ಎಸ್ ಜೈಶಂಕರ್ 
ದೇಶ

ಇಂದು ವಿಶ್ವ ಕೋವಿಡ್-19 ಮತ್ತು ತಪ್ಪು ಮಾಹಿತಿಯ ದಾಳಿಗೆ ಒಳಗಾಗುತ್ತಿದೆ: ಎಸ್ ಜೈಶಂಕರ್

ಕೊರೋನಾ ಸೋಂಕಿನ ಸಮಸ್ಯೆ ಜೊತೆಗೆ ತಪ್ಪು ಮಾಹಿತಿ ಕೂಡ ಸೋಂಕಿನ ರೀತಿಯಲ್ಲಿ ರವಾನೆಯಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ನವದೆಹಲಿ: ಕೊರೋನಾ ಸೋಂಕಿನ ಸಮಸ್ಯೆ ಜೊತೆಗೆ ತಪ್ಪು ಮಾಹಿತಿ ಕೂಡ ಸೋಂಕಿನ ರೀತಿಯಲ್ಲಿ ರವಾನೆಯಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ವರ್ಚುವಲ್ ಸಚಿವರುಗಳ ಸಭೆಯಲ್ಲಿ ಮಾತನಾಡಿದ ಅವರು, ಇಂದು ರೂಪಾಂತರದ ಸಮಯದಲ್ಲಿ ನಾವಿದ್ದೇವೆ. ಕೊರೋನಾ ವೈರಾಣು ರೋಗ ಇಡೀ ಪ್ರಪಂಚದಲ್ಲಿ ಆರ್ಥಿಕ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರಿದೆ. 4 ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿರುವುದಲ್ಲದೆ ನಮ್ಮ ಬದುಕಿನ ರೀತಿ, ಕೆಲಸ, ಪ್ರಯಾಣ ಮತ್ತು ಸಂಬಂಧಪಟ್ಟ ಇತರ ವಿಷಯಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅಭಿಪ್ರಾಯಪಟ್ಟರು.

ಕೊರೋನಾ ವೈರಸ್ ನಮ್ಮ ಜೀವನ ವಿಧಾನವನ್ನು ಶಾಶ್ವತವಾಗಿ ಬದಲಿಸಿದೆ ಎಂದು ಹೇಳುವುದು ಈಗಲೇ ಕಷ್ಟವಾಗಬಹುದು. ಆದರೆ ಮಾನವೀಯತೆಯ ಸಹಜ ಸೌಕರ್ಯವನ್ನು ಕಡಿಮೆ ಮಾಡಿದೆ ಎಂದು ಜೈಶಂಕರ್ ಹೇಳಿದ್ದಾರೆ.

ಈ ಬದಲಾವಣೆಯ ಸನ್ನಿವೇಶನದಲ್ಲಿ ನಾವು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇದರರ್ಥ, ನಾವು ರಾಜಕೀಯವನ್ನು ಬದಿಗಿಟ್ಟು ಸತ್ಯಗಳತ್ತ ಗಮನ ಹರಿಸಬೇಕು-ಕೊರೋನಾ ವೈರಸ್ ಸಾಂಕ್ರಾಮಿಕದ ಕಾರಣಗಳು ಮತ್ತು ವಿವೇಚನೆಗಳನ್ನು ವಿಶ್ಲೇಷಿಸುವುದು ಒಂದು ಕಡೆಯಾದರೆ ಭವಿಷ್ಯದಲ್ಲಿ ಸಾಂಕ್ರಾಮಿಕ ರೋಗದ ಸಿದ್ಧತೆಗಳನ್ನು ಸುಧಾರಿಸಲು ನಮ್ಮ ಬಹುಪಕ್ಷೀಯ ಆರೋಗ್ಯ ಕಾರ್ಯವಿಧಾನಗಳು ಯಾವ ಬದಲಾವಣೆಗಳನ್ನು ಕಾರ್ಯಗತಗೊಳಿಸಬೇಕು ಎಂಬುದನ್ನು ನಿರ್ಣಯಿಸುವ ಸಮಯವಿದು ಎಂದು ಜೈಶಂಕರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT