ಗಣೇಶ ವಿಗ್ರಹಗಳು 
ದೇಶ

ಗಣೇಶ ವಿಗ್ರಹಗಳು 4 ಅಡಿಗಿಂತ ಎತ್ತರವಾಗಿರಬಾರದು: ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಮುಂಬರುವ ಗಣೇಶ ಚತುರ್ಥಿ ವೇಳೆಯಲ್ಲಿ ಗಣೇಶ ಮಂಡಳಿಗಳು ಪ್ರತಿಷ್ಠಾಪಿಸುವ ವಿಗ್ರಹಗಳು ನಾಲ್ಕು ಅಡಿಗಿಂತ ಎತ್ತರವಾಗಿರಬಾರದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮುಂಬೈ: ಮುಂಬರುವ ಗಣೇಶ ಚತುರ್ಥಿ ವೇಳೆಯಲ್ಲಿ ಗಣೇಶ ಮಂಡಳಿಗಳು ಪ್ರತಿಷ್ಠಾಪಿಸುವ ವಿಗ್ರಹಗಳು ನಾಲ್ಕು ಅಡಿಗಿಂತ ಎತ್ತರವಾಗಿರಬಾರದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ವರ್ಷ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸದೆ ಸರಳವಾಗಿ ಆಚರಿಸಬೇಕೆಂದು ಸಾರ್ವಜನಿಕರು ಹಾಗೂ ಗಣೇಶ ಮಂಡಳಿಗಳಲ್ಲಿ ಉದ್ಧವ್ ಠಾಕ್ರೆ ಮುಂಚಿತವಾಗಿ ಮನವಿ ಮಾಡಿಕೊಂಡಿದ್ದಾರೆ. ಆಗಸ್ಟ್ 22 ರಂದು ಗಣೇಶ ಚತುರ್ಥಿ ಇದೆ. ಗಣೇಶ ವಿಗ್ರಹಗಳ ಪ್ರತಿಷ್ಠಾಪನೆಯಲ್ಲಿ  ಮುಂಬೈ ಹಿಂದಿನಿಂದಲೂ ಪ್ರಸಿದ್ಧಿಯಾಗಿದೆ. 

ನಂಬಿಕೆ ಹಾಗೂ ಭಕ್ತಿ ಎತ್ತರದ ವಿಗ್ರಹಗಳಿಗಿಂತಲೂ ಪ್ರಮುಖವಾದವು, ಕೊರೋನಾವೈರಸ್ ಸಂಸ್ಕತಿ ಮತ್ತು ಸಂಪ್ರದಾಯದ ಮೇಲೂ ಪರಿಣಾಮ ಬೀರಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಜನದಟ್ಟಣೆ ತಡೆಗಟ್ಟಲು ಎಲ್ಲಾ ಪೂಜಾ ಸ್ಥಳಗಳನ್ನು ಮುಚ್ಚಲಾಗಿದೆ. ಪುಣೆಯಲ್ಲಿ ಎತ್ತರದ ಗಣೇಶ ವಿಗ್ರಹ ಪ್ರತಿಷ್ಠಾಪಿಸದೆ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕಾಗಿದೆ.ಗಣೇಶ ಮಂಡಳಿಗಳ ಜೊತೆ ಮಾತನಾಡಿದ್ದು, ಶಿಸ್ತು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಅವರು ಒಕ್ಕೂರಲಿನಿಂದ ಹೇಳಿದ್ದಾರೆ ಎಂದು ಠಾಕ್ರೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT