ರಾಹುಲ್ ಗಾಂಧಿ(ಸಂಗ್ರಹ ಚಿತ್ರ) 
ದೇಶ

ಕಾಂಗ್ರೆಸ್ ರಾಜ್ಯಾಧ್ಯಕ್ಷರೊಂದಿಗೆ ರಾಹುಲ್ ಗಾಂಧಿ ಚರ್ಚೆ; ಸರ್ಕಾರದ ವೈಫಲ್ಯ ಖಂಡಿಸಿ ಧರಣಿ ನಡೆಸಲು ತೀರ್ಮಾನ

ಚೀನಾದೊಂದಿಗಿನ ಗಡಿ ವಿವಾದ, ಕೋವಿಡ್-19 ಮತ್ತು ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಪ್ರತಿಭಟಿಸಿ ವಿರೋಧ ಪಕ್ಷವಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ರಾಜ್ಯಾಧ್ಯಕ್ಷರುಗಳೊಂದಿಗೆ ನಿನ್ನೆ ವಿಡಿಯೊ ಕಾನ್ಫರೆನ್ಸ್ ಸಂವಾದ ನಡೆಸಿದ್ದರು.

ನವದೆಹಲಿ: ಚೀನಾದೊಂದಿಗಿನ ಗಡಿ ವಿವಾದ, ಕೋವಿಡ್-19 ಮತ್ತು ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಪ್ರತಿಭಟಿಸಿ ವಿರೋಧ ಪಕ್ಷವಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಕಾಂಗ್ರೆಸ್ ರಾಜ್ಯಾಧ್ಯಕ್ಷರುಗಳೊಂದಿಗೆ ನಿನ್ನೆ ವಿಡಿಯೊ ಕಾನ್ಫರೆನ್ಸ್ ಸಂವಾದ ನಡೆಸಿದ್ದರು.

ಭಾರತ-ಚೀನಾ ಗಡಿಯಲ್ಲಿ ಹುತಾತ್ಮರಾಗಿರುವ 20 ಯೋಧರಿಗೆ ಗೌರವ ವಂದನೆ ಕಾರ್ಯಕ್ರಮವನ್ನು ದೇಶಾದ್ಯಂತ ನಾಳೆ ನಡೆಸಲು ತೀರ್ಮಾನಿಸಲಾಯಿತು. ಇಂಧನ ಬೆಲೆ ಏರಿಕೆ ಪ್ರತಿಭಟಿಸಿ ಎಲ್ಲಾ ರಾಜ್ಯಗಳ ಜಿಲ್ಲಾ ಕೇಂದ್ರಗಳಲ್ಲಿ ಜೂನ್ 29ರಂದು ಧರಣಿ ನಡೆಸಲು ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರಿಗೆ ಆದೇಶ ನೀಡಿದರು.

ನಾಳೆ ದೆಹಲಿಯಲ್ಲಿ ನಡೆಯಲಿರುವ ಹುತಾತ್ಮರಿಗೆ ಗೌರವ ವಂದನೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗವಹಿಸುವ ನಿರೀಕ್ಷೆಯಿದೆ. ಸಂಸತ್ತು ಎದುರು ಇರುವ ಮಹಾತ್ಮಾ ಗಾಂಧಿ ಪ್ರತಿಮೆ ಮುಂದೆ ಕಾರ್ಯಕ್ರಮ ನಡೆಸುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಚರ್ಚಿಸಲು ದೆಹಲಿಯಲ್ಲಿ ಇಂದು ಸಭೆ ಕರೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT