ಪುರಿ ಜಗನ್ನಾಥ ರಥೋತ್ಸವದ ಸಾಂದರ್ಭಿಕ ಚಿತ್ರ 
ದೇಶ

ಪುರಿ ಜಗನ್ನಾಥ ರಥಯಾತ್ರೆ ತಡೆ ಪ್ರಶ್ನಿಸಿ ಅರ್ಜಿ: ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ

ಐತಿಹಾಸಿಕ ಪುರಿ ಜಗನ್ನಾಥ ರಥೋತ್ಸವಕ್ಕೆ ತಡೆ ನೀಡಿದ್ದನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ನಡೆಯಲಿದೆ.

ನವದೆಹಲಿ: ಐತಿಹಾಸಿಕ ಪುರಿ ಜಗನ್ನಾಥ ರಥೋತ್ಸವಕ್ಕೆ ತಡೆ ನೀಡಿದ್ದನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ನಡೆಯಲಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಐತಿಹಾಸಿಕ ಯಾತ್ರೆ ಈ ವರ್ಷ ನಡೆಸಬಾರದೆಂದು ಸುಪ್ರೀಂ ಕೋರ್ಟ್ ಕಳೆದ 18ರಂದು ಆದೇಶ ನೀಡಿತ್ತು. ಈ ಆದೇಶ ಹೊರಬಂದ ಮರುದಿನ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಆದೇಶದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿ ರಥಯಾತ್ರೆಗೆ ಅನುವು ಮಾಡಿಕೊಡಬೇಕೆಂದು ಮನವಿ ಸಲ್ಲಿಸಲಾಗಿತ್ತು.

ಒಡಿಶಾದ ಪುರಿ ಜಗನ್ನಾಥ ರಥ ಯಾತ್ರೆ ಪ್ರತಿವರ್ಷ 10ರಿಂದ 12 ದಿನಗಳ ಕಾಲ ನಡೆಯುತ್ತದೆ, ಲಕ್ಷಾಂತರ ಜನರು ಈ ಯಾತ್ರೆಗೆ ಸಾಕ್ಷಿಯಾಗುತ್ತಾರೆ. ಜೂನ್ 23ಕ್ಕೆ ನಿಗದಿಯಾಗಿದ್ದ ಬಹುದ ಜಾತ್ರೆಯನ್ನು ನಂತರ ಜುಲೈ 1ಕ್ಕೆ ಮುಂದೂಡಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶ ನೀಡಿ ಈ ವರ್ಷ ರಥಯಾತ್ರೆ ನಡೆಸುವುದು ಬೇಡ ಎಂದು ಆದೇಶ ಕೊಟ್ಟಿತು.

ಜಗನ್ನಾಥ, ಬಾಲಭದ್ರ ಮತ್ತು ದೇವಿ ಸುಭದ್ರ ಮೂರ್ತಿಗಳನ್ನು ಭವ್ಯವಾದ ಮರದ ರಥದಲ್ಲಿ ಕೂರಿಸಿ ಸಾವಿರಾರು ಮಂದಿ ಭಕ್ತರು ಮೂರು ಕಿಲೋ ಮೀಟರ್ ದೂರದಿಂದ 9 ದಿನಗಳ ಉತ್ಸವದಲ್ಲಿ 2 ಬಾರಿ ರಥ ಎಳೆಯುತ್ತಾರೆ.

ಪುರಿ ಜಗನ್ನಾಥ ಎಂದರೆ ಸಾವಿರಾರು ಮಂದಿಯ ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದ ವಿಷಯವಾಗಿದ್ದು, ರಥ ಯಾತ್ರೆಯನ್ನು ಈ ವರ್ಷ ರದ್ದುಪಡಿಸುವ ಬದಲು ಬದಲಾವಣೆಗಳನ್ನು ಮಾಡಿ ಅನುಮತಿ ಕೊಡಬೇಕೆಂದು ಜಗನ್ನಾಥ ಸಂಸ್ಕೃತಿ ಜನ ಜಾಗರಣ ವೇದಿಕೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT