ಪ್ರಧಾನಿ ಮೋದಿ 
ದೇಶ

ಕೋವಿಡ್-19 ಲಸಿಕೆ ಬರುವವರೆಗೂ ನಾವು ಪರಸ್ಪರ ಎರಡು ಗಜಗಳಷ್ಟು ದೂರವಿರಬೇಕು, ಮಾಸ್ಕ್ ಧರಿಸಲೇಬೇಕು: ಪ್ರಧಾನಿ ಮೋದಿ

ಕೊರೋನಾ ವೈರಸ್'ಗೆ ಲಸಿಕೆಗಳು ಬರುವವರೆಗೂ ನಾವೆಲ್ಲರೂ ಎರಡು ಗಜಗಳಷ್ಟು ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸಲೇಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ. 

ನವದೆಹಲಿ: ಕೊರೋನಾ ವೈರಸ್'ಗೆ ಲಸಿಕೆಗಳು ಬರುವವರೆಗೂ ನಾವೆಲ್ಲರೂ ಎರಡು ಗಜಗಳಷ್ಟು ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸಲೇಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ. 

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ರೋಜಗಾರ್ ಅಭಿಯಾನ್ ಅಡಿಯಲ್ಲಿ ಉತ್ತರಪ್ರದೇಶದ ವಲಸೆ ಕಾರ್ಮಿಕರಿಗೆ ಉದ್ಯೋಗ ಅಭಿಯಾನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು. ಕೊರೋನಾ ವೈರಸ್ ಹಾವಳಿಯಿಂದಾಗಿ ಎದುರಾಗಿರುವ ಎಲ್ಲಾ ಸಂಕಷ್ಟಗಳನ್ನು ಮೀರಿ ಭಾರತ ಯಶಸ್ಸು ಗಳಿಸಲಿದೆ. ದೇಶವನ್ನು ಮತ್ತೆ ಕಟ್ಟುವ ಸಾಮೂಹಿಕ ಪ್ರಯತ್ನ ಯಶಸ್ವಿ ಕಾಣಲಿದೆ ಎಂದು ಹೇಳಿದ್ದಾರೆ. 

ನಾವೆಲ್ಲರೂ ಏಳು ಹಾಗೂ ಬೀಳುಗಳನ್ನು ನೋಡಿದ್ದೇವೆ. ನಮ್ಮ ಸಾಮಾಜಿಕ ಜೀವನದಲ್ಲಿ ಹಲವಾರು ಸಮಸ್ಯೆಗಳಿವೆ. ಇಂತಹ ದೊಡ್ಡ ಸಮಸ್ಯೆಯನ್ನು ಎದುರಿಸಲಿದ್ದೇವೆಂದು ಯಾರೊಬ್ಬರೂ ಚಿಂತಿಸಿರಲಿಲ್ಲ. ಸೋಂಕಿನಿಂದ ನಮಗೆ ಯಾವಾಗ ಮುಕ್ತಿ ಸಿಗುತ್ತದೆಯೋ ತಿಳಿದಿಲ್ಲ. ವೈರಸ್'ಗೆ ಲಸಿಕೆ ಬರುವವರೆಗೂ ನಾವೆಲ್ಲರೂ ಎರಡು ಗಡಗಳಷ್ಟು ದೂರ ಇರುವುದು, ಮಾಸ್ಕ್ ಧರಿಸುವುದನ್ನು ಮುಂದುವರೆಸಲೇಬೇಕಿದೆ ಎಂದು ತಿಳಿಸಿದ್ದಾರೆ. 

ಕೆಲಸದ ಶಕ್ಯಿ ಏನೆಂಬುದನ್ನು ನಿಮ್ಮೊಂದಿಗೆ ನಾನು ಅರಿತಿದ್ದೇನೆ. ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ ರೋಜರ್ ಅಭಿಯಾನ್ ಈ ಕೆಲಸದ ಶಕ್ತಿಯನ್ನೇ ಆಧರಿಸಿದೆ. ಈ ಶಕ್ತಿಯು ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜರ್ ಅಭಿಯಾನಕ್ಕೆ ಸ್ಫೂರ್ತಿ ನೀಡಿದೆ ಎಂದು ಅವರು ಹೇಳಿದ್ದಾರೆ. 

ಉತ್ತರಪ್ರದೇಶ ರಾಜ್ಯ ರೀತಿಯಲ್ಲಿಯೇ ಇತರೆ ರಾಜ್ಯಗಳೂ ಕೂಡ ಇದೇ ರೀತಿಯ ಯೋಜನೆಗಳನ್ನು ತರಲಿದೆ ಎಂಬ ವಿಶ್ವಾಸ ನನಗಿದೆ. ಈ ಕೊರೋನಾ ಬಿಕ್ಕಟ್ಟಿನಲ್ಲಿ ಉತ್ತರ ಪ್ರದೇಶ ರಾಜ್ಯ ಧೈರ್ಯ ಮತ್ತು ಮನೋಧರ್ಮವನ್ನು ತೋರಿದೆ. ಉತ್ತರಪ್ರದೇಶ ರಾಜ್ಯ ಸಾಕಷ್ಟು ಯಶಸ್ಸು ಸಾಧಿಸಿದ್ದು, ಕೊರೋನಾ ವಿರುದ್ಧ ಹೋರಾಡಿ ಪರಿಸ್ಥಿತಿಯನ್ನು ನಿಭಾಯಿಸಿದ ರೀತಿ ಅದ್ಭುತವಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Modi ma*****ch**: ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ ಅಶ್ಲೀಲ ನಿಂದನೆ, BJP ಕೆಂಡಾಮಂಡಲ!

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

SCROLL FOR NEXT