್ನು ನಿಯಂತ್ರಿಸುವ ಅಭ್ಯಾಸ ಮಾಡುವ ಪ್ರಾಣಾಯಾಮ ಮಾಡುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಅನುಕೂಲವಾಗುತ್ತದೆ. ಪ್ರಸ್ತುತ ದೇಶದಲ್ಲಿ ಕೊರೋನಾ ವೈರಸ್ ಸೋಂಕಿನ ಸಮಸ್ಯೆ ಇರುವ ಸಂದರ್ಭದಲ್ಲಿ ಪ್ರಾಣಾಯಾಮ ಮಾಡುವ ಮೂಲಕ ಕೊರೋನಾ ಬರುವುದನ್ನು ತಡೆಗಟ್ಟಲು ಸಹಾಯವಾಗಬಹುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಯೋಗದಲ್ಲಿ ಉಸಿರಾಟವನ್ನು ನಿಯಂತ್ರಿಸುವ ಅಭ್ಯಾಸ ಮಾಡುವ ಪ್ರಾಣಾಯಾಮ ಮಾಡುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಅನುಕೂಲವಾಗುತ್ತದೆ. ಪ್ರಸ್ತುತ ದೇಶದಲ್ಲಿ ಕೊರೋನಾ ವೈರಸ್ ಸೋಂಕಿನ ಸಮಸ್ಯೆ ಇರುವ ಸಂದರ್ಭದಲ್ಲಿ ಪ್ರಾಣಾಯಾಮ ಮಾಡುವ ಮೂಲಕ ಕೊರೋನಾ ಬರುವುದನ್ನು ತಡೆಗಟ್ಟಲು ಸಹಾಯವಾಗಬಹುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಕೊರೋನಾ ವೈರಸ್ ಸೋಂಕು ನಮ್ಮ ಉಸಿರಾಟ ವ್ಯವಸ್ಥೆ ಮಾಡಿ ದಾಳಿ ಮಾಡುತ್ತದೆ. ಇಂತಹ ಸಂದರ್ಭದಲ್ಲಿ ನಮ್ಮ ಉಸಿರಾಟದ ವ್ಯವಸ್ಥೆಯನ್ನು ಪ್ರಾಣಾಯಾಮದ ಮೂಲಕ ಹೆಚ್ಚು ನಿಯಂತ್ರಿಸಬಹುದು. ಸಾಮಾನ್ಯವಾಗಿ ಪ್ರಾಣಾಯಾಮದಲ್ಲಿ ಅನೋಮ, ವಿಲೋಮ ಬಹಳ ಮುಖ್ಯವಾದ ತಂತ್ರವಾಗಿದೆ. ಇದನ್ನು ನಾವು ದಿನನಿತ್ಯ ಮಾಡುತ್ತಾ ಹೋದರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಜೀರ್ಣಕ್ರಿಯೆಯನ್ನು ಸಹ ಬಲಪಡಿಸುತ್ತದೆ ಎಂದು ಹೇಳಿದರು.

6ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ದೆಹಲಿಯಲ್ಲಿ ಭಾಷಣ ಮಾಡಿದ ಅವರು,ವಿಶ್ವದ ಹಲವು ಕಡೆಗಳಲ್ಲಿ ಕೊರೋನಾ ರೋಗಿಗಳು ಯೋಗ ಮಾಡುವ ಮೂಲಕ ಪ್ರಯೋಜನ ಕಂಡುಕೊಂಡಿದ್ದಾರೆ. ಕಷ್ಟದ ಸಮಯಗಳಲ್ಲಿ ದೇಹದಲ್ಲಿ ಹೋರಾಟ ನಡೆಸಲು ಯೋಗ ಆತ್ಮವಿಶ್ವಾಸ ನೀಡಿ ರೋಗದ ವಿರುದ್ಧ ಜಯ ಸಾಧಿಸಲು ಸಹಾಯ ಮಾಡುತ್ತದೆ. ಯೋಗದಿಂದ ಶರೀರ ಮತ್ತು ಶಾರೀರ ಎರಡರ ಆರೋಗ್ಯ ಸಿಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT