ಮಹಾರಾಷ್ಟ್ರದಲ್ಲಿ ಮುಚ್ಚಿರುವ ಅಂಗಡಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸುತ್ತಿರುವ ಆರೋಗ್ಯ ಕಾರ್ಯಕರ್ತರು 
ದೇಶ

ದೆಹಲಿಯಲ್ಲಿ ಜುಲೈ 31ರವರೆಗೆ ಶಾಲೆಗಳು ಬಂದ್: ಮುಂಬೈಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗರಿಷ್ಠ ಏರಿಕೆ

ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಪರಿಸ್ಥಿತಿ ಬದಲಾಗದ ಹಿನ್ನೆಲೆಯಲ್ಲಿ ಜುಲೈ 31ರವರೆಗೂ ಶಾಲೆಗಳು ಬಾಗಿಲು ತೆರೆಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ಹೇಳಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಪರಿಸ್ಥಿತಿ ಬದಲಾಗದ ಹಿನ್ನೆಲೆಯಲ್ಲಿ ಜುಲೈ 31ರವರೆಗೂ ಶಾಲೆಗಳು ಬಾಗಿಲು ತೆರೆಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ಹೇಳಿದ್ದಾರೆ.

ಶಾಲೆಗಳನ್ನು ತೆರೆಯುವುದು ಕೇವಲ ತಾಂತ್ರಿಕ ಕೆಲಸವಲ್ಲಾ, ಬದಲಿಗೆ ಅದೊಂದು ಸೃಜನಾತ್ಮಕ ಕೆಲಸವಾಗಿದ್ದು, ಶಾಲೆಗಳಿಗೆ ಹೊಸ, ದೊಡ್ಡ ಜವಾಬ್ದಾರಿಯನ್ನು ನೀಡುತ್ತವೆ.ಜುಲೈ 31ರವರೆಗೆ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಶಾಲೆಗಳ ಪುನರ್ ಆರಂಭ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ
ಶಿಕ್ಷಣ ಸಚಿವರು ಆಗಿರುವ ಮನಿಷ್ ಸಿಸೋಡಿಯಾ ಈ ವಿಚಾರವನ್ನು ತಿಳಿಸಿದ್ದಾರೆ.

ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಇಂದು ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗರಿಷ್ಠ ಏರಿಕೆ ಕಂಡುಬಂದಿದೆ. ಇಂದು ಒಂದೇ ದಿನ 5024 ಕೋವಿಡ್-19 ಪ್ರಕರಣಗಳು ಕಂಡುಬಂದಿದ್ದು, 175 ಮಂದಿ ಸಾವನ್ನಪ್ಪಿದ್ದಾರೆ. 2362 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು 1, 52, 765 ಮಂದಿಗೆ ಸೋಂಕು ತಗುಲಿದ್ದು, 7106 ಮಂದಿ ಸಾವನ್ನಪ್ಪಿದ್ದಾರೆ. 79 ಸಾವಿರದ 815 ಮಂದಿ ಗುಣಮುಖರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT