ಅರವಿಂದ್ ಕೇಜ್ರಿವಾಲ್ 
ದೇಶ

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ದೆಹಲಿಯಲ್ಲಿ 'ಪ್ಲಾಸ್ಮಾ ಬ್ಯಾಂಕ್' ಸ್ಥಾಪನೆ: ಸಿಎಂ ಅರವಿಂದ್ ಕೇಜ್ರಿವಾಲ್

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ದೆಹಲಿ ಸರ್ಕಾರ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಲು ಮುಂದಾಗಿದೆ. ದೆಹಲಿಯ ಲಿವರ್ ಅಂಡ್ ಬಿಲಿಯರಿ ಸೈನ್ಸ್ ಸಂಸ್ಥೆಯಲ್ಲಿ ಪ್ಲಾಸ್ಮಾ ಬ್ಯಾಂಕ್ ಅಸ್ತಿತ್ವಕ್ಕೆ ಬರಲಿದೆ, ಪ್ಲಾಸ್ಮಾದ ಅಗತ್ಯವಿರುವವರು ವೈದ್ಯರಿಂದ ಶಿಫಾರಸು ಪಡೆದಿರಬೇಕು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ನವದೆಹಲಿ: ಕೋವಿಡ್-19 ರೋಗಿಗಳಿಗೆ ಪ್ಲಾಸ್ಮಾ ಸಂಗ್ರಹಣೆಗೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆಗೆ ಮುಂದಾಗಿದೆ.

ದೆಹಲಿಯ ಲಿವರ್ ಅಂಡ್ ಬಿಲಿಯರಿ ಸೈನ್ಸ್ ಸಂಸ್ಥೆಯಲ್ಲಿ(ILBS) ಪ್ಲಾಸ್ಮಾ ಬ್ಯಾಂಕ್ ಅಸ್ತಿತ್ವಕ್ಕೆ ಬರಲಿದೆ. ಪ್ಲಾಸ್ಮಾದ ಅಗತ್ಯವಿರುವವರು ವೈದ್ಯರಿಂದ ಶಿಫಾರಸು ಪಡೆದುಕೊಂಡು ಈ ಸಂಸ್ಥೆಯಿಂದ ಪಡೆಯಬಹುದು, ವೈದ್ಯರಿಂದ ಶಿಫಾರಸು ಪಡೆದುಕೊಂಡು ಬಂದ ರೋಗಿಗಗಳಿಗೆ ಮಾತ್ರ ಸಂಸ್ಥೆ ಪ್ಲಾಸ್ಮಾ ನೀಡಲು ಸಾಧ್ಯ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ ಸರ್ಕಾರ ಇದುವರೆಗೆ 29 ಕೊರೋನಾ ರೋಗಿಗಳ ಮೇಲೆ ಪ್ಲಾಸ್ಮಾ ಥೆರಪಿಯನ್ನು ಮಾಡಿದ್ದು ಫಲಿತಾಂಶ ಉತ್ತಮವಾಗಿದೆ. ಮುಂದಿನ ಎರಡು ದಿನಗಳಲ್ಲಿ ಪ್ಲಾಸ್ಮಾ ಬ್ಯಾಂಕ್ ಕಾರ್ಯನಿರ್ವಹಣೆ ಆರಂಭಿಸಲಿದೆ. ಕೋವಿಡ್-19ನಿಂದ ಗುಣಮುಖ ಹೊಂದಿರುವವರು ಪ್ಲಾಸ್ಮಾಗಳನ್ನು ಮುಂದೆ ಬಂದು ದಾನ ಮಾಡಿ, ನೀವು ಆತಂಕಪಡುವ ಅಗತ್ಯವಿಲ್ಲ, ಸರ್ಕಾರ ನಿಮ್ಮ ಪ್ರಯಾಣದ ಖರ್ಚನ್ನು ನೋಡಿಕೊಳ್ಳಲಿದೆ ಎಂದು ಕೇಳಿಕೊಳ್ಳುತ್ತೇನೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. 

ಪ್ಲಾಸ್ಮಾ ದಾನ ಮಾಡಲು ಇಚ್ಛಿಸುವ ಜನರಿಗೆ ದೆಹಲಿ ಸರ್ಕಾರ ಸಹಾಯವಾಣಿಯೊಂದನ್ನು ಆರಂಭಿಸಲಿದೆ. 200 ರೋಗಿಗಳ ಮೇಲೆ ಪ್ಲಾಸ್ಮಾ ಚಿಕಿತ್ಸೆ ನೀಡಲು ದೆಹಲಿ ಸರ್ಕಾರ ಇತ್ತೀಚೆಗಷ್ಟೆ ಅನುಮತಿ ಪಡೆದು ಅದನ್ನು ಲೋಕ ನಾಯಕ ಜೈಪ್ರಕಾಶ್ ಆಸ್ಪತ್ರೆ ಮತ್ತು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ವಿಸ್ತರಿಸಿದೆ. 

ಕೋವಿಡ್-19ನಿಂದ ಮೃತಪಟ್ಟ ಎಲ್ ಎನ್ ಜೆಪಿ ಡಾ ಅಸೀಮ್ ಗುಪ್ತ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಿ ಸಿಎಂ ಕೇಜ್ರಿವಾಲ್ ಘೋಷಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT