ಶಿವಸೇನೆ 
ದೇಶ

ರಾಜಕೀಯ ಪೈಪೋಟಿಯನ್ನು ಮರೆತು ಚೀನಾವನ್ನು ಎದುರಿಸುವ ಸಮಯ ಬಂದಿದೆ: ಶಿವಸೇನೆ

ರಾಜಕೀಯ ಪಕ್ಷಗಳು ತಮ್ಮ ತಮ್ಮ ಪಕ್ಷಬೇಧವನ್ನು ಮರೆತು ಚೀನಾವನ್ನು ಎದುರಿಸುವ ವಿಷಯದ ಬಗ್ಗೆ ಮಾತನಾಡುವ ಸಮಯ ಈಗ ಬಂದಿದೆ ಎಂದು ಶಿವಸೇನೆ ಹೇಳಿದೆ.  

ಮುಂಬೈ: ರಾಜಕೀಯ ಪಕ್ಷಗಳು ತಮ್ಮ ತಮ್ಮ ಪಕ್ಷಬೇಧವನ್ನು ಮರೆತು ಚೀನಾವನ್ನು ಎದುರಿಸುವ ವಿಷಯದ ಬಗ್ಗೆ ಮಾತನಾಡುವ ಸಮಯ ಈಗ ಬಂದಿದೆ ಎಂದು ಶಿವಸೇನೆ ಹೇಳಿದೆ. 

ಚೀನಾದಿಂದ ಕಾಂಗ್ರೆಸ್ ಹಣ ಪಡೆಯುತ್ತಿದೆ ಎಂದು ಆರೋಪಿಸಿದ ಬಿಜೆಪಿ ಬಗ್ಗೆ ತನ್ನ ಮುಖವಾಣಿಯಾದ ಸಾಮ್ನಾ ದಲ್ಲಿ ಬರೆದಿರುವ ಶಿವಸೇನೆ "ಚೀನಾ ಗಲ್ವಾನ್  ಕಣಿವೆಯಲ್ಲಿ ಹೊಸ ಹೊಸ ನಿರ್ಮಾಣ ಕಾರ್ಯ ಪ್ರಾರಂಭಿಸಿದೆ. ಚೀನಾದ ಸೈನಿಕರು ಅರುಣಾಚಲ ಮತ್ತು ಸಿಕ್ಕಿಂ ಮೂಲಕ ಬರುತ್ತಿದ್ದಾರೆ. ಆದ್ದರಿಂದ ರಾಜಕೀಯ ಪೈಪೋಟಿ ಮರೆತು  ಒಂದುಗೂಡಿಸುವ ಸಮಯ ಇದಾಗಿದೆ. ರಾಜಕೀಯ ಪಕ್ಷಬೇಧ ಮರೆತು ನಾವೀಗ ಚೀನಾ ವಿರುದ್ಧ ಹೋರಾಡಬೇಕು, ಆ ಬಗ್ಗೆ ಮಾತನಾಡಬೇಕು" ಸಂಪಾದಕೀಯ ಬರಹದಲ್ಲಿ ಹೇಳಿದೆ.

ಚೀನಾದ ನೀತಿಯನ್ನು ವಿವರಿಸಿದ ಶಿವಸೇನೆ, "ಚೀನಾ ನಿರಂತರವಾಗಿ ಇಂತಹ ಕುತಂತ್ರ ನಡೆಸುತ್ತಿದ್ದು ಇದು ಭಾರತದ ತಲೆನೋವು ಹೆಚ್ಚುವಂತೆ ಮಾಡಿದೆ.ಏನನ್ನೋ ಹೇಳಿ ಇನ್ನೇನನ್ನೋ ಮಾಡುವುದು ಚೀನಾ ನೀತಿ. . ಚೀನಾವು ಯುದ್ಧವನ್ನು ಬಯಸುವುದಿಲ್ಲ ಆದರೆ ಯುದ್ಧವನ್ನು ಮಾಡುವಂತೆ ಭಾರತವನ್ನು ಪ್ರಚೋದಿಸುವುದು ಅವರ ನೀತಿ. ಅದಕ್ಕಾಗಿ ಗಡಿಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ.

"ಚೀನಾ ತನ್ನ ಸೈನ್ಯ ಮತ್ತು ವಾಹನಗಳನ್ನು ಗಲ್ವಾನ್ ಕಣಿವೆಯಿಂದ ಹಿಂತೆಗೆದುಕೊಳ್ಳಲು ಸಜ್ಜಾಗಿದೆ. ಆದರೆ ಅದೇ ಸಮಯದಲ್ಲಿ, ಚೀನಾದ ಸೈನ್ಯವು ಲಡಾಖ್‌ನ ಡೆಪ್ಸಾಂಗ್ ಸೆಕ್ಟರ್‌ನಲ್ಲಿ ಹೊಸ ಡೇರೆಗಳನ್ನು ಸ್ಥಾಪಿಸಿದೆ.  ಕ್ಯಾನನ್ ಮತ್ತು ಟ್ಯಾಂಕರ್ ಗಳನ್ನು ನಿಯೋಜಿಸಿದೆ. ಇದರರ್ಥ ಚೀನಾ ಹೊಸ ಜಾಗವನ್ನು ಒಳಗೆಳೆದುಕೊಳ್ಳಲು ಹವಣಿಸಿದೆ. ಅಲ್ಲದೆ ಅದು ನಮ್ಮ ಗಡಿಯಿಂದ ಹಿಂದೆ ಸರಿಯಲು ಸಿದ್ದವಿಲ್ಲ. ಚೀನಾ ಯುದ್ಧವನ್ನು ಬಯಸುವುದಿಲ್ಲ ಆದರೆ ಅದು ಭಾರತದ ಮೇಲೆ ಯುದ್ಧದ ಬೆದರಿಕೆಯನ್ನು ಒಡ್ಡುತ್ತಿದೆ" ಶಿವಸೇನೆ ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT