ಪುರಿ ಜಗನ್ನಾಥ ರಥೋತ್ಸವದ ಸಾಂದರ್ಭಿಕ ಚಿತ್ರ 
ದೇಶ

ಪುರಿ ಜಗನ್ನಾಥ ರಥಯಾತ್ರೆ ತಡೆ ಪ್ರಶ್ನಿಸಿ ಅರ್ಜಿ: ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ

ಐತಿಹಾಸಿಕ ಪುರಿ ಜಗನ್ನಾಥ ರಥೋತ್ಸವಕ್ಕೆ ತಡೆ ನೀಡಿದ್ದನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ನಡೆಯಲಿದೆ.

ನವದೆಹಲಿ: ಐತಿಹಾಸಿಕ ಪುರಿ ಜಗನ್ನಾಥ ರಥೋತ್ಸವಕ್ಕೆ ತಡೆ ನೀಡಿದ್ದನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ನಡೆಯಲಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಐತಿಹಾಸಿಕ ಯಾತ್ರೆ ಈ ವರ್ಷ ನಡೆಸಬಾರದೆಂದು ಸುಪ್ರೀಂ ಕೋರ್ಟ್ ಕಳೆದ 18ರಂದು ಆದೇಶ ನೀಡಿತ್ತು. ಈ ಆದೇಶ ಹೊರಬಂದ ಮರುದಿನ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಆದೇಶದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿ ರಥಯಾತ್ರೆಗೆ ಅನುವು ಮಾಡಿಕೊಡಬೇಕೆಂದು ಮನವಿ ಸಲ್ಲಿಸಲಾಗಿತ್ತು.

ಒಡಿಶಾದ ಪುರಿ ಜಗನ್ನಾಥ ರಥ ಯಾತ್ರೆ ಪ್ರತಿವರ್ಷ 10ರಿಂದ 12 ದಿನಗಳ ಕಾಲ ನಡೆಯುತ್ತದೆ, ಲಕ್ಷಾಂತರ ಜನರು ಈ ಯಾತ್ರೆಗೆ ಸಾಕ್ಷಿಯಾಗುತ್ತಾರೆ. ಜೂನ್ 23ಕ್ಕೆ ನಿಗದಿಯಾಗಿದ್ದ ಬಹುದ ಜಾತ್ರೆಯನ್ನು ನಂತರ ಜುಲೈ 1ಕ್ಕೆ ಮುಂದೂಡಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶ ನೀಡಿ ಈ ವರ್ಷ ರಥಯಾತ್ರೆ ನಡೆಸುವುದು ಬೇಡ ಎಂದು ಆದೇಶ ಕೊಟ್ಟಿತು.

ಜಗನ್ನಾಥ, ಬಾಲಭದ್ರ ಮತ್ತು ದೇವಿ ಸುಭದ್ರ ಮೂರ್ತಿಗಳನ್ನು ಭವ್ಯವಾದ ಮರದ ರಥದಲ್ಲಿ ಕೂರಿಸಿ ಸಾವಿರಾರು ಮಂದಿ ಭಕ್ತರು ಮೂರು ಕಿಲೋ ಮೀಟರ್ ದೂರದಿಂದ 9 ದಿನಗಳ ಉತ್ಸವದಲ್ಲಿ 2 ಬಾರಿ ರಥ ಎಳೆಯುತ್ತಾರೆ.

ಪುರಿ ಜಗನ್ನಾಥ ಎಂದರೆ ಸಾವಿರಾರು ಮಂದಿಯ ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದ ವಿಷಯವಾಗಿದ್ದು, ರಥ ಯಾತ್ರೆಯನ್ನು ಈ ವರ್ಷ ರದ್ದುಪಡಿಸುವ ಬದಲು ಬದಲಾವಣೆಗಳನ್ನು ಮಾಡಿ ಅನುಮತಿ ಕೊಡಬೇಕೆಂದು ಜಗನ್ನಾಥ ಸಂಸ್ಕೃತಿ ಜನ ಜಾಗರಣ ವೇದಿಕೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT