ಪೂರಿ ಜಗನ್ನಾಥ 
ದೇಶ

ಇತಿಹಾಸದಲ್ಲಿಯೇ ಇದೇ ಮೊದಲು: ಭಕ್ತರಿಲ್ಲದೆಯೇ ವಿಶ್ವವಿಖ್ಯಾತ ಪೂರಿ ಜಗನ್ನಾಥ ಸ್ವಾಮಿ ರಥಯಾತ್ರೆಗೆ ಚಾಲನೆ!

ರಥಯಾತ್ರೆಗೆ ಕುರಿತು ಸುಪ್ರೀಂಕೋರ್ಟ್ ತನ್ನ ನಿಲುವು ಬದಲಿಸಿಕೊಂಡು ಷರತ್ತುಬದ್ಧ ಒಪ್ಪಿಗೆ ನೀಡುತ್ತಿದ್ದಂತೆಯೇ ವಿಶ್ವವಿಖ್ಯಾತ ಪೂರಿ ಜಗನ್ನಾಥ ರಥಯಾತ್ರೆಗೆ ಮಂಗಳವಾರ ಚಾಲನೆ ದೊರಕಿದೆ. 

ನವದೆಹಲಿ: ರಥಯಾತ್ರೆಗೆ ಕುರಿತು ಸುಪ್ರೀಂಕೋರ್ಟ್ ತನ್ನ ನಿಲುವು ಬದಲಿಸಿಕೊಂಡು ಷರತ್ತುಬದ್ಧ ಒಪ್ಪಿಗೆ ನೀಡುತ್ತಿದ್ದಂತೆಯೇ ವಿಶ್ವವಿಖ್ಯಾತ ಪೂರಿ ಜಗನ್ನಾಥ ರಥಯಾತ್ರೆಗೆ ಮಂಗಳವಾರ ಚಾಲನೆ ದೊರಕಿದೆ. 

ಈ ರಥಯಾತ್ರೆ ಒಂದು ವಾರಗಳ ಕಾಲ ನಡೆಯಲಿದ್ದು, ರಥಯಾತ್ರೆಗೆ ನಿನ್ನೆಯಷ್ಟೇ ಸುಪ್ರೀಂಕೋರ್ಟ್ ಷರತ್ತುಬದ್ಧ ಅನುಮತಿ ನೀಡಿತ್ತು. 

ಇಂದು ಚಾಲನೆ ದೊರೆತಿರುವ ಈ ರಥಯಾತ್ರೆಯಲ್ಲಿ ಕೇವಲ ದೇವಸ್ಥಾನದ ಸಿಬ್ಬಂದಿ ಮತ್ತು ಪುರೋಹಿತರು ಮಾತ್ರ ಭಾಗವಿಸಿದ್ದು, ಪೂಜಾ ಕಾರ್ಯಕ್ರಮಗಳು ಆರಂಭವಾಗುವುದಕ್ಕೂ ಮುಂಚೆಯೇ ದೇವಸ್ಥಾನದ ಸಂಕೀರ್ಣವನ್ನು ಸ್ಯಾನಿಟೈಸ್ ಮಾಡಲಾಗಿದೆ. 
         
ಇಂದು ಬೆಳಿಗ್ಗೆಯಿಂದಲೇ ಸಾಂಪ್ರದಾಯಿಕ ಪೂಜೆಗಳು ಆರಂಭವಾಗಿದ್ದು, ದೇವಸ್ಥಾನವನ್ನು ವರ್ಣರಂಜಿತವಾಗಿ ಸಜ್ಜುಗೊಳಿಸಲಾಗಿದೆ. ದೇವಸ್ಥಾನದ ಆವರಣದಲ್ಲಿ ಪುರೋಹಿತರು ಸಾಂಪ್ರದಾಯಿಕ ಸಂಗೀತ ನುಡಿಸುತ್ತಿದ್ದು, ತಾಳಮದ್ದಳೆಗಳ ಶಬ್ಧಕ್ಕೆ ನೃತ್ಯ ಮಾಡುತ್ತಾ ಬಾಲಭದ್ರ ಪ್ರತಿಮೆಯನ್ನು ರಥದಲ್ಲಿ ತಂದು ಪ್ರತಿಷ್ಟಾಪಿಸಿದ್ದಾರೆ. 

ಪ್ರತಿಮೆ ಸ್ಥಾಪನೆ ಬಳಿಕ ಪ್ರತೀಯೊಂದು ರಥದ ಬಳಿಯೂ ಸಾಕಷ್ಟು ಜನರು ಸುತ್ತುವರೆದಿರುವುದು ಕಂಡು ಬಂದಿದ್ದು, ರಥಯಾತ್ರೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಜಗನ್ನಾಥ ರಥಯಾತ್ರೆ ದೇಶದ ಪ್ರತೀಯೊಬ್ಬರಿಗೂ ಸಂತೋಷ, ಅದೃಷ್ಟ ಹಾಗೂ ಆರೋಗ್ಯವನ್ನು ನೀಡಲಿ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟಿ-20 ವಿಶ್ವಕಪ್: ಭಾರತ ತಂಡ ಪ್ರಕಟ, ಶುಭ್ ಮನ್ ಗಿಲ್ ಗೆ ಕೊಕ್‌, ಇಶಾನ್ ಕಿಶಾನ್ ಗೆ ಸ್ಥಾನ!

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

Air India Express ಪೈಲಟ್ ನಿಂದ ಸ್ಪೈಸ್ ಜೆಟ್ ಪ್ರಯಾಣಿಕನ ಮೇಲೆ ಹಲ್ಲೆ; ರಕ್ತಸ್ರಾವದಿಂದ ನರಳಿದ ಸಂತ್ರಸ್ತ

Epstein Files ಬಿಡುಗಡೆ: ಟ್ರಂಪ್ ಬಗ್ಗೆ ಹೆಚ್ಚಿನದ್ದಿಲ್ಲ; ಕ್ಲಿಂಟನ್ ಫೋಟೋಗಳು ಬಹಿರಂಗ!

SCROLL FOR NEXT