ವ್ಯವಸ್ಥೆ ಬದಲಾವಣೆ ಮಾಡುವಲ್ಲಿ ವಿಫಲ: ಅವಧಿಗೂ ಮುನ್ನ ನಿವೃತ್ತಿಗೆ ಮುಂದಾದ ಐಪಿಎಸ್ ಅಧಿಕಾರಿ 
ದೇಶ

ವ್ಯವಸ್ಥೆ ಬದಲಾವಣೆ ಮಾಡುವಲ್ಲಿ ವಿಫಲ: ಅವಧಿಗೂ ಮುನ್ನ ನಿವೃತ್ತಿಗೆ ಮುಂದಾದ ಐಪಿಎಸ್ ಅಧಿಕಾರಿ

ವ್ಯವಸ್ಥೆ ಬದಲಾವಣೆ ಮಾಡುವಲ್ಲಿ ವಿಫಲನಾಗಿದ್ದೇನೆ ಎಂದು ತೆಲಂಗಾಣ ರಾಜ್ಯ ಪೊಲೀಸ್ ಅಕಾಡೆಮಿ (ಟಿಎಸ್ ಪಿಎ)ಯ ನಿರ್ದೇಶಕ ವಿ.ಕೆ ಸಿಂಗ್ ಅವಧಿಗೂ ಮುನ್ನವೇ ನಿವೃತ್ತಿ ಬಯಸಿ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. 

ನವದೆಹಲಿ: ವ್ಯವಸ್ಥೆ ಬದಲಾವಣೆ ಮಾಡುವಲ್ಲಿ ವಿಫಲನಾಗಿದ್ದೇನೆ ಎಂದು ತೆಲಂಗಾಣ ರಾಜ್ಯ ಪೊಲೀಸ್ ಅಕಾಡೆಮಿ (ಟಿಎಸ್ ಪಿಎ)ಯ ನಿರ್ದೇಶಕ ವಿ.ಕೆ ಸಿಂಗ್ ಅವಧಿಗೂ ಮುನ್ನವೇ ನಿವೃತ್ತಿ ಬಯಸಿ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. 

ಪೊಲೀಸ್ ಇಲಾಖೆಗೆ ಸೇರುವಾಗ ಹಲವು ಕನಸುಗಳನ್ನು ಹೊತ್ತಿದ್ದೆ. ಪೊಲೀಸ್ ವ್ಯವಸ್ಥೆಯ ಬದಲಾವಣೆಯ ಕನಸು ನನಸಾಗಿಯೇ ಉಳಿಯಿತು, ವ್ಯವಸ್ಥೆಯ ಬದಲಾವಣೆಯಲ್ಲಿ ವಿಫಲನಾಗಿದ್ದೇನೆ ಈ ಹಿನ್ನೆಲೆಯಲ್ಲಿ ಅವಧಿಗೂ ಮುನ್ನವೇ ನಿವೃತ್ತಿಗೆ ಅನುಮತಿ ನೀಡಬೇಕೆಂದು ಕೇಂದ್ರ ಗೃಹ ಕಾರ್ಯದರ್ಶಿ ಹಾಗೂ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದು, 2020 ರ ಅಕ್ಟೋಬರ್ 2 ರಂದು ನಿವೃತ್ತಿಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. 1987 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಸಿಂಗ್, ಈ ವರ್ಷದ ನವೆಂಬರ್ ತಿಂಗಳಲ್ಲಿ ನಿವೃತ್ತರಾಗಬೇಕಿತ್ತು.

ತಾವು ಅವಧಿಗೂ ಮುನ್ನವೇ ನಿವೃತ್ತಿ ಬಯಸಿ ಪತ್ರಬರೆದಿರುವುದನ್ನು ಪೊಲೀಸ್ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ಹೊರಗೆ ತಮ್ಮ ಸೇವೆ ಬಳಕೆಯಾಗಬಹುದೆಂಬ ಅಭಿಪ್ರಾಯ ಸಿಂಗ್ ಅವರದ್ದಾಗಿದೆ. ಜನರ ನಡುವೆ ಬದಲಾವಣೆ, ಸುಧಾರಣೆ ತರಲು ಕೆಲಸ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಗಾಂಧಿ ಜಯಂತಿಯಾದ ಅ.2 ರಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಬಯಸಿದ್ದೇನೆ ಎಂದು ಸಿಂಗ್ ಹೇಳಿದ್ದಾರೆ.

ನನ್ನ ಸೇವೆಗಳಿಂದ ತೆಲಂಗಾಣ ಸರ್ಕಾರವೂ ಸಂತುಷ್ಟವಾಗಿಲ್ಲ. ಸರ್ಕಾರದ ಸೇವೆಗಳನ್ನು ಉತ್ತಮಗೊಳಿಸಲು ನನ್ನ ಸಲಹೆಗಳೂ ವ್ಯವಸ್ಥೆಯನ್ನು ಹೆಚ್ಚು ಬದಲಾವಣೆ ಮಾಡಲು ಸಾಧ್ಯವಾಗಲಿಲ್ಲ. ನಾನು ಸರ್ಕಾರಕ್ಕೆ ಹೊರೆಯಾಗಬಾರದೆಂದು ಭಾವಿಸಿ ಈ ನಿರ್ಧಾರಕ್ಕೆ ಬಂದಿದ್ದೀನಿ, ಸರ್ಕಾರದ ವಿರುದ್ಧ ಏನೂ ಇಲ್ಲ ಎಂದು ಸಿಂಗ್ ಹೇಳಿದ್ದಾರೆ. ಸ್ಪಷ್ಟ ನ್ಯಾಯದ ಕಲ್ಪನೆ, ಸ್ಪಷ್ಟ ಆತ್ಮಸಾಕ್ಷಿಯೊಂದಿಗೆ ಕೆಲಸ ಮಾಡಿದರೆ ಪೊಲೀಸ್ ವೃತ್ತಿ ಅತ್ಯುತ್ತಮವಾದ್ದು, ಯಾರಾದರೂ ಸರ್ಕಾರಿ ಸೇವೆಗೆ ಸೇರಬೇಕೆಂದರೆ ನಾನು ಪೊಲೀಸ್ ಸೇವೆಗೆ ಸೇರಿ ಎಂದೇ ಹೇಳುತ್ತೇನೆ ಎಂದು ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT