ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ದೇಶ

ಎಲ್ಲ ಸಹಕಾರಿ ಬ್ಯಾಂಕುಗಳು ಆರ್‌ಬಿಐ ವ್ಯಾಪ್ತಿಗೆ: ಕೇಂದ್ರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ದೇಶದ ಎಲ್ಲ ಸಹಕಾರಿ ಬ್ಯಾಂಕುಗಳನ್ನೂ ಆರ್‌ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ.

ನವದೆಹಲಿ: ದೇಶದ ಎಲ್ಲ ಸಹಕಾರಿ ಬ್ಯಾಂಕುಗಳನ್ನೂ ಆರ್‌ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ.

ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಎಲ್ಲ ಸಹಕಾರಿ ಬ್ಯಾಂಕುಗಳು ಇನ್ನು ಮುಂದೆ ರಿಸರ್ವ್‌ ಬ್ಯಾಂಕ್‌ ಅಡಿಯಲ್ಲಿ ತರುವ ಕುರಿತು ಈ ಹಿಂದೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಕುರಿತಂತೆ ನಡೆದಿದ್ದ ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆದು ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಬಳಿಕ ಇದನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ  ಹಾಕಿದ್ದಾರೆ.

ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ – 2020 ಈ ವರ್ಷದ ಬಜೆಟ್‌ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಮುಂದಾಗಿತ್ತು. ಆದರೆ ಕೋವಿಡ್‌ 19ನಿಂದಾಗಿ ಅಧಿವೇಶನವನ್ನು ಮುಂದೂಡಿದ್ದರಿಂದ ಮಸೂದೆ ಪಾಸ್‌ ಆಗಿರಲಿಲ್ಲ. ಹೀಗಾಗಿ ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇರಿಸಿರುವ ಗ್ರಾಹಕರ ಹಿತವನ್ನು ಕಾಯಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿತ್ತು.

ಕಳೆದ ವರ್ಷ ಪಂಜಾಬ್ ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನಲ್ಲಿ ನಡೆದ ಅವ್ಯವಹಾರ ಬೆಳಕಿಗೆ ಬಂದ ನಂತರ ಗ್ರಾಹಕರ ಹಿತವನ್ನು ಸರ್ಕಾರ ಕಾಪಾಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಈ ವರ್ಷದ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವುರ ಆರ್‌ಬಿಐ ಅಡಿಯಲ್ಲಿ ಸಹಕಾರಿ ಬ್ಯಾಂಕುಗಳು ತರಲಾಗುವುದು ಎಂದು ತಿಳಿಸಿದ್ದರು. 

ಇತ್ತೀಚೆಗಷ್ಟೇ ಕರ್ನಾಟಕದಲ್ಲೂ ಇಂತಹುದೇ ಹಗರಣ ಕೇಳಿಬಂದಿತ್ತು. ಬೆಂಗಳೂರಿನ ಗುರು ರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ನಲ್ಲೂ ಇತ್ತೀಚೆಗೆ ಹಗರಣ ನಡೆದಿದ್ದು, ಆರ್‌ಬಿಐ ಈ ಬ್ಯಾಂಕ್‌ನ ವ್ಯವಹಾರದ ಮೇಲೆ ನಿರ್ಬಂಧಗಳನ್ನು ವಿಧಿಸಿ ತನಿಖೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!