ಪತಂಜಲಿ ಸಂಸ್ಥೆಯ ಕೊರೋನಾ ಕಿಟ್ 
ದೇಶ

ಪತಂಜಲಿ ಸಂಸ್ಥೆಯ ವರದಿ ಪರಿಶೀಲಿಸಿದ ಬಳಿಕವೇ ಔಷಧಿಗೆ ಅನುಮತಿ: ಆಯುಷ್ ಸಚಿವ ಶ್ರೀಪಾದ್ ನಾಯಕ್

ಪತಂಜಲಿ ಆಯುರ್ವೇದ ಸಂಸ್ಥೆ ಕೊರೋನಾ ಸೋಂಕಿಗೆ ಪರಿಚಯಿಸಿರುವ ಆಯುರ್ವೇದ ಔಷಧಿ ಕೊರೋನಿಲ್ ಮತ್ತು ಸ್ವಸಾರಿ ಬಗ್ಗೆ ವರದಿ ಬಂದ ನಂತರ ಆಯುಷ್ ಸಚಿವಾಲಯ ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ಆಯುಷ್ ಇಲಾಖೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ತಿಳಿಸಿದ್ದಾರೆ.

ನವದೆಹಲಿ: ಪತಂಜಲಿ ಆಯುರ್ವೇದ ಸಂಸ್ಥೆ ಕೊರೋನಾ ಸೋಂಕಿಗೆ ಪರಿಚಯಿಸಿರುವ ಆಯುರ್ವೇದ ಔಷಧಿ ಕೊರೋನಿಲ್ ಮತ್ತು ಸ್ವಸಾರಿ ಬಗ್ಗೆ ವರದಿ ಬಂದ ನಂತರ ಆಯುಷ್ ಸಚಿವಾಲಯ ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ಆಯುಷ್ ಇಲಾಖೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ತಿಳಿಸಿದ್ದಾರೆ.

ಬಾಬಾ ರಾಮ್ ದೇವ್ ಕೊರೋನಾ ಚಿಕಿತ್ಸೆಗೆ ಹೊಸ ಆಯುರ್ವೇದ ಔಷಧಿ ಕಂಡುಹಿಡಿದದ್ದು ಖುಷಿಯ ಸಂಗತಿ. ಆದರೆ ನಿಯಮ ಪ್ರಕಾರ, ಅದು ಆಯುಷ್ ಸಚಿವಾಲಯಕ್ಕೆ ಮೊದಲು ಬರಬೇಕು. ನಮಗೆ ವರದಿ ಕಳುಹಿಸಿದ್ದಾರೆ ಎಂದು ಪತಂಜಲಿ ಸಂಸ್ಥೆ ಹೇಳಿದೆ. ನಾವು ಅದನ್ನು ಪರಿಶೀಲಿಸಿದ ನಂತರ ಮಾರುಕಟ್ಟೆಗೆ ತರಲು ಅನುಮತಿ ನೀಡುತ್ತೇವೆ ಎಂದು ಹೇಳಿದರು.

ಪತಂಜಲಿ ಆಯುರ್ವೇದ ಸಂಸ್ಥೆ ಕೋವಿಡ್-19 ಚಿಕಿತ್ಸೆಗೆ ಹೊಸ ಆಯುರ್ವೇದ ಔಷಧಿಯನ್ನು ಕಂಡುಹಿಡಿದಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಂದಿದೆ. ಆದರೆ ಅದನ್ನು ಕೇಂದ್ರ ಸಚಿವಾಲಯ ಪರಿಶೀಲಿಸಿ ಅನುಮತಿ ನೀಡಿದ ಬಳಿಕವಷ್ಟೆ ಪ್ರಚಾರ ಮಾಡಬಹುದು ಇಲ್ಲವೇ ಜಾಹೀರಾತುಗಳನ್ನು ನೀಡಬಹುದು, ಅಲ್ಲಿಯವರೆಗೆ ಪ್ರಚಾರ ಮಾಡುವ ಹಾಗಿಲ್ಲ ಎಂದು ಕೂಡ ಸಚಿವರು ಹೇಳಿದರು.

ಅಧ್ಯಯನ ಮಾಡಿ ವರದಿ ಸಿಗುವವರೆಗೆ ಪತಂಜಲಿ ಔಷಧದ ವಾಸ್ತವಾಂಶ ಮತ್ತು ವೈಜ್ಞಾನಿಕ ಹಿನ್ನೆಲೆ ಗೊತ್ತಿರುವುದಿಲ್ಲ. ಕೋವಿಡ್-19 ಬಗ್ಗೆ ಔಷಧಿ ಕಂಡುಹಿಡಿಯುವುದಿದ್ದರೆ, ಸಂಶೋಧನಾ ಅಧ್ಯಯನ ಮಾಡುವುದಿದ್ದರೆ ಆಯುಷ್ ಇಲಾಖೆಯ ಅನುಮತಿಯೂ ಅತ್ಯಗತ್ಯ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!