ಫಾರೂಕ್ ಅಬ್ದುಲ್ಲಾ 
ದೇಶ

ಜಮ್ಮು-ಕಾಶ್ಮೀರಕ್ಕೆ ಹೊಸ ನಿವಾಸತ್ವ ಕಾನೂನು ಅಸಂವಿಧಾನಿಕ ಮತ್ತು ಅಕ್ರಮ: ಫಾರೂಕ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದ ಹೊಸ ನಿವಾಸತ್ವ ಕಾನೂನು ಅಕ್ರಮ ಮತ್ತು ಅಸಂವಿಧಾನಿಕ, ಇದನ್ನು ಜಮ್ಮು-ಕಾಶ್ಮೀರದ ಜನತೆ ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಲೋಕಸಭಾ ಸದಸ್ಯ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹೊಸ ನಿವಾಸತ್ವ ಕಾನೂನು ಅಕ್ರಮ ಮತ್ತು ಅಸಂವಿಧಾನಿಕ, ಇದನ್ನು ಜಮ್ಮು-ಕಾಶ್ಮೀರದ ಜನತೆ ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಲೋಕಸಭಾ ಸದಸ್ಯ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಅಂಸವಿಧಾನಿಕ ಮತ್ತು ಅಕ್ರಮವಾಗಿರುವುದರ ವಿರುದ್ಧ ಯಾವುದೇ ಕ್ರಮ ಕೈಗೊಂಡರೂ ಅದನ್ನು ನಾವು ಜಮ್ಮು-ಕಾಶ್ಮೀರದ ಜನತೆ ಒಪ್ಪಲು ಸಾಧ್ಯವಿಲ್ಲ, ಒಟ್ಟಾಗಿ ನಿಂತು ಹೋರಾಡುತ್ತೇವೆ, ಸದ್ಯ ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಸರಿಯಾಗಿಲ್ಲ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ತೆಗೆದು ಹಾಕಿ ಕೇಂದ್ರಾಡಳಿತ ಪ್ರದೇಶವಾಗಿ ಮಾಡಿದ ನಂತರ ತರಲಾಗಿರುವ ಹೊಸ ವಾಸ ಕಾನೂನಿನ ಪ್ರಕಾರ 15 ವರ್ಷಗಳ ಕಾಲ ಜಮ್ಮು-ಕಾಶ್ಮೀರದಿಂದ ನೆಲೆಸಿರುವ ಶಾಶ್ವತರಹಿತ ನಿವಾಸಿಗಳು ಅಲ್ಲಿನ ವಾಸಿಗಳು ಎಂಬ ಪ್ರಮಾಣಪತ್ರ ಪಡೆಯಲು, ಸರ್ಕಾರದ ಇತರ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಸಂವಿಧಾನ ಪರಿಚ್ಛೇದ 370 ಮತ್ತು 35ಎ ಅಧಿಸೂಚನೆಯನ್ನು ರದ್ದುಗೊಳಿಸುವ ಮೊದಲು ಜಮ್ಮು-ಕಾಶ್ಮೀರದಲ್ಲಿ ಅಲ್ಲಿಯೇ ಹುಟ್ಟಿ ಬೆಳೆದ ಪ್ರಜೆಗಳು ಮಾತ್ರ ಭೂಮಿ ಖರೀದಿಸಬಹುದಾಗಿತ್ತು ಮತ್ತು ಸರ್ಕಾರಿ ನೌಕರಿ ಗಟ್ಟಿಸಿಕೊಳ್ಳಬಹುದಾಗಿತ್ತು. 

ಫಾರೂಕ್ ಅಬ್ದುಲ್ಲಾ ಇದರ ಜೊತೆಗೆ ಭಾರತ ಮತ್ತು ಚೀನಾ, ಭಾರತ ಮತ್ತು ಪಾಕಿಸ್ತಾನ ಮಧ್ಯೆ ಮಾತುಕತೆಗೆ ಸಹ ಒಲವು ತೋರಿಸಿದರು. ಭಾರತ-ಚೀನಾ ಮತ್ತು ಭಾರತ-ಪಾಕಿಸ್ತಾನ ಮಧ್ಯೆ ಮಾತುಕತೆಯೊಂದೇ ಪರಿಹಾರ, ಯುದ್ಧ ಅಲ್ಲ ಎಂದು ಅಭಿಪ್ರಾಯಪಟ್ಟರು.

ಶ್ರೀನಗರ ಕ್ಷೇತ್ರದ ಸಂಸದರಾಗಿರುವ ಫಾರೂಕ್ ಅಬ್ದುಲ್ಲಾ, ಕಳೆದ ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರ ಸಂವಿಧಾನ ಪರಿಚ್ಛೇದ 370 ರದ್ದುಗೊಳಿಸಿದ ನಂತರ ಅವರನ್ನು 8 ತಿಂಗಳ ಕಾಲ ಗೃಹ ಬಂಧನದಲ್ಲಿರಿಸಲಾಗಿತ್ತು, ಇತ್ತೀಚೆಗಷ್ಟೆ ಬಿಡುಗಡೆಗೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT