ಇಂಡಿಯನ್ ರೈಲ್ವೆ 
ದೇಶ

ಪ್ರಯಾಣಿಕರ ಗಮನಕ್ಕೆ: ಆ.12 ವರೆಗೆ ಎಲ್ಲಾ ಪ್ಯಾಸೆಂಜರ್ ರೈಲುಗಳು ಸ್ಥಗಿತ; ಟಿಕೆಟ್ ಕಾಯ್ದಿರಿಸಿದವರಿಗೆ ಮರುಪಾವತಿ

ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರೈಲ್ವೆ ಮಂಡಳಿ ಆ.12 ವರೆಗೆ ಎಲ್ಲಾ ಪ್ರಯಾಣಿಕ ರೈಲುಗಳನ್ನು ಸ್ಥಗಿತಗೊಳಿಸಿದೆ.

ನವದೆಹಲಿ:ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರೈಲ್ವೆ ಮಂಡಳಿ ಆ.12 ವರೆಗೆ ಎಲ್ಲಾ ಪ್ರಯಾಣಿಕ ರೈಲುಗಳನ್ನು ಸ್ಥಗಿತಗೊಳಿಸಿದೆ. ಜೂ.25 ರಂದು ರಾತ್ರಿ ಈ ಘೋಷಣೆ ಹೊರಬಿದ್ದಿದ್ದು, ಮೇಲ್/ ಎಕ್ಸ್ ಪ್ರೆಸ್, ಪ್ಯಾಸೆಂಜರ್, ಸಬ್ ಅರ್ಬನ್ ರೈಲುಗಳ ಸೇವೆಯನ್ನು ಅನ್ ಲಾಕ್ 1.0 ನಡುವೆಯೇ ಆ.12 ವರೆಗೆ ಸ್ಥಗಿತಗೊಳಿಸುವುದಾಗಿ ರೈಲ್ವೆ ಮಂಡಳಿ ಘೋಷಿಸಿದೆ. ಆದರೆ ವಿಶೇಷ ರೈಲುಗಳ ಸಂಚಾರದಲ್ಲಿ ಯಥಾಸ್ಥಿತಿ ಇರಲಿದೆ. 

01.07.2020 ರಿಂದ 12.08.2020 ರ ವರೆಗೆ ಪ್ರಯಾಣಿಕರು ಕಾಯ್ದಿರಿಸಿದ್ದ ಟಿಕೆಟ್ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರೈಲ್ವೆ ಮಂಡಳಿ ಸ್ಪಷ್ಟಪಡಿಸಿದೆ. ಇದೇ ವೇಳೆ ಏ.14 ರವರೆಗೆ ಕಾಯ್ದಿರಿಸಲಾಗಿದ್ದ ಟಿಕೆಟ್ ನ ಹಣವನ್ನು ಸಂಪೂರ್ಣ ಮರುಪಾವತಿ ಮಾಡುವುದಾಗಿಯೂ ರೈಲ್ವೆ ಮಂಡಳಿ ಮಾಹಿತಿ ನೀಡಿದೆ.

ಏ.14 ರಂದು ಹಾಗೂ ಅದಕ್ಕಿಂತ ಮೊದಲು ರೈಲ್ವೆ ಟಿಕೆಟ್ ಗಳನ್ನು ಕಾಯ್ದಿರಿಸಿದವರಿಗೆ ಸಂಪೂರ್ಣ ಹಣ ಮರುಪಾವತಿ ಮಾಡುವುದಾಗಿಯೂ ರೈಲ್ವೆ ಇಲಾಖೆ ತಿಳಿಸಿದೆ. ಮಾರ್ಚ್.25 ರಂದು ಕೊರೋನಾ ತಡೆಗೆ ಲಾಕ್ ಡೌನ್ ಘೋಷಣೆ ಮಾಡಿದ್ದ ಹಿನ್ನೆಲೆಯಲ್ಲಿ ರೈಲುಗಳನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಮೇ.16 ರಂದು ರೈಲು ಸೇವೆಗಳು ಪ್ರಾರಂಭವಾಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT