ಚೀನಾ ಅಧ್ಯಕ್ಷ ಕ್ಸಿ-ಜಿನ್ ಪಿಂಗ್ ಭಾವಚಿತ್ರಕ್ಕೆ ಚಪ್ಪಲ್ಲಿ ಸೇವೆಯ ಚಿತ್ರ 
ದೇಶ

ಚೀನಾದವರಿಗೆ ಅತಿಥ್ಯ ನಿರ್ಬಂಧ ಹೇರಲು ದೆಹಲಿ ಹೋಟೆಲ್ ಮಾಲೀಕರ ಸಂಘ ನಿರ್ಧಾರ!

ಗಡಿ ಘರ್ಷಣೆ ವಿಚಾರದಲ್ಲಿ ಚೀನಾದ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತೆಯೇ ರಾಷ್ಟ್ರ ರಾಜಧಾನಿಯಲ್ಲಿ ಚೀನಾದ ಪ್ರಜೆಗಳಿಗೆ ಅತಿಥ್ಯ ನೀಡದಿರಲು ದೆಹಲಿ ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ.

ನವದೆಹಲಿ: ಗಡಿ ಘರ್ಷಣೆ ವಿಚಾರದಲ್ಲಿ ಚೀನಾದ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತೆಯೇ ರಾಷ್ಟ್ರ ರಾಜಧಾನಿಯಲ್ಲಿ ಚೀನಾದ ಪ್ರಜೆಗಳಿಗೆ ಅತಿಥ್ಯ ನೀಡದಿರಲು ದೆಹಲಿ ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ.

ದೇಶದ ಪ್ರತಿಯೊಬ್ಬರೂ ಚೀನಾದ ಆಕ್ರಮಣವನ್ನು ತಮ್ಮದೇ ಆದ ರೀತಿಯಲ್ಲಿ ಪ್ರತಿಭಟಿಸುತ್ತಿದ್ದು, ನಮ್ಮ ಹೋಟೆಲ್ ಗಳಲ್ಲಿ ಚೀನಾದ ಜನರಿಗೆ ಯಾವುದೇ ಬುಕ್ಕಿಂಗ್  ಮಾಡಲು ಹಾಗೂ ನಮ್ಮ ಹೋಟೆಲ್ ಗಳಲ್ಲಿ ತಂಗಲು ಅವಕಾಶ ನೀಡುವುದಿಲ್ಲ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಗುಪ್ತಾ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ನಮ್ಮ ದೇಶವನ್ನು ಹಾಳು ಮಾಡುವ ಉದ್ದೇಶ ಹೊಂದಿರುವ ಚೀನಾದ ಜನರನ್ನು ಹೇಗೆ ಒಳಗೆ ಬಿಟ್ಟುಕೊಳ್ಳಲು ಸಾಧ್ಯ, ಹೋಟೆಲ್ ಗಳಲ್ಲಿ ವಾಸ್ತವ್ಯಕ್ಕೆ ಹೇಗೆ ಅವಕಾಶ ಕೊಡಲು ಸಾಧ್ಯ ಎಂದು ಅವರು ಹೇಳಿದ್ದಾರೆ.

ಲಡಾಖ್ ನ ಗಲ್ವಾನ್ ಕಣಿವೆಯಲ್ಲಿ ಚೀನಾ ಸೇನಾಪಡೆಗಳೊಂದಿಗೆ ನಡೆದ ಮುಖಾಮುಖಿ ಸಂಘರ್ಷದಲ್ಲಿ 20 ಭಾರತೀಯ ಯೋಧರು ಹುತಾತ್ಮರಾದ ಬೆನ್ನಲ್ಲೇ ದೆಹಲಿ ಹೋಟೆಲ್ ಮಾಲೀಕರ ಸಂಘ ಈ ನಿರ್ಧಾರ ಕೈಗೊಂಡಿದೆ.

ಈ ಘರ್ಷಣೆಯಲ್ಲಿ ಚೀನಾದವರು ಕೂಡಾ 20 ಮಂದಿ ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್ ಇತ್ತೀಚಿಗೆ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

NEET ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!