ನಿರ್ಮಲಾ ಸೀತಾರಾಮನ್ 
ದೇಶ

ಗಣೇಶ ವಿಗ್ರಹಗಳೂ ಏಕೆ ಚೀನಾದಿಂದ ಆಮದು?: ನಿರ್ಮಲಾ ಸೀತಾರಾಮನ್ ಪ್ರಶ್ನೆ

ಬೆಳವಣಿಗೆಯನ್ನು ಉತ್ತೇಜಿಸುವುದಕ್ಕೆ ಆಮದು ಮಾಡಿಕೊಳ್ಳುವುದರಲ್ಲಿ ತಪ್ಪೇನು ಇಲ್ಲ. ಆದರೆ ಗಣೇಶನ ವಿಗ್ರಹಗಳನ್ನೂ ಏಕೆ ಚೀನಾದಿಂದ ಆಮದು ಮಾಡಿಕೊಳ್ಳಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶ್ನಿಸಿದ್ದಾರೆ.

ಬೆಳವಣಿಗೆಯನ್ನು ಉತ್ತೇಜಿಸುವುದಕ್ಕೆ ಆಮದು ಮಾಡಿಕೊಳ್ಳುವುದರಲ್ಲಿ ತಪ್ಪೇನು ಇಲ್ಲ. ಆದರೆ ಗಣೇಶನ ವಿಗ್ರಹಗಳನ್ನೂ ಏಕೆ ಚೀನಾದಿಂದ ಆಮದು ಮಾಡಿಕೊಳ್ಳಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶ್ನಿಸಿದ್ದಾರೆ.

ಕೈಗಾರಿಕೆಗಳಿಗೆ ಅಗತ್ಯವಿರುವ, ದೇಶದಲ್ಲಿ ಲಭ್ಯತೆಯ ಕೊರತೆ ಇರುವ ಕಚ್ಚಾವಸ್ತುಗಳನ್ನು ಆಮದು ಮಾಡಿಕೊಳ್ಳುವುದರಲ್ಲಿ ಸಮಸ್ಯೆ ಇಲ್ಲ ಎಂದು ತಮಿಳುನಾಡು ವಿಭಾಗದ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡಿರುವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ವೇಳೆ ಆತ್ಮ ನಿರ್ಭರ ಭಾರತ ಅಭಿಯಾನದ ಬಗ್ಗೆಯೂ ಮಾತನಾಡಿರುವ ನಿರ್ಮಲಾ ಸೀತಾರಾಮನ್, ಉದ್ಯೋಗಾವಕಾಶಗಳು, ಬೆಳವಣಿಗೆಗೆ ಸಹಕಾರಿಯಾಗದ ಆಮದುಗಳಿಂದ ಸ್ವಾವಲಂಬಿಯಾಗುವುದಕ್ಕೆ ಸಹಕಾರಿಯಾಗುವುದಕ್ಕೆ, ದೇಶದ ಆರ್ಥಿಕತೆಗೆ ಯಾವುದೇ ಪ್ರಯೋಜನವಿಲ್ಲ. 

ಪ್ರತಿ ವರ್ಷ ಬರುವ ಗಣೇಶ ಚತುರ್ಥಿಯ ದಿನದಂದು ಮಣ್ಣಿನಿಂದ ಮಾಡಿದ ಗಣೇಶನನ್ನು ಸ್ಥಳೀಯರಿಂದ ಖರೀದಿಸಲಾಗುತ್ತದೆ. ಆದರೆ ಈಗ ಗಣೇಶನ ವಿಗ್ರಹಗಳನ್ನೂ ಚೀನಾದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ರೀತಿಯ ಪರಿಸ್ಥಿತಿ ಏಕೆ? ನಮಗೆ ಮಣ್ಣಿನಿಂದ ಗಣೇಶ ವಿಗ್ರಹವನ್ನೂ ಮಾಡಿಕೊಳ್ಳಲು ಸಾಧ್ಯವಿಲ್ಲವೆ? ಎಂದು ಸೀತಾರಾಮನ್ ಪ್ರಶ್ನಿಸಿದ್ದಾರೆ. ದಿನ ನಿತ್ಯದ ಬಳಕೆಗೆ ಉಪಯೋಗಿಸುವ ಸೋಪ್ ಬಾಕ್ಸ್, ಪ್ಲಾಸ್ಟಿಕ್ ಉಪಕರಣಗಳು, ಪೂಜಾ ಸಾಮಗ್ರಿಗಳನ್ನು ಸ್ಥಳೀಯ ಸಂಸ್ಥೆಗಳೇ ತಯಾರಿಸಿದರೆ, ಸಣ್ಣ ಹಾಗೂ ಮಧ್ಯಮ, ಅತಿ ಸಣ್ಣ ಉದ್ಯಮಗಳಿಗೆ ಸಹಕಾರಿಯಾಗಲಿದ್ದು ಸ್ವಾವಲಂಬನೆ ಹೆಚ್ಚುತ್ತದೆ ಎಂದು ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.

ಆಮದನ್ನು ಕಡಿಮೆ ಮಾಡಿ ಸ್ವಾವಲಂಬನೆಯನ್ನು ಸಾಧಿಸುವುದೇ ಆತ್ಮನಿರ್ಭರ ಅಭಿಯಾನದ ಆಶಯ ಎಂದು ಸೀತಾರಾಮನ್ ಹೇಳಿದ್ದಾರೆ. ಭಾರತದಲ್ಲಿ ಸ್ವಾವಲಂಬನೆ ಹಿಂದಿನಿಂದಲೂ ಇತ್ತು. ಆದರೆ ಕಾಲಕ್ರಮೇಣ ಕಡಿಮೆಯಾಗಿದೆ. ಈಗ ಆತ್ಮನಿರ್ಭರ ಭಾರತ ಸ್ಥಳೀಯ ಉತ್ಪಾದನೆಯನ್ನು ಬೆಂಬಲಿಸುತ್ತದೆ ಎಂದು ಸೀತಾರಾಮನ್ ಹೇಳಿದ್ದಾರೆ. ಇದೇ ವೇಳೆ ಲಡಾಖ್ ನಲ್ಲಿ ಹುತಾತ್ಮರಾದ ತಮಿಳುನಾಡಿನ ಯೋಧ, ಹವಾಲ್ದಾರ್ ಕೆ ಪಳನಿಗೆ ಗೌರವ ಅರ್ಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT